ಭಾರತದ ಕ್ರಿಕೆಟ್‌ ತಂಡಕ್ಕೆ ಆಘಾತ: ಬೆನ್ನು ನೋವಿನ ಸಮಸ್ಯೆ, ಭಾರತದ ವೇಗಿ ಜಸ್ಪ್ರೀತ್ ಬುಮ್ರಾ ಟಿ20 ವಿಶ್ವಕಪ್‌ನಿಂದ ಹೊರಕ್ಕೆ

ನವದೆಹಲಿ: ಭಾರತದ ವೇಗಿ ಜಸ್ಪ್ರೀತ್ ಬುಮ್ರಾ ಅವರು ಅಕ್ಟೋಬರ್ 16 ರಿಂದ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಿಂದ ಹೊರಬಿದ್ದಿದ್ದಾರೆ.
ಬೆನ್ನು ನೋವಿನ ಕಾರಣ ಬುಮ್ರಾ ಈ ಹಿಂದೆ ಏಷ್ಯಾಕಪ್‌ನಿಂದ ಹೊರಗುಳಿದಿದ್ದರು. ಸೆಪ್ಟೆಂಬರ್ 25 ರಂದು ಅವರು ಆಸ್ಟ್ರೇಲಿಯಾ ವಿರುದ್ಧದ ಅಂತಿಮ T20 ಪಂದ್ಯದಲ್ಲಿ ನಾಲ್ಕು ಓವರ್‌ಗಳಲ್ಲಿ 50 ರನ್‌ಗಳನ್ನು ಬಿಟ್ಟುಕೊಟ್ಟಿದ್ದರು.
T20 ವಿಶ್ವಕಪ್‌ನಿಂದ ಬುಮ್ರಾ ಹೊರಗುಳಿಯುವುದು ಭಾರತ ತಂಡಕ್ಕೆ ಭಾರಿ ಹಿನ್ನಡೆಯಾಗಿದೆ. ಐಸಿಸಿ ಟಿ20 ವಿಶ್ವಕಪ್ ಅಕ್ಟೋಬರ್ 16ರಂದು ಆರಂಭವಾಗಲಿದ್ದು, 16 ದೇಶಗಳು ಭಾಗವಹಿಸಲಿವೆ.

ಬುಮ್ರಾ ಅವರ ಬದಲಿಗೆ ಸ್ಟ್ಯಾಂಡ್‌ಬೈನಲ್ಲಿರುವ ಇಬ್ಬರು ವೇಗದ ಬೌಲರ್‌ಗಳಲ್ಲಿ ಒಬ್ಬರಾದ ಮೊಹಮ್ಮದ್ ಶಮಿ ಅಥವಾ ದೀಪಕ್ ಚಹರ್ ಅಕ್ಟೋಬರ್ 16 ರಂದು ಆಸ್ಟ್ರೇಲಿಯಾದ ವಿಕ್ಟೋರಿಯಾದ ಗೀಲಾಂಗ್ ಕ್ರಿಕೆಟ್ ಮೈದಾನದಲ್ಲಿ ಪ್ರಾರಂಭವಾಗುವ ICC T20 ವಿಶ್ವಕಪ್‌ನಲ್ಲಿ ಆಡುವ ಅವಕಾಶವನ್ನು ಪಡೆಯುತ್ತಾರೆ.
ಬೆನ್ನುನೋವಿನ ಕಾರಣ ಬುಮ್ರಾ ಈ ಹಿಂದೆ ಏಷ್ಯಾಕಪ್‌ನಿಂದ ಹೊರಗುಳಿದಿದ್ದರು.
ಬುಮ್ರಾ ಟಿ20 ವಿಶ್ವಕಪ್‌ ಪಂದ್ಯವನ್ನು ಖಚಿತವಾಗಿ ಆಡುವುದಿಲ್ಲ. ಅವರಿಗೆ ಬೆನ್ನುಮೂಳೆಯ ಗಂಭೀರ ಸ್ಥಿತಿ ಇದೆ. ಅವರು ಆರು ತಿಂಗಳ ಅವಧಿಗೆ ಹೊರಗುಳಿಯಬಹುದು ”ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ʼಗೋವಾದ ಮೇಲೆ ಬಲವಂತವಾಗಿ ಭಾರತದ ಸಂವಿಧಾನದ ಹೇರಿಕೆ ; ಕಾಂಗ್ರೆಸ್ ಅಭ್ಯರ್ಥಿ ಹೇಳಿಕೆಯಿಂದ ಭುಗಿಲೆದ್ದ ವಿವಾದ : ದೇಶ ಒಡೆಯುವ ಹುನ್ನಾರ ಎಂದ ಪ್ರಧಾನಿ ಮೋದಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement