ಬೆಂಗಳೂರು: ಪೇ – ಸಿಎಂ ಅಭಿಯಾನ ರಾಜ್ಯ ಮತ್ತು ನನ್ನ ಹೆಸರು ಕೆಡಿಸಲು ನಡೆಸಿರುವ ಷಡ್ಯಂತ್ರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.
ಬುಧವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಇದು ವ್ಯವಸ್ಥಿತವಾಗಿ ಕರ್ನಾಟಕ ರಾಜ್ಯ ಮತ್ತು ನನ್ನ ಹೆಸರು ಕೆಡಿಸಲು ಮಾಡಿರುವ ಷಡ್ಯಂತ್ರ. ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಬಗ್ಗೆ ಪ್ರಕರಣ ದಾಖಲು ಮಾಡಲು ಸೂಚಿಸಿದ್ದೇನೆ ಎಂದು ತಿಳಿಸಿದರು. ಆಧಾರ ರಹಿತವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಯಾನ ಮಾಡಲು ಎಲ್ಲರಿಗೂ ಬರುತ್ತದೆ. ಆದರೆ ಇದು ಸುಳ್ಳು ಎಂದು ಜನಕ್ಕೆ ತಿಳಿಯುತ್ತದೆ. ಇದಕ್ಕೆ ಯಾವ ಬೆಲೆಯೂ ಇಲ್ಲ. ಆದರೆ ರಾಜ್ಯದ ಹೆಸರು ಕೆಡಿಸುವ ಪ್ರಯತ್ನಕ್ಕೆ ಕಡಿವಾಣ ಹಾಕುವ ಪ್ರಯತ್ನ ನಮ್ಮದು ಎಂದು ಹೇಳಿದರು.
ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ QR ಕೋಡ್ ಜಟಾಪಟಿ ಶುರುವಾಗಿದ್ದು, 40% ಕಮಿಷನ್ ಆರೋಪ ಮುಂದಿಟ್ಟುಕೊಂಡು ಪೇ ಸಿಎಂ (Pay Cm Posters) ಎಂದು ಪೇಟಿಎಂ ಮಾದರಿಯಲ್ಲಿ ರಚಿಸಲಾಗಿರುವ ಪೋಸ್ಟರ್ ನಗರದ ಹಲವು ಕಡೆಗಳಲ್ಲಿ ಹಾಕಲಾಗಿತ್ತು. ಈ ಪೋಸ್ಟರ್ನ ಹಿಂದೆ ಕಾಂಗ್ರೆಸ್ ಇದೆ ಎಂದು ಬಿಜೆಪಿ ಆರೋಪಿಸಿದೆ.
ನಿಮ್ಮ ಕಾಮೆಂಟ್ ಬರೆಯಿರಿ