ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ‘ಪ್ರಭಾರ ಭತ್ಯೆ ಹೆಚ್ಚಳ’ ಮಾಡಿದ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ಜಾರಿಯಲ್ಲಿರುವಂತ ಪ್ರಭಾರ ಭತ್ಯೆಗಳನ್ನು (In-charge Allowance Rate) ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದೆ.
ಈ ಸಂಬಂಧ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡಾವಳಿಗಳನ್ನು ಹೊರಡಿಸಿದ್ದಾರೆ. ಸರ್ಕಾರಿ ನೌಕರರನ್ನು ಸ್ವತಂತ್ರ ಪ್ರಭಾರದಲ್ಲಾಗಲೀ ಅಥವಾ ತಮ್ಮ ಹುದ್ದೆಯ ಕರ್ತವ್ಯದ ಜೊತೆಗೆ ಮತ್ತೊಂದು ಹುದ್ದೆಯ ಹೆಚ್ಚಿನ ಪ್ರಭಾರ ನೀಡಿದಾಗ, ಆ ಹುದ್ದೆಯ ವೇತನ ಶ್ರೇಣಿಯ ಕನಿಷ್ಠ ಹಂತದಲ್ಲಿ ಮೂರು ತಿಂಗಳ ವರೆಗೆ ಶೇ.7.5 ದರದಲ್ಲಿ ಹಾಗೂ ಇದರ ನಂತರದ ಮೂರು ತಿಂಗಳಿಗಿಂತ ಹೆಚ್ಚಿನ ಅವಧಿಗೆ ಶೇ.15ರ ದರದಲ್ಲಿ ಪ್ರಭಾರ ಭತ್ಯೆ ನಿಗದಿಪಡಿಸಿ ಆದೇಶಿಸಲಾಗಿತ್ತು ಎಂದು ನಡಾವಳಿ ಹೇಳಿದೆ.
ಸರ್ಕಾರದ ಇಲಾಖೆಗಳಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇರುವುದರಿಂದ ಸುಗಮ ಆಡಳಿತಕ್ಕಾಗಿ ಹಲವಾರು ಸಿಬ್ಬಂದಿಯನ್ನು ಒಂದಕ್ಕಿತ ಹೆಚ್ಚಿನ ಹುದ್ದೆಗಳಲ್ಲಿ ಪ್ರಭಾರ, ಸಮವರ್ತಿ ಪ್ರಭಾರದ ಹೊಣೆ ನೀಡಲಾಗಿದೆ ಎಂದು ಹೇಳಿದೆ.

ಈ ಅಧಿಕಾರಿಗಳು ಹೆಚ್ಚಿನ ಕಾರ್ಯಭಾರದ ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುತ್ತಿರುತ್ತಾರೆ. ಈ ಅಧಿಕಾರಿ, ನೌಕರರುಗಳಿಗೆ ಪ್ರಭಾರ ಭತ್ಯೆ ಮಂಜೂರು ಮಾಡಲು ಹಾಲಿ ಅನುಸರಿಸುತ್ತಿರುವ ಕಾರ್ಯವಿಧಾನದ ಜಟಿಲತೆಯಿಂದಾಗಿ ಹಲವು ಸಂದರ್ಭಗಳಲ್ಲಿ ಪ್ರಭಾರ ಭತ್ಯೆ ಪಡೆಯುವುದು ಬಹಳ ಕಷ್ಟಕರವಾಗುತ್ತಿದೆ. ಇವೆಲ್ಲವನ್ನೂ ಪರಿಶೀಲಿಸಿ, ಈ ಕಾರ್ಯವಿಧಾನ ಸರಳಗೊಳಿಸುವ ನಿಟ್ಟಿನಲ್ಲಿ, ಪ್ರಸ್ತುತ ಎರಡು ಹಂತದಲ್ಲಿ ನೀಡುತ್ತಿರುವ ಪ್ರಭಾರ ಭತ್ಯೆಯನ್ನು ವಿಲೀನಗೊಳಿಸಿ, ಒಂದೇ ಹಂತದಲ್ಲಿ ನೀಡುವ ಬಗ್ಗೆ ಆದೇಶಿಸಲಾಗಿದೆ ಎಂದು ತಿಳಿಸಲಾಗಿದೆ.

ಪ್ರಮುಖ ಸುದ್ದಿ :-   ಚಾಮರಾಜನಗರ : ಇಂಡಿಗನತ್ತ ಮತಗಟ್ಟೆ ಮೇಲೆ ಕಲ್ಲು ತೂರಾಟ, ಗಲಾಟೆ, ಮತಯಂತ್ರಕ್ಕೆ ಹಾನಿ

ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಯ ನಿಯಮ 32 ಮತ್ತು 68ರಡಿಯಲ್ಲಿ ಸರ್ಕಾರಿ ಅಧಿಕಾರಿ, ನೌಕರರನ್ನು ಸ್ವತಂತ್ರ ಪ್ರಭಾರದಲ್ಲಿ ಅಥವಾ ತಮ್ಮ ಹುದ್ದೆಯ ಕರ್ತವ್ಯದ ಜೊತೆಗೆ ಬೇರೊಂದು ಹುದ್ದೆಯಲ್ಲಿ ಹೆಚ್ಚಿನ ಪ್ರಭಾರದಲ್ಲಿರಿಸಿದ್ದ ಸಂದರ್ಭದಲ್ಲಿ ಅಂತಹ ಪ್ರಭಾರದಲ್ಲಿರಿಸಿದ ಅಧಿಕಾರಿಯ ಮೂಲ ವೇತನದ ಶೇಕಡಾ 15ರ ದರದಲ್ಲಿ ಪ್ರಭಾರ ಭತ್ಯೆ ನಿಗದಿಪಡಿಸಿ ಆದೇಶಿಸಲಾಗಿದೆ.
ಪ್ರಭಾರ ಭತ್ಯೆಯನ್ನು ಪ್ರತಿ ಮಾಸಿಕ ವೇತನದ ಬಿಲ್ಲಿನೊಂದಿಗೆ ಪಾವತಿಸಬೇಕು. ಪ್ರಭಾರದಲ್ಲಿ ಇರಿಸಿದ ಹುದ್ದೆಗೆ ಸಂಬಂಧಪಟ್ಟ ಡಿಡಿಒ ಅಥವಾ ವರದಿ ಪ್ರಾಧಿಕಾರವು ಯಾವುದು ಉನ್ನತವೋ ಅಂತಹ ಅಧಿಕಾರಿಗೆ ಮಂಜೂರು ಮಾಡುವುದು ಎಂದು ಹೇಳಿದ್ದಾರೆ.
ಅಲ್ಲದೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ನೇಮಿಸಲಾದ ಇಲಾಖಾ ಮುಖ್ಯಸ್ಥರ ಹಂತದಲ್ಲಿನ ಪ್ರಭಾರದ ಸಂದರ್ಭದಲ್ಲಿ ಪ್ರಭಾರ ಭತ್ಯೆಯನ್ನು ಮಂಜೂರು ಮಾಡಲು, ಡ್ರಾ ಮಾಡಲು ಇಲಾಖೆ ಮುಖ್ಯಸ್ಥರು ಸಕ್ಷಮರಾಗಿರುತ್ತಾರೆ ಎಂದು ಹೇಳಿದೆ.
ಸಚಿವಾಲಯದ ಅಧಿಕಾರಿ, ಸಿಬ್ಬಂದಿಗೆ ಸಂದರ್ಭಾನುಸಾರ ಐಆರ್‌ಎಲ್‌ಎ ಶಾಖೆಗಳಿಂದ ಮಾಸಿಕ ವೇತನದ ಬಿಲ್ ಗಳೊಂದಿಗೆ ಪ್ರಭಾರ ಭತ್ಯೆಯನ್ನು ಸೆಳೆದು ಪಾವತಿಸಬೇಕು. ಪ್ರಭಾರ ಭತ್ಯೆಯ ಪರಿಷ್ಕೃತ ದರಗಳು ದಿನಾಂಕ 01-09-2022ರಿಂದ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement