ರಾಜ್ಯದಲ್ಲಿ ಏಳು ಹೊಸ ವಿವಿ ಸ್ಥಾಪನೆಗಾಗಿ ಮಸೂದೆ ಅಂಗೀಕಾರ

ಬೆಂಗಳೂರು: ಹಾವೇರಿ, ಬಾಗಲಕೋಟೆ, ಕೊಪ್ಪಳ, ಬೀದರ್‌, ಕೊಡಗು, ಚಾಮರಾಜನಗರ ಹಾಗೂ ಹಾಸನ ವಿಶ್ವವಿದ್ಯಾಲಯಗಳ ಸ್ಥಾಪನೆಗಾಗಿ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ತಿದ್ದುಪಡಿ ಮಸೂದೆ 2022 ಕ್ಕೆ ವಿಧಾನಸಭೆಯಲ್ಲಿ ಬುಧವಾರ ಅಂಗೀಕಾರ ದೊರೆಯಿತು.
ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ ಅವರು ಮಸೂದೆ ಮಂಡಿಸಿ, ಏಳು ಜಿಲ್ಲೆಗಳ ಜಿಲ್ಲಾ ಕೇಂದ್ರಗಳಲ್ಲಿ ವಿಶ್ವವಿದ್ಯಾಲಯ ಸ್ಥಾಪಿಸಬೇಕು ಎಂಬ ಬೇಡಿಕೆ ಇತ್ತು. ಈ ಬಗ್ಗೆ ಬಜೆಟ್‌ನಲ್ಲೂ ಘೋಷಿಸಲಾಗಿತ್ತು. ಮುಂಬರುವ ದಿನಗಳಲ್ಲಿ ಬೇರೆ ಜಿಲ್ಲೆಗಳಲ್ಲೂ ವಿಶ್ವವಿದ್ಯಾಲಯ ಸ್ಥಾಪಿಸಲಾಗುವುದು. ಎಂದು ಹೇಳಿದರು.
ಪ್ರತಿಯೊಂದು ವಿಶ್ವವಿದ್ಯಾಲಯಕ್ಕೆ ತಲಾ ₹2 ಕೋಟಿಯಂತೆ ವಾರ್ಷಿಕ ಆವರ್ತಕ ವೆಚ್ಚ ವರ್ಷವೊಂದಕ್ಕೆ ₹14 ಕೋಟಿ ವೆಚ್ಚವಾಗುತ್ತದೆ ಎಂದು ಅವರು ಹೇಳಿದರು. ಮಂಡ್ಯದ ಸರ್ಕಾರಿ ಮಹಾವಿದ್ಯಾಲಯವನ್ನು (ಸ್ವಾಯತ್ತ) ಏಕೀಕೃತ ವಿಶ್ವವಿದ್ಯಾಲಯವೆಂದು 2019 ರಲ್ಲಿ ಮಾಡಲಾಗಿತ್ತು. ಈಗ ಮಸೂದೆಯ ಮೂಲಕ ಸ್ವತಂತ್ರ ವಿಶ್ವವಿದ್ಯಾಲಯವಾಗಿ ಬದಲಾವಣೆ ಮಾಡಲಾಗಿದೆ.

ರಾಜ್ಯದಲ್ಲಿನ ವಿವಿಗಳ ಕಾಯಕಲ್ಪಕ್ಕೆ ಹೊಸ ಕಾನೂನು ತರಲಾಗುವುದು. ವಿಶ್ವವಿದ್ಯಾಲಯ ಕಾಯ್ದೆ ಮಾಡಿ 22 ವರ್ಷಗಳು ಕಳೆದಿವೆ. ಹೀಗಾಗಿ ಅದನ್ನು ಬದಲಿಸಲು ಮಸೂದೆಯೊಂದನ್ನು ಮಂಡಿಸಲಾಗುವುದು. ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳು ಮತ್ತು ಸವಾಲುಗಳಿಗೆ ಅದರಲ್ಲಿ ಪರಿಹಾರ ಸಿಗುವ ರೀತಿಯಲ್ಲಿ ಅದನ್ನು ರಚಿಸಲಾಗುತ್ತಿದೆ. ಇದು ಸರ್ಕಾರಿ ಮತ್ತು ಖಾಸಗಿ ವಿಶ್ವವಿದ್ಯಾಲಯ ಎರಡಕ್ಕೂ ಅನ್ವಯಿಸುತ್ತದೆ ಎಂದು ಅವರು ಹೇಳಿದರು.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

ಹಲವು ವಿಧೇಯಕಗಳ ಮಂಡನೆ..
ಆಡಳಿತ ಮತ್ತು ಪ್ರತಿ ಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಪಗಳ ನಡುವೆ ಹಲವು ವಿಧೇಯಕಗಳನ್ನು ಮಂಡಿಸಲಾಯಿತು. ವಿಧಾನಸಭೆಯಲ್ಲಿ ಕಾಂಗ್ರೆಸ್ ಸಭಾತ್ಯಾಗದ ನಡುವೆಯೇ ಮತಾಂತರ ನಿಷೇಧ ತಿದ್ದುಪಡಿ ವಿಧೇಯಕವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಮಂಡಿಸಿದ್ದು ಅದಕ್ಕೆ ಅಂಗೀಕಾರ ದೊರಕಿದೆ. ಅಲ್ಲದೆ, ವಿಧಾನಪರಿಷತ್​ನಲ್ಲಿ ಗ್ರಾಮ ಸ್ವರಾಜ್ ಪಂಚಾಯತ್ ರಾಜ್ 2ನೇ ತಿದ್ದುಪಡಿ ವಿಧೇಯಕ ಅಂಗೀಕರಿಸಲಾಗಿದೆ.
2011 ರಲ್ಲಿ ತಿದ್ದುಪಡಿ ಮಾಡಿದ್ದ ಭೂಕಬಳಿಕೆ ನಿಷೇಧ ವಿಧೇಯಕವನ್ನು ಕಂದಾಯ ಸಚಿವ ಅಶೋಕ ಮಂಡಿಸಿದರು. ಕರ್ನಾಟಕ ರೇಷ್ಮೆಹುಳು ಬಿತ್ತನೆ, ರೇಷ್ಮೆಗೂಡು ಮತ್ತು ರೇಷ್ಮೆ ನೂಲು ತಿದ್ದುಪಡಿ ವಿಧೇಯಕ 2022 ಮಂಡನೆ ಮಾಡಲಾಗಿದೆ.

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement