ಕಾರ್ತಿಕ ಮಾಸದಲ್ಲಿ ಕರ್ನಾಟಕಕ್ಕೆ ತೊಂದರೆ, ಮಳೆ ಮುಂದುವರಿಕೆ, ಮುಂದಿನ ಯುಗಾದಿ ವರೆಗೂ ವಿಷ ಜಂತುಗಳು ತಾಂಡವ: ಕೋಡಿಮಠ ಶ್ರೀಗಳ ಭವಿಷ್ಯ

ಧಾರವಾಡ: ಧಾರವಾಡ: ಕಾರ್ತಿಕ ಮಾಸದಲ್ಲಿ ತೊಂದರೆಯಾಗುವ ಲಕ್ಷಣವಿದೆ. ಮಳೆ, ರೋಗ, ಭೂಮಿಯಿಂದ ತೊಂದರೆಯಾಗುವ ಲಕ್ಷಣವಿದೆ,ಇನ್ನೂ ಒಂದು ವರ್ಷ ಕೊರೊನಾ ಇರುತ್ತದೆ, ಮಳೆ ಮುಂದುವರಿಯಲಿದೆ ಎಂದು ಕೋಡಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು,
ಮಳೆ, ಸಿಡಿಲು, ಬೆಂಕಿ ಕಾಟ, ಮತಾಂಧತೆ ಹೆಚ್ಚುತ್ತದೆ ಎಂದು ಈ ಸಂವತ್ಸರ ಪ್ರಾರಂಭದಲ್ಲಿಯೇ ನಾನು ಭವಿಷ್ಯ ಹೇಳಿದ್ದೆ. ಜನ ಅಶಾಂತಿಯಿಂದ ಇರುತ್ತಾರೆ. ಭೂಮಿ ಕುಸಿಯುತ್ತದೆ ಎಂದು ಹೇಳಿದ್ದೆ. ಇನ್ನು ಮುಂದೆಯೂ ಮಳೆ ಆಗುವ, ಭೂಮಿ ಕುಸಿಯುವ ಲಕ್ಷಣ ಇದೆ. ಎಂದು ಭವಿಷ್ಯ ನುಡಿದಿದ್ದಾರೆ.

ಕಾರ್ತಿಕ ಮಾಸದಲ್ಲಿ ತೊಂದರೆಯಾಗುವ ಲಕ್ಷಣವಿದೆ. ಮಳೆ, ರೋಗ, ಭೂಮಿಯಿಂದ ತೊಂದರೆಯಾಗಲಿದೆ. ಕಾಡಿನಿಂದ ಪ್ರಾಣಿಗಳು ನಾಡಿಗೆ ಬರುತ್ತವೆ. ವಿಷಜಂತುಗಳು ಹೊರಗೆ ಬಂದು ತೊಂದರೆ ಕೊಡುತ್ತವೆ. ಪ್ರಕೃತಿಯಿಂದ ತೊಂದರೆ ಆಗಲಿದೆ. ರಾಜ್ಯಕ್ಕೆ ಕಾರ್ಕಿಕ ಮಾಸದಲ್ಲಿ ತೊಂದರೆಯಾಗಲಿದೆ. ಬೆಂಕಿಯಿಂದ ಸಮಸ್ಯೆ ಆಗಲಿದೆ. ಮತಾಂಧತೆ, ಜಾತೀಯತೆ, ಆಕ್ರೋಶ ಹೆಚ್ಚಾಗುತ್ತದೆ ಎನ್ನುವ ಮೂಲಕ ಕಾರ್ತಿಕ ಮಾಸದಲ್ಲಿ ಗಂಡಾಂತರ ಎದುರಾಗಲಿದೆ ಎಂದು ಎಚ್ಚರಿಸಿದ್ದಾರೆ.

ಪ್ರಮುಖ ಸುದ್ದಿ :-   ಹುಕ್ಕಾ, ಹುಕ್ಕಾ ಬಾರ್‌ ನಿಷೇಧಿಸಿರುವ ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್‌

ಇನ್ನೊಂದು ವರ್ಷದಲ್ಲಿ ಕೊರೊನಾ ಹೋಗುತ್ತದೆ. ಹೋಗುವಾಗ ವಿಪರೀತ ಕ್ಷಾಮ, ದುಃಖ ಕೊಟ್ಟು ಹೋಗುತ್ತದೆ. ಇತಿಹಾಸದಲ್ಲಿಯೇ ಇಂಥ ಕಾಯಿಲೆ ಬಂದಿಲ್ಲ. ಕಷ್ಟ ಬಂದಾಗ ದೇವರು ಎನ್ನುತ್ತಾರೆ. ಮಠ, ಮಂದಿರಕ್ಕೆ ಹೋಗುತ್ತಾರೆ. ಜನವರಿ ವರೆಗೆ ಕೊರೊನಾ ಇರುತ್ತದೆ. ಇದಕ್ಕೆ ಮತ್ತೊಂದು ರೂಪದ ಲಕ್ಷಣಗಳು ಇವೆ. ಆದರೂ ಹೋಗುವಾಗ ಬಹಳ ಕಷ್ಟ ಕೊಡುತ್ತದೆ. ಈ ಸಂವತ್ಸರದಲ್ಲಿ ಶುಭ ಆಗುವುದು ಕಡಿಮೆ ಎಂದಿದ್ದೆ. ಗುಡ್ಡ ಕುಸಿತ, ಭೂಕಂಪ ಹೆಚ್ಚಾಗುವ ಲಕ್ಷಣ ಇದೆ. ದುಷ್ಟ ಪ್ರಾಣಿಗಳಿಂದ ಕಷ್ಟ ಇದೆ. ಹೊರಗಡೆ ಹೋಗುವಾಗ ಬೆತ್ತ ಹಿಡಿದುಕೊಂಡು ಹೋಗಬೇಕು. ಅಂಗಾಂಗ ಕಾಯಿಲೆಗಳು ಬರಲಿವೆ. ಆಶ್ವೀಜದಿಂದ ಯುಗಾದಿವರೆಗೆ ಅಂಗಾಂಗ ಕಾಯಿಲೆ ಹೆಚ್ಚಾಗುತ್ತವೆ ಎಂದು ಭವಿಷ್ಯ ನುಡಿದಿದ್ದಾರೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement