ಪರಿಶಿಷ್ಟರಿಗೆ ಮೀಸಲಾತಿ ಹೆಚ್ಚಳದ ಬಗ್ಗೆ ಚರ್ಚೆ : ವಾರದೊಳಗೆ ಸರ್ವಪಕ್ಷಗಳ ಸಭೆ ಕರೆಯುವೆ ಎಂದ ಬೊಮ್ಮಾಯಿ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಮಾಡು ಸಂಬಂಧ ನ್ಯಾಯಮೂರ್ತಿಗಳಾದ ನಾಗಮೋಹನದಾಸ  ವರದಿ  ಬಂದಿದ್ದು ಈ ಬಗ್ಗೆ ಚರ್ಚಿಸಿ ಸೂಕ್ತ ನಿರ್ಣಯ ತೆಗೆದುಕೊಳ್ಳಲು ಒಂದು ವಾರದೊಳಗೆ ಸರ್ವಪಕ್ಷಗಳ ಸಭೆ ಕರೆಯುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ವಿಧಾನಸಭೆಯಲ್ಲಿ ಶುಕ್ರವಾರ ಈ ಬಗ್ಗೆ ಹೇಳಿಕೆ ನೀಡಿದ ಅವರು, ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಪ್ರಮಾಣವನ್ನು ಶೇ 7ಕ್ಕೆ ಹೆಚ್ಚಿಸಬೇಕೆಂದು ಒತ್ತಾಯಿಸಿ 200 ದಿನಗಳಿಂದ ಧರಣಿ ನಡೆಸುತ್ತಿರುವ ವಾಲ್ಮೀಕಿ ಸ್ವಾಮೀಜಿಯವರು ಧರಣಿ ಕೈಬಿಡಬೇಕು ಎಂದು ಮನವಿ ಮಾಡಿದರು.

ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆಯ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರ ಜೊತೆ ಚರ್ಚಿಸಿ ಸಭೆಯ ದಿನಾಂಕ ನಿಗದಿ ಮಾಡಲಾಗುವುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ಸಮುದಾಯಗಳ ಭಾವನೆಗೆ ನಾವು ಸ್ಪಂದಿಸುತ್ತೇವೆ. ಕಾನೂನಾತ್ಮಕ ವಿಚಾರ ಇರುವುದರಿಂದ ಕಾನೂನು ತಜ್ಞರೂ ಈ ಸಭೆಯಲ್ಲಿ ಭಾಗವಹಿಲಿದ್ದಾರೆ ಎಂದು ಬೊಮ್ಮಾಯಿ ತಿಳಿಸಿದರು.

ಮುಖ್ಯಮಂತ್ರಿಯವರ ಪ್ರಸ್ತಾಪವನ್ನು ಬೆಂಬಲಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಈ ವಿಚಾರವಾಗಿ ಸರ್ವಪಕ್ಷಗಳ ಸಭೆ ನಡೆಸುವುದು ಸೂಕ್ತ. ಆದಷ್ಟು ಬೇಗ ಬಗ್ಗೆ ಚರ್ಚೆ ನಡೆಸಿ ನಿರ್ಣಯ ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಸರ್ಕಾರ ನಡೆಸುವ ಸರ್ವಪಕ್ಷಗಳ ಸಭೆಯಲ್ಲಿ ಭಾಗವಹಿಸುತ್ತೇವೆ. ಸ್ವಾಮೀಜಿಯವರು ಧರಣಿಯನ್ನು ಹಿಂದಕ್ಕೆ ಪಡೆಯಬೇಕು’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. ಧರಣಿ ಹಿಂದಕ್ಕೆ ಪಡೆಯುವಂತೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರೂ ಸ್ವಾಮೀಜಿಗೆ ಮನವಿ ಮಾಡಿದರು.

ಪ್ರಮುಖ ಸುದ್ದಿ :-   ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣ : ಪ್ರಮುಖ ಆರೋಪಿ ಬಂಧನ

1 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement