ಸೆಲ್ಫಿ ತೆಗೆಯಲು ಹೋಗಿ ಕಾಲುವೆಗೆ ಜಾರಿ ಬಿದ್ದು ಇಬ್ಬರು ವಿದ್ಯಾರ್ಥಿಗಳು ನೀರು ಪಾಲು

ರಾಯಚೂರು: ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕಾಲುವೆಗೆ ಬಿದ್ದು ಇಬ್ಬರು ವಿದ್ಯಾರ್ಥಿಗಳು ನೀರುಪಾಲದ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ರಾಯಚೂರು ತಾಲೂಕಿನ ಕಲ್ಮಲಾ ಬಳಿಯ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ರಾಯಚೂರು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಸುಜಿತ್(16) ಮತ್ತು ವೈಭವ (16) ಎಂದು ಗುರುತಿಸಲಾಗಿದೆ.
ಭಾನುವಾರ ಸಂಜೆ (ಸೆಪ್ಟೆಂಬರ್‌18) ಕಾಲುವೆಗೆ ಜಾರಿ ಬಿದ್ದು ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಇಂದು (ಸೋಮವಾರ) ಶವವಾಗಿ ಪತ್ತೆಯಾಗಿದ್ದಾರೆ.

ನಾಲ್ವರು ವಿದ್ಯಾರ್ಥಿಗಳು ಪಿಕ್‌ನಿಕ್‌ಗೆ ಪಿಕ್ನಿಕ್‍ಗಾಗಿ ಬಂದಿದ್ದ ವೇಳೆ ವಿದ್ಯಾರ್ಥಿಗಳು ಸೆಲ್ಫಿ ತೆಗೆದುಕೊಳ್ಳುವಾಗ ಕಾಲುವೆಗೆ ಬಿದ್ದಿದ್ದರು. ನಾಲ್ವರಲ್ಲಿ ನಾಗೇಂದ್ರ ಹಾಗೂ ತರುಣ್ ಈಜಿ ದಡ ಸೇರಿದ್ದರು. ಇನ್ನಿಬ್ಬರು ಕಾಲುವೆಯಲ್ಲಿ ಕೊಚ್ಚಿಕೊಂಡು ಹೋಗಿದ್ದರು. ವಿದ್ಯಾನಿಧಿ ಕಾಲೇಜಿನ ವಿದ್ಯಾರ್ಥಿಗಳು ಎನ್ನಲಾಗಿದೆ.
ಅಗ್ನಿಶಾಮಕ ಸಿಬ್ಬಂದಿ ನಾಗಪ್ಪ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಇನ್ನಿಬ್ಬರ ವಿದ್ಯಾರ್ಥಿಗಳು ಶವ ಹೊರತೆಗೆದಿದ್ದಾರೆ. ಮೃತದೇಹಗಳನ್ನು ರಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಈ ಬಗ್ಗೆ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement