ಉತ್ತರಾಖಂಡದ ದಂಡ-2 ಶಿಖರದಲ್ಲಿ ಭಾರೀ ಹಿಮಕುಸಿತ : 10 ಮಂದಿ ಸಾವು, 18 ಮಂದಿ ನಾಪತ್ತೆ

ಡೆಹ್ರಾಡೂನ್: ಉತ್ತರಾಖಂಡದ ದ್ರೌಪದಿಯ ದಂಡ-2 ಪರ್ವತದ ಶಿಖರದಲ್ಲಿ ಸಂಭವಿಸಿದ ಹಿಮಕುಸಿತದಲ್ಲಿ ಅನೇಕರು ಜನರು ಸಿಲುಕಿದ್ದು, ಒಟ್ಟು 10 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಅವರೆಲ್ಲರೂ ಉತ್ತರಕಾಶಿಯ ನೆಹರೂ ಇನ್‌ಸ್ಟಿಟ್ಯೂಟ್ ಆಫ್ ಮೌಂಟೇನಿಯರಿಂಗ್‌ನ 40 ಜನರ ಟ್ರೆಕ್ಕಿಂಗ್ ಗುಂಪಿನ ಭಾಗವಾಗಿದ್ದರು, ಇದರಲ್ಲಿ 33 ಪ್ರಶಿಕ್ಷಣಾರ್ಥಿಗಳು ಮತ್ತು ಏಳು ಬೋಧಕರು ಸೇರಿದ್ದರು. ಒಟ್ಟು 18 ಮಂದಿ ಇನ್ನೂ ನಾಪತ್ತೆಯಾಗಿದ್ದಾರೆ.
16,000 ಅಡಿ ಎತ್ತರದಲ್ಲಿ ಬೆಳಿಗ್ಗೆ 9 ಗಂಟೆಗೆ ತಂಡವಿದ್ದ ಪ್ರದೇಶವನ್ನು ಹಿಮಪಾತವು ಅಪ್ಪಳಿಸಿತು. ರಾಜ್ಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಂಡವನ್ನು ಪತ್ತೆಹಚ್ಚಲು ಮತ್ತು ಅವರನ್ನು ರಕ್ಷಿಸಲು ಸ್ಥಳಕ್ಕೆ ಧಾವಿಸಿದೆ.
ನೆಹರು ಇನ್‌ಸ್ಟಿಟ್ಯೂಟ್ ಆಫ್ ಮೌಂಟೇನಿಯರಿಂಗ್‌ನ ಪ್ರಾಂಶುಪಾಲರಾದ ಕರ್ನಲ್ ಬಿಶ್ಟ್ ಅವರ ಪ್ರಕಾರ, ಹಿಮಪಾತದ ನಂತರ ಸಿಕ್ಕಿಬಿದ್ದ 28 ಜನರಲ್ಲಿ 10 ಮೃತದೇಹಗಳನ್ನು ಇದುವರೆಗೆ ಪತ್ತೆಹಚ್ಚಲಾಗಿದೆ ಮತ್ತು 18 ಮಂದಿ ನಾಪತ್ತೆಯಾಗಿದ್ದಾರೆ.

ದ್ರೌಪದಿಯ ದಂಡ-2 ಪರ್ವತ ಶಿಖರದಲ್ಲಿ ಹಿಮಪಾತದಲ್ಲಿ ಸಿಲುಕಿರುವ ಪರ್ವತಾರೋಹಿಗಳನ್ನು ರಕ್ಷಿಸಲು ಜಿಲ್ಲಾಡಳಿತ, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಸೇನೆ ಮತ್ತು ಐಟಿಬಿಪಿ ಸಿಬ್ಬಂದಿ ಕ್ಷಿಪ್ರ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.
ದ್ರೌಪದಿಯ ದಂಡ-2 ಪರ್ವತ ಶಿಖರದಲ್ಲಿ ಹಿಮಕುಸಿತದಿಂದಾಗಿ, ಉತ್ತರಕಾಶಿಯ ನೆಹರು ಪರ್ವತಾರೋಹಣ ಸಂಸ್ಥೆಯ 28 ಪ್ರಶಿಕ್ಷಣಾರ್ಥಿಗಳು ಸಿಕ್ಕಿಬಿದ್ದಿದ್ದಾರೆ ಎಂದು ವರದಿಯಾಗಿದೆ. ಸೇನೆಯ ಸಹಾಯದಿಂದ ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತಗೊಳಿಸುವಂತೆ ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಅವರಿಗೆ ಮನವಿ ಮಾಡಿದ್ದೇನೆ. ಕೇಂದ್ರ ಸರ್ಕಾರದಿಂದ ಸಾಧ್ಯವಿರುವ ಎಲ್ಲ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಎಲ್ಲರನ್ನೂ ಸುರಕ್ಷಿತವಾಗಿ ಹೊರತರಲು ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಟ್ವೀಟ್ ಮಾಡಿದ್ದಾರೆ.
ಈ ಗುಂಪು ಸೆಪ್ಟೆಂಬರ್ 23 ರಂದು ಉತ್ತರಕಾಶಿಯಿಂದ ಆರೋಹಣಕ್ಕೆ ಹೊರಟಿತ್ತು.

ಪ್ರಮುಖ ಸುದ್ದಿ :-   ನಿಮ್ಮವನಾಗಿದ್ದೆ...ಯಾವಾಗಲೂ ನಿಮ್ಮವನಾಗಿಯೇ ಇರ್ತೇನೆ..: ಬಿಜೆಪಿ ಟಿಕೆಟ್ ನಿರಾಕರಣೆ ನಂತ್ರ ಪಿಲಿಭಿತ್‌ ಜನತೆಗೆ ʼಹೃದಯಸ್ಪರ್ಶಿʼ ಪತ್ರ ಬರೆದ ವರುಣ ಗಾಂಧಿ

3.7 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement