ಗಾಯಕ ಸಿಧು ಮೂಸೆವಾಲಾ ಹತ್ಯೆ ಆರೋಪಿ ಪೊಲೀಸ್ ವಶದಿಂದ ಪರಾರಿ

ಚಂಡೀಗಡ: ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬ ಪೊಲೀಸರ ವಶದಿಂದ ತಪ್ಪಿಸಿಕೊಂಡಿದ್ದಾನೆ.
ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಶ್ನೋಯಿಯ ಬಂಟನಾಗಿರುವ ದೀಪಕ್ ಟಿನು ಎಂಬಾತ ಪಂಜಾಬ್‌ನ ಮನ್ಸಾ ಜಿಲ್ಲೆಯಲ್ಲಿ ಪೊಲೀಸರ ವಶದಿಂದ ಪರಾರಿಯಾಗಿದ್ದಾನೆ ಎಂದು ಅಧಿಕೃತ ಮೂಲಗಳು ಭಾನುವಾರ ತಿಳಿಸಿವೆ.
ಮನ್ಸಾ ಪೊಲೀಸರು ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ದೀಪಕನನ್ನು ಹಾಜರಾತಿ ವಾರಂಟ್ ಮೇರೆಗೆ ಶನಿವಾರ ರಾತ್ರಿ ಗೋಯಿಂದ್ವಾಲ್ ಸಾಹಿಬ್ ಜೈಲಿಗೆ ಕರೆತಂದಾಗ ಆತ ತಪ್ಪಿಸಿಕೊಂಡಿದ್ದಾನೆ ಎಂದು ವರದಿಯಾಗಿದೆ.ಕೇಂದ್ರ ತನಿಖಾ ಸಂಸ್ಥೆಯ (ಸಿಐಎ) ಸಿಬ್ಬಂದಿ, ದೀಪಕನನ್ನು ಕಪುರ್ತಲಾ ಜೈಲಿನಿಂದ ಮನ್ಸಾಗೆ ರಾತ್ರಿ 11 ಗಂಟೆ ಸುಮಾರಿಗೆ ತನ್ನ ಖಾಸಗಿ ವಾಹನದಲ್ಲಿ ಕರೆದೊಯ್ಯುತ್ತಿದ್ದಾಗ, ಆತ ತಪ್ಪಿಸಿಕೊಂಡಿದ್ದಾನೆ.

ಟಿನು, ಪಂಜಾಬಿ ಗಾಯಕ ಸಿಧು ಮೂಸೆವಾಲಾ ಕೊಲೆಯ ಮಾಸ್ಟರ್ ಮೈಂಡ್ ಆಗಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಶ್ನೋಯಿ ಸಹಚರ. ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಇನ್‌ಸ್ಪೆಕ್ಟರ್ ಜನರಲ್ ಮುಖ್ವಿಂದರ್ ಸಿಂಗ್ ಚಿನ್ನಾ, ಆತನ ಪತ್ತೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ. ಪೊಲೀಸ್ ಪಡೆಗಳು ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದು, ಶೀಘ್ರವೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.ಸಿಧು ಮೂಸೆವಾಲಾ ಹತ್ಯೆಯ ಆರೋಪಪಟ್ಟಿಯಲ್ಲಿ ನಮೂದಿಸಿರುವ 15 ಶೂಟರ್‌ಗಳು, ಮಾಸ್ಟರ್‌ಮೈಂಡ್‌ಗಳು ಮತ್ತು ಇತರರಲ್ಲಿ ಟಿನು ಹೆಸರು ಸೇರಿದೆ. ದೀಪಕ್ ಪೊಲೀಸರ ವಶದಿಂದ ಪರಾರಿಯಾಗಿರುವುದು ಇದು ನಾಲ್ಕನೇ ಸಲವಾಗಿದೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ : ಬಿಹಾರದಲ್ಲಿ ಎನ್‌ ಡಿ ಎ ಸೀಟು ಹಂಚಿಕೆ ಅಂತಿಮ ; ಈ ಬಾರಿ ಬಿಜೆಪಿಯೇ ದೊಡ್ಡಣ್ಣ...ಆ ಸ್ಥಾನ ಬಿಟ್ಟುಕೊಟ್ಟ ಜೆಡಿಯು...!

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement