ಮರಳು ಗಣಿಗಾರಿಕೆಗಾಗಿ ಎರಡು ಗುಂಪುಗಳ ಘರ್ಷಣೆ, ನಾಲ್ವರ ಸಾವು; ಮೃತ ದೇಹಗಳನ್ನೂ ತಮ್ಮೊಂದಿಗೆ ಹೊತ್ತೊಯ್ದ ಗುಂಪುಗಳು..!

ಪಾಟ್ನಾ: ಪಾಟ್ನಾದ ಬಿಹ್ತಾ ಪ್ರದೇಶದಲ್ಲಿ ಬುಧವಾರ ರಾತ್ರಿ ಎರಡು ಗುಂಪುಗಳ ನಡುವೆ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ ನಾಲ್ವರು ಸಾವಿಗೀಡಾದ್ದಾರೆ ಎಂದು ವರದಿಯಾಗಿದೆ.
ಬಿಹ್ತಾ ಪೊಲೀಸ್ ಠಾಣಾ ವ್ಯಾಪ್ತಿಯ ಅಮೀನಾಬಾದ್ ಗ್ರಾಮದ ಸೋನೆ ನದಿ ದಂಡೆಯಲ್ಲಿ ಮರಳು ಗಣಿಗಾರಿಕೆ ವಿಚಾರವಾಗಿ ಘರ್ಷಣೆ ನಡೆದಿದೆ. ನಿರ್ಮಾಣ ಉದ್ದೇಶಗಳಿಗಾಗಿ ಸೋನೆ ನದಿಯ ಮರಳನ್ನು ಉತ್ತಮ ಗುಣಮಟ್ಟವೆಂದು ಪರಿಗಣಿಸಲಾಗಿದೆ. ಆದ್ದರಿಂದ, ಬಿಹಾರ ಮತ್ತು ಪೂರ್ವ ಉತ್ತರ ಪ್ರದೇಶದಲ್ಲಿ ದೊಡ್ಡ ಬೇಡಿಕೆಯಿಂದಾಗಿ ಅದರ ಬೆಲೆ ಹೆಚ್ಚಾಗಿರುತ್ತದೆ.

ಬುಧವಾರ ರಾತ್ರಿ 11:30ರ ಸುಮಾರಿಗೆ ಫೌಜಿ ಗುಂಪು ಮತ್ತು ಸಿಪಾಹಿ ಗುಂಪಿನ ನಡುವೆ ಘರ್ಷಣೆ ಆರಂಭವಾಯಿತು. ನಿರ್ದಿಷ್ಟ ಸ್ಥಳದಲ್ಲಿ ಮರಳು ಗಣಿಗಾರಿಕೆ ಕುರಿತು ಎರಡೂ ಕಡೆಯವರು ಪರಸ್ಪರ ಮಾತಿನ ಚಕಮಕಿಯಲ್ಲಿ ತೊಡಗಿದ್ದರು ಮತ್ತು ನಂತರ ಅದು ಹಿಂಸಾಚಾರಕ್ಕೆ ತಿರುಗಿತು. ಪರಸ್ಪರ ಗುಂಡು ಹಾರಿಸತೊಡಗಿದರು. ಈ ಗುಂಡಿನ ದಾಳಿಯಲ್ಲಿ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.
ರಾತ್ರಿಯಿಡೀ ಎರಡು ಗುಂಪುಗಳ ನಡುವೆ ಗುಂಡಿನ ಚಕಮಕಿ ಮುಂದುವರಿದಿದ್ದು, ಸ್ಥಳೀಯ ಪೊಲೀಸರು ಅಲ್ಲಿಗೆ ಹೋಗಿ ಶಾಂತಿ ಸ್ಥಾಪಿಸಲು ಧೈರ್ಯ ಮಾಡಲಿಲ್ಲ.
ಈ ಗುಂಪುಗಳು ಮೃತದೇಹಗಳನ್ನೂ ತಮ್ಮೊಂದಿಗೆ ತೆಗೆದುಕೊಂಡು ಹೋಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಮುಖ ಸುದ್ದಿ :-   'ಅಕ್ರಮ' ಐಪಿಎಲ್ ಸ್ಟ್ರೀಮಿಂಗ್ ಪ್ರಕರಣ : ಮಹಾರಾಷ್ಟ್ರ ಸೈಬರ್ ಪೊಲೀಸರಿಂದ ನಟಿ ತಮನ್ನಾ ಭಾಟಿಯಾಗೆ ಸಮನ್ಸ್

2 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement