ಬೆಂಗಳೂರು: ಕರ್ನಾಟಕ ಕಾಂಗ್ರೆಸ್ನ ಪೇಸಿಎಂ ಪೋಸ್ಟರ್ಗಳಿಗೆ ತಮ್ಮ ಫೋಟೋವನ್ನು ಬಳಸಲಾಗಿದೆ ಎಂದು ಬೆಂಗಳೂರು ಮೂಲದ ನಟ ಅಖಿಲ್ ಅಯ್ಯರ್ ಫ್ಲ್ಯಾಗ್ ಮಾಡಿದ್ದಾರೆ. ಹಾಗೂ ತಮ್ಮ ಒಪ್ಪಿಗೆಯಿಲ್ಲದೆ ತಮ್ಮ ಫೋಟೋ ಬಳಸಲಾಗಿದೆ ಎಂದು ಹೇಳಿದ್ದಾರೆ. ಅಲ್ಲದೆ, ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಪೇಟಿಎಂ ಮಾದರಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಚಿತ್ರವಿರುವ ಪೇಸಿಎಂ ಪೋಸ್ಟರ್ಗಳನ್ನು ಹಾಕಲಾಗಿದೆ. ಪ್ರಸ್ತುತ ಬಿಜೆಪಿ ಆಡಳಿತದಲ್ಲಿ ಶೇಕಡಾ 40 ರಷ್ಟು ಕಮಿಷನ್ ದರವು ಹೇಗೆ ರೂಢಿಯಾಗಿದೆ ಎನ್ನುವುದನ್ನು ಎತ್ತಿ ತೋರಿಸಲು “40% ಸರ್ಕಾರ” ಎಂದು ಕಾಂಗ್ರೆಸ್ ಈ ಪೋಸ್ಟರ್ಗಳನ್ನು ವಿನ್ಯಾಸಗೊಳಿಸಿದೆ.
ಒಂದು ಪೋಸ್ಟರ್ನಲ್ಲಿ ಅಖಿಲ್ ಅಯ್ಯರ್ ಅವರ ಫೋಟೋವನ್ನು ಬಳಸಲಾಗಿದೆ ಮತ್ತು “ನೀವು ಇನ್ನೂ ನಿಶ್ಚೇಷ್ಟಿತರಾಗಿದ್ದೀರಾ?”, “40% ಸರ್ಕಾರರ ಹೊಟ್ಟೆಬಾಕತನವು 54,000 ಕ್ಕೂ ಹೆಚ್ಚು ಯುವಕರನ್ನು ವೃತ್ತಿಜೀವನವನ್ನು ಕಸಿದುಕೊಂಡಿದೆ” ಎಂಬ ಪದಗುಚ್ಛಗಳನ್ನು ಅದು ಹೊಂದಿದೆ.
ಈ ಬಗ್ಗೆ ಟ್ವಿಟರ್ನಲ್ಲಿ ನಟ ಅಖಿಲ್ ಅಯ್ಯರ್ ಅವರು ತಮ್ಮ ಚಿತ್ರದ “ಅಕ್ರಮ” ಬಳಕೆಯನ್ನು ಫ್ಲ್ಯಾಗ್ ಮಾಡಿದ್ದಾರೆ ಮತ್ತು “ನನ್ನ ಫೋಟೊವನ್ನು ಕಾನೂನುಬಾಹಿರವಾಗಿ ಮತ್ತು ನನ್ನ ಒಪ್ಪಿಗೆಯಿಲ್ಲದೆ “40% ಸರ್ಕಾರ” ಎಂಬ ಕಾಂಗ್ರೆಸ್ ಪ್ರಚಾರಕ್ಕಾಗಿ ಬಳಸುತ್ತಿರುವುದನ್ನು ನೋಡಿ ನನಗೆ ದಿಗಿಲಾಯಿತು ಎಂದು ಹೇಳಿದ್ದು, ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇನೆ ಎಂದು ಅವರು ಹೇಳಿದ್ದಾರೆ.
ಈ ಪೋಸ್ಟ್ನಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಅವರನ್ನು ಟ್ಯಾಗ್ ಮಾಡಿದ ಅವರು ಈ ವಿಷಯವನ್ನು ಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ