ತುಮಕೂರು: ಮಹಾನಗರ ಪಾಲಿಕೆ ಸಿಬ್ಬಂದಿಗೆ ಬ್ಲಾಕ್ ಮೇಲ್ ಮಾಡಿದ್ದ ಆರೋಪದ ಮೇರೆಗೆ ಬಿಗ್ ಬಾಸ್ ಖ್ಯಾತಿಯ ಮಂಜು ಪಾವಗಡ ಸಹೋದರ ಪ್ರದೀಪ ಎಂಬವನಿಗೆ ಗೂಸಾ ನೀಡಿದ್ದಾರೆ. ಇದಲ್ಲದೇ ಮಾನವ ಹಕ್ಕುಗಳ ಕಾರ್ಯಕರ್ತರು ಎಂದು ಹೇಳಿಕೊಂಡು ಬಂದಿದ್ದ ಯುವತಿಯರಿಗೂ ಸಾರ್ವಜನಿಕರು ಥಳಿಸಿದ್ದಾರೆ ಎಂದು ವರದಿಯಾಗಿದೆ.
ಪ್ರದೀಪ ವಾರಪತ್ರಿಕೆಯೊಂದರ ಸಂಪಾದಕನಾಗಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದಾನೆ. ಈತ ಸಬ್ಸಿಡಿ ಸಾಲ ಮಂಜೂರು ಮಾಡಿಕೊಡುವಂತೆ ನಗರ ಜೀವನೋಪಾಯ ಕೇಂದ್ರಕ್ಕೆ ಹೋಗಿದ್ದಾಗ ಲಂಚದಾಸೆ ತೋರಿಸಿ ವೀಡಿಯೋ ಮಾಡಿಕೊಂಡಿದ್ದ ಎಂದು ಹೇಳಲಾಗಿದೆ.
ಬಳಿಕ ಈ ವೀಡಿಯೋ ತೋರಿಸಿ ನಗರ ಜೀವನೋಪಾಯ ಕೇಂದ್ರದಲ್ಲಿ ಸಿಆರ್ಸಿ ಆಗಿ ಕೆಲಸ ಮಾಡುತ್ತಿದ್ದ ಯುವತಿಗೆ ನಿರಂತರ ಬ್ಲಾಕ್ ಮೇಲ್ ಮಾಡುತ್ತಿದ್ದ ಹಾಗೂ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಘಟನೆ ಕುರಿತು ನಿನ್ನೆ ಸಂಜೆ ಆ ಯುವತಿ ಕೆಲಸ ಮಾಡುವ ಜಾಗಕ್ಕೆ ಬಂದು ಬೆದರಿಕೆ ಹಾಕುತ್ತಿದ್ದಾಗ ಅಲ್ಲಿದ್ದವರು ಧರ್ಮದೇಟು ನೀಡಿದ್ದಾರೆ. ಅಷ್ಟೇ ಅಲ್ಲದೇ ಮಹಾನಗರ ಪಾಲಿಕೆ ಆವರಣದಲ್ಲಿ ಪ್ರದೀಪ್ನ ಜೊತೆ ಬಂದಿದ್ದ ನಕಲಿ ಪತ್ರಕರ್ತರು ಸೇರಿ ಹ್ಯೂಮನ್ ರೈಟ್ಸ್ ಎಂದು ಹೇಳಿಕೊಂಡು ಬಂದವರಿಗೂ ಏಟು ಬಿದ್ದಿದೆ. ಘಟನೆಗೆ ಸಂಬಂಧಿಸಿ ಬ್ಲಾಕ್ ಮೇಲ್ಗೆ ಮುಂದಾಗಿದ್ದ ನಾಲ್ವರು ತುಮಕೂರು ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ppp
manju nu oru soole maga, tamma kelabeka