ಕರ್ನಾಟಕ ಭೂಕಬಳಿಕೆ ನಿಷೇಧ (ತಿದ್ದುಪಡಿ) ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ

ಬೆಂಗಳೂರು: ಸರ್ಕಾರಿ ಭೂಮಿಯನ್ನು ಕೃಷಿಗಾಗಿ ಬಳಕೆ ಮಾಡಿದ ರೈತರಿಗೆ ಭೂ ಕಬಳಿಕೆ ಅಧಿನಿಯಮದ ಅಡಿಯಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯುವ ಉದ್ದೇಶ ಹೊಂದಿರುವ ಕರ್ನಾಟಕ ಭೂ ಕಬಳಿಕೆ ನಿಷೇಧ (ತಿದ್ದುಪಡಿ) ವಿಧೇಯಕಯನ್ನು ಕೆಲವು ತಿದ್ದುಪಡಿಯೊಂದಿಗೆ ಗುರುವಾರ  ವಿಧಾನಸಭೆಯಲ್ಲಿ ಅಂಗೀಕಾರ ಪಡೆಯಲಾಯಿತು.
ಬುಧವಾರ ವಿಧೇಯಕವನ್ನು ಮಂಡಿಸಲಾಗಿತ್ತು. ಆದರೆ ವಿಧೇಯಕಕ್ಕೆ ವಿರೋಧ ವ್ಯಕ್ತವಾಗಿತ್ತು. ಆಡಳಿತ ಪಕ್ಷದ ಶಾಸಕ ಗೂಳಿಹಟ್ಟಿ ಶೇಖರಹಾಗೂ ಜೆಡಿಎಸ್ ಸದಸ್ಯ ಎಟಿ ರಾಮಸ್ವಾಮಿ ಸೇರಿದಂತೆ ವಿರೋಧ ವ್ಯಕ್ತಪಡಿಸಿದ್ದರು.

ಸರ್ಕಾರಿ ಭೂಮಿಯನ್ನು ಕೃಷಿಗಾಗಿ ಬಳಕೆ ಮಾಡಿದ ರೈತರಿಗೆ ಕಿರುಕುಳ ಆಗುತ್ತಿತ್ತು. ರೈತರಿಗೆ ಅನುಕೂಲ ಮಾಡಲು ತಿದ್ದುಪಡಿ ತರಲಾಗಿದೆ ಎಂದು ಹೇಳುತ್ತೀರಿ. ಆದರೆ ಈ ವಿಧೇಯಕದ ಅಗತ್ಯ ಇರಲಿಲ್ಲ. ರೈತರ ವಿರುದ್ಧ  ಕಂದಾಯ, ಅರಣ್ಯ ಇಲಾಖೆ.‌ ಸರ್ಕಾರದ ಇಲಾಖೆಗಳೇ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಿದೆ ಎಂದು ಎಟಿ ರಾಮಸ್ವಾಮಿ ಆಕ್ಷೇಪಿಸಿದ್ದರು.
ಪ್ರಭಾವಿಗಳು ಸುಳ್ಳು ದಾಖಲೆ ಸೃಷ್ಟಿ ಮಾಡಿ ಭೂಕಬಳಿಕೆ ಮಾಡುತ್ತಿದ್ದಾರೆ ಅವರು ಭೂಕಬಳಿಕೆದಾದರು, ರೈತರು ಒತ್ತುವರಿದಾರರು. ‌ಒತ್ತುವರಿದಾರರ ವಿವಾದ ಕೊನೆಗೊಳಿಸುವ ಹೆಸರಿನಲ್ಲಿ ಭೂಗಳ್ಳರಿಗೆ ಅನುಕೂಲ ಆಗಬಹುದು ಎಂದು ಆತಂಕ ವ್ಯಕ್ತಪಡಿಸಿದ್ದರು.
ಗೂಳಿ ಹಟ್ಟಿ ಶೇಖರ ಮಾತನಾಡಿ, ರೈತರ ಹಿತದೃಷ್ಟಿಯಿಂದ ವಿಧೇಯಕ ಸ್ವಾಗತ. ಆದರೆ ಸರ್ಕಾರಿ ಜಾಗಗಳನ್ನು ನಕಲಿ ದಾಖಲೆ ಸೃಷ್ಟಿಸಿ ಕಬಳಿಸಲಾಗುತ್ತಿದೆ. ವಿಧೇಯಕದಲ್ಲಿ ಇದಕ್ಕೆ ಪರಿಹಾರ ಏನಿದೆ ಎಂದು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ ಅವರು ಈ ವಿಧೇಯಕದಿಂದ ಭೂಗಳ್ಳರಿಗೆ ಅನುಕೂಲ ಆಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದರು. ಹೀಗಾಗಿ ಕೆಲವೊಂದು ತಿದ್ದುಪಡಿಯೊಂದಿಗೆ ವಿಧೇಯಕವನ್ನು ಮತ್ತೆ ಮಂಡಿಸಿ ಅಂಗೀಕಾರ ಪಡೆಯಲಾಯಿತು.

ಪ್ರಮುಖ ಸುದ್ದಿ :-   ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ ; ತಕ್ಷಣವೇ ಸಿಪಿಆರ್‌ ಮಾಡಿ ಜೀವ ಉಳಿಸಿದ ಮತದಾನ ಮಾಡಲು ಬಂದಿದ್ದ ವೈದ್ಯ

3.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement