ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆಯ ಮುನ್ಸೂಚನೆ

ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುತ್ತಿದೆ. ಇಂದಿನಿಂದ (ಸೆಪ್ಟೆಂಬರ್ 30) 4-5 ದಿನಗಳು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಗುಡುಗು ಸಹಿತ ಮಳೆ ಆಗಲಿದೆ. ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಬೀದರ, ಕೊಪ್ಪಳ, ಕಲಬುರಗಿ, ವಿಜಯಪುರ, ಯಾದಗಿರಿ, ಹಾವೇರಿ ಜಿಲ್ಲೆಗಳಲ್ಲಿ ಇನ್ನೆರಡು ದಿನ ಹಳದಿ ಅಲರ್ಟ್ (Yellow Alert) ನೀಡಲಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಹಲವೆಡೆ ಅಕ್ಟೋಬರ್‌ 2ರ ವರೆಗೂ ಮಳೆಯಾಗಬಹುದು. ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ತೀವ್ರತೆ ಹಾಗೂ ವೈಪರೀತ್ಯಗಳ ಪ್ರಭಾವದಿಂದ ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ತಿಳಿಸಲಾಗಿದೆ. ಬೆಂಗಳೂರು, ಬೆಳಗಾವಿ, ಹಾವೇರಿ, ಬಾಗಲಕೋಟೆ, ಗದಗ, ಯಾದಗಿರಿ, ಕೊಪ್ಪಳದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿಯಿಂದ ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಹಾಸನ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊ..| ಕುಮಟಾ : ಅಘನಾಶಿನಿ ನದಿಗೆ ಅಡ್ಡವಾಗಿ ನಿರ್ಮಾಣವಾಗುತ್ತಿದ್ದ ಸೇತುವೆಯ ಸ್ಲ್ಯಾಬ್‌ ಕುಸಿತ

 

 

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement