ನವದೆಹಲಿ: ಟಾಟಾ ಸನ್ಸ್ನ ಮಾಜಿ ಅಧ್ಯಕ್ಷ ರತನ್ ಟಾಟಾ ಅವರು ಪ್ರಧಾನ ಮಂತ್ರಿಗಳ ನಾಗರಿಕ ಸಹಾಯ ಮತ್ತು ತುರ್ತು ಪರಿಸ್ಥಿತಿಗಳ ನಿಧಿಯ (PM-CARES) ಮೂರು ಹೊಸ ಟ್ರಸ್ಟಿಗಳಲ್ಲಿ ಒಬ್ಬರಾಗಿ ನೇಮಕವಾಗಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ಕೇಂದ್ರ ಗೃಹ ಸಚಿವರು ಮತ್ತು ಕೇಂದ್ರ ಹಣಕಾಸು ಸಚಿವರನ್ನು ಒಳಗೊಂಡ ಪಿಎಂ-ಕೇರ್ಸ್ ಟ್ರಸ್ಟಿಗಳ ಮಂಡಳಿಯ ಸಭೆಯ ಅಧ್ಯಕ್ಷತೆ ವಹಿಸಿದ್ದರು, ಜೊತೆಗೆ ಹೊಸದಾಗಿ ನಾಮನಿರ್ದೇಶನಗೊಂಡ ಸದಸ್ಯರಾದ ಸುಪ್ರೀಂ ಕೋರ್ಟ್ನ ಮಾಜಿ ನ್ಯಾಯಂೂರ್ತಿಗಳಾದ ಕೆ.ಟಿ. ಥಾಮಸ್, ಮಾಜಿ ಉಪ ಸ್ಪೀಕರ್ ಕರಿಯಾ ಮುಂಡಾ, ಮತ್ತು ರತನ್ ಟಾಟಾ ಈ ಮೂರು ಹೆಸರುಗಳನ್ನು PM ಕೇರ್ಸ್ಗೆ ಟ್ರಸ್ಟಿಗಳಾಗಿ ನಾಮನಿರ್ದೇಶನ ಮಾಡಲಾಗಿದೆ.
ಭಾರತದ ಮಾಜಿ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ರಾಜೀವ್ ಮೆಹ್ರಿಷಿ, ಇನ್ಫೋಸಿಸ್(Infosys) ಫೌಂಡೇಶನ್ನ ಮಾಜಿ ಅಧ್ಯಕ್ಷೆ ಸುಧಾ ಮೂರ್ತಿ ಮತ್ತು ಇಂಡಿಕಾರ್ಪ್ಸ್ ಮತ್ತು ಪಿರಮಲ್ ಫೌಂಡೇಶನ್ನ ಮಾಜಿ ಸಿಇಒ ಆನಂದ್ ಶಾ ಅವರನ್ನು ಪಿಎಂ ಕೇರ್ಸ್ ನಿಧಿಯ ಸಲಹಾ ಮಂಡಳಿಗೆ ನಾಮನಿರ್ದೇಶನ ಮಾಡಲಾಗಿದೆ.
ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಪಿಎಂ ಕೇರ್ಸ್ ಫಂಡ್ನ ಟ್ರಸ್ಟಿಗಳ ಮಂಡಳಿಯ ಸಭೆಯ ಬಳಿಕ ಈ ನಿರ್ಧಾರವನ್ನು ಪ್ರಕಟಿಸಲಾಗಿದೆ. ಹೊಸ ಟ್ರಸ್ಟಿಗಳು ಮತ್ತು ಸಲಹೆಗಾರರ ಭಾಗವಹಿಸುವಿಕೆಯು ‘ಪಿಎಂ ಕೇರ್ಸ್ ಫಂಡ್ನ ಕಾರ್ಯಚಟುವಟಿಕೆಗೆ ವ್ಯಾಪಕ ದೃಷ್ಟಿಕೋನಗಳನ್ನು’ ಒದಗಿಸುತ್ತದೆ ಎಂದು ತಿಳಿಸಲಾಗಿದೆ.
ಸಭೆಯಲ್ಲಿ, ನಿಧಿಗೆ ಪೂರ್ಣ ಹೃದಯದಿಂದ ಕೊಡುಗೆ ನೀಡಿದ ನಾಗರಿಕರನ್ನು ಪ್ರಧಾನಿ ಮೋದಿ ಶ್ಲಾಘಿಸಿದರು. ಮಕ್ಕಳಿಗಾಗಿ ಪಿಎಂ ಕೇರ್ಸ್ ಯೋಜನೆ ಸೇರಿದಂತೆ ಪಿಎಂ ಕೇರ್ಸ್ ನಿಧಿಯ ಸಹಾಯದಿಂದ ಕೈಗೊಂಡ ವಿವಿಧ ಕ್ರಮಗಳ ಪ್ರಸ್ತುತಿಯನ್ನು ಸಹ ಪ್ರದರ್ಶಿಸಲಾಯಿತು ಎಂದು ಅಧಿಕೃತ ಹೇಳಿಕೆಯೊಂದು ತಿಳಿಸಿದೆ.
ಪತ್ರಿಕಾ ಪ್ರಕಟಣೆಯ ಪ್ರಕಾರ, “ಪಿಎಂ ಕೇರ್ಸ್ ತುರ್ತು ಮತ್ತು ಸಂಕಷ್ಟದ ಸಂದರ್ಭಗಳಿಗೆ ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸುವ ದೊಡ್ಡ ದೃಷ್ಟಿಯನ್ನು ಹೊಂದಿದೆ, ಪರಿಹಾರ ಸಹಾಯದ ಮೂಲಕ ಮಾತ್ರವಲ್ಲದೆ, ತಗ್ಗಿಸುವ ಕ್ರಮಗಳು ಮತ್ತು ಸಾಮರ್ಥ್ಯವನ್ನು ಹೆಚ್ಚಿಸುವ ಮೂಲಕ” ಎಂದು ಚರ್ಚಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ