ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ಗಳಿಕೆ ರಜೆ ಮೊತ್ತ ಪಾವತಿ

ಬೆಂಗಳೂರು : ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ಸಿಹಿ ಸುದ್ದಿ ನೀಡಿದ್ದು, ದಸರಾ ಹಬ್ಬದ ನಿಮಿತ್ತ ಅಕ್ಟೋಬರ್ 3 ರಂದು ಎಲ್ಲ ಅರ್ಹ ಸಿಬ್ಬಂದಿಗೆ ಗಳಿಕೆ ರಜೆ ನಗದೀಕರಣದ ಮೊತ್ತವನ್ನು ಪಾವತಿಸಲಾಗುತ್ತದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.
ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್, ಕೋವಿಡ್ ಕಾರಣದಿಂದಾಗಿ ನಿಗಮವು ಹಲವಾರು ಸಂಕಷ್ಟಗಳನ್ನು ಎದುರಿಸುತ್ತಿದ್ದರೂ ಸಹ ಸಿಬ್ಬಂದಿ ದಕ್ಷತೆಯ ಸೇವೆಯಿಂದ ಕಾರ್ಯಾಚರಣೆಯಲ್ಲಿ ಸ್ಥಿರತೆ ಸಾಧಿಸುವತ್ತ ಹಾಗೂ ಸಾರ್ವಜನಿಕರಿಗೆ ಸಮರ್ಪಕ ಸೇವೆ ಒದಗಿಸುವ ನಿಟ್ಟಿನಲ್ಲಿ ಮುನ್ನಡೆದಿದ್ದೇವೆ. ಕಳೆದೆರಡು ವರ್ಷಗಳಲ್ಲಿ ನಿಗಮದ ಕ್ಲಿಷ್ಟಕರವಾದ ಆರ್ಥಿಕ ಪರಿಸ್ಥಿತಿಯಿಂದಾಗಿ ಸಿಬ್ಬಂದಿಗಳಿಗೆ ಪಾವತಿಸಬೇಕಾಗಿದ್ದ ಗಳಿಕೆ ರಜೆ ನಗದೀಕರಣವನ್ನು ಪಾವತಿಸಲು ಸಾಧ್ಯವಾಗಿರಲಿಲ್ಲ.
ನಿಗಮದ ಆರ್ಥಿಕ ಪರಿಸ್ಥಿತಿ ಇನ್ನೂ ಚೇತರಿಕೆ ಹಂತದಲ್ಲಿದ್ದರೂ ಸಹ, ಈಗ ಸಿಬ್ಬಂದಿ ಹಾಗೂ ಕುಟುಂಬದವರು ನಾಡಹಬ್ಬ ದಸರಾದ ಸಡಗರ ಹೆಚ್ಚಿಸಲು ಅಕ್ಟೋಬರ್ 3ರಂದು 2021-22ನೇ ಸಾಲಿನ ಗಳಿಕೆ ರಜೆ ನಗದೀಕರಣದ ಮೊತ್ತವನ್ನು ನಿಗಮದ ಎಲ್ಲ ಅರ್ಹ ಸಿಬ್ಬಂದಿಗೆ ಪಾವತಿಸಲು ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement