ಸುಬ್ರಹ್ಮಣ್ಯ: ರಾಜ್ಯದ ಹೆಸರಾಂತ ದೇವಸ್ಥಾನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಸೇವೆಗಳಲ್ಲಿ ಒಂದಾದ ಸರ್ಪ ಸಂಸ್ಕಾರ ಸೇವಾ ದರ ಪರಿಷ್ಕರಿಸಲಾಗಿದೆ.
ಈಗ 4,200 ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ. ಮೊದಲಿದ್ದ ದರಕ್ಕಿಂತ ಒಂದು ಸಾವಿರ ರೂಪಾಯಿ ಹೆಚ್ಚಳ ಆಗಿದೆ. ಮೊದಲು 3,200 ರೂ.ಗಳಿತ್ತು. ರಾಜ್ಯ ಸರ್ಕಾರದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೊಳಪಡುವ ದೇವಳದಲ್ಲಿ ಸರ್ಪ ದೋಷ ನಿವಾರಣೆಗಾಗಿ ನಡೆಸುವ ಸರ್ಪ ಸಂಸ್ಕಾರ ಸೇವೆಯ ಸೇವಾ ದರವನ್ನು ಧಾರ್ಮಿಕ ದತ್ತಿ ಆಯುಕ್ತರ ಆದೇಶದಂತೆ ಪರಿಷ್ಕರಿಸಲಾಗಿದೆ. ಭಕ್ತರು ಸಹಕರಿಸಬೇಕಾಗಿ ದೇವಳದ ಪ್ರಕಟಣೆ ತಿಳಿಸಿದೆ.
ನಿಮ್ಮ ಕಾಮೆಂಟ್ ಬರೆಯಿರಿ