ಹಿರಿಯ ಪತ್ರಕರ್ತ ಅನಿಲ ದೇಶಪಾಂಡೆ ನಿಧನ

ಯಾದಗಿರಿ: ಯಾದಗಿರಿ ಜಿಲ್ಲೆಯ ಹಿರಿಯ ಪತ್ರಕರ್ತ ಅನೀಲ ದೇಶಪಾಂಡೆ ಗುರುವಾರ ರಾತ್ರಿ ನಿಧನ ಹೊಂದಿದ್ದಾರೆ .
ಕೆಲ ಕಾಲದಿಂದ ಅವರು ಅನಾರೊಗ್ಯಕ್ಕೆ ಒಳಗಾಗಿದ್ದರು. .
ಅನೀಲ ದೇಶಪಾಂಡೆ ಹೊಸ ದಿಗಂತ ಪತ್ರಿಕೆಯ ಯಾಗದಿರಿ ಜಿಲ್ಲಾ ವರದಿಗಾರಾಗಿ ಕಾರ್ಯನಿರ್ವಹಿಸುತ್ತಿದ್ದರು. ಯಾದಗಿರಿ ಜಿಲ್ಲೆಯ ಕ್ರಿಯಾಶೀಲ ವರದಿಗಾರರಾಗಿದ್ದ ಅನಿಲ ದೇಶಪಾಂಡೆ ಅನೇಕ ಜನಪರ ವರದಿಗಳ ಮೂಲಕ ಗುರುತಿಸಿಕೊಂಡಿದ್ದರು. ಸಂಯುಕ್ತ ಕರ್ನಾಟಕ ಪತ್ರಿಕೆ, ರಾಯಚೂರು ವಾಣಿ ಮೊದಲಾದ ಪತ್ರಿಕೆಗಳು ಸೇರಿದಂತೆ ಹಲವಾರು ಪತ್ರಿಕೆಗಳ ವರದಿಗಾರರಾಗಿ  ಅನೇಕ ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಕಳೆದ ನಲವತ್ತು ವರ್ಷಗಳಿಂದಲೂ ಅವರು ಪತ್ರಿಕಾ ರಂಗದಲ್ಲಿ ಸಕ್ರಿಯರಾಗಿದ್ದರು. ಇಳಿ ವಯಸ್ಸಿನಲ್ಲೂ ಚುರುಕಿನ ವರದಿಗಾರಿಕೆ ಮೂಲಕ ಜನರ ಮನ ಗೆದ್ದಿದ್ದರು.

4 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳ ಮಾರಾಮಾರಿ : ಚಾಕು ಇರಿತ

ನಿಮ್ಮ ಕಾಮೆಂಟ್ ಬರೆಯಿರಿ

advertisement