ಮಂಡ್ಯ: ಇಳಿ ವಯಸ್ಸಿನಲ್ಲಿಯೂ ಉತ್ಸಾಹ ಭರಿತವಾಗಿಯೇ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿರುವಂತ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಜೊತೆ ಭಾರತ್ ಜೋಡೋ ಯಾತ್ರೆಯಲ್ಲಿ ರನ್ನಿಂಗ್ ಮಾಡಿದ್ದಾರೆ…!
ಈ ದೃಶ್ಯಾವಳಿಯನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಟ್ವೀಟ್ ಮಾಡಿದೆ.ಜಗ್ಗದ, ಕುಗ್ಗದ ಉತ್ಸಾಹ ನಮ್ಮದು, ನುಗ್ಗುವುದೊಂದೇ ದ್ಯೇಯ ನಮ್ಮದು, ನಡೆದಷ್ಟೂ ನೂರ್ಮಡಿಯಾಗುತ್ತಿರುವ ಹುಮ್ಮಸ್ಸು, ದಿನದಿನಕ್ಕೂ ಹೆಚ್ಚುತ್ತಿರುವ ಹೊಸ ಹುರುಪು. ಯಾವ ಕ್ಷುದ್ರ ಶಕ್ತಿಗಳಿಂದಲೂ ನಮ್ಮನ್ನು ತಡೆಯಲು ಸಾಧ್ಯವಿಲ್ಲ. ಸಿದ್ಧರಾಮಯ್ಯ ಹಾಗೂ ರಾಹುಲ್ ಗಾಂಧಿ ಅವರ ಚೇತೋಹಾರಿ ದೃಶ್ಯವಿದು ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ನಲ್ಲಿ ಬರೆದಿದೆ.
ರೈತರ ಆದಾಯ ಡಬಲ್ ಮಾಡುತ್ತೇವೆ ಎಂದಿದ್ದ ಬಿಜೆಪಿ ಆಳ್ವಿಕೆಯಲ್ಲಿ ರೈತರ ಸಂಕಷ್ಟ ಡಬಲ್ ಆಗಿದೆ, ರೈತರ ಆತ್ಮಹತ್ಯೆ ಡಬಲ್ ಆಗಿದೆ, ರೈತರ ಖರ್ಚು ಡಬಲ್ ಆಗಿದೆ. ರೈತ ಮುಖಂಡರು, ಸಾಲಬಾಧೆ, ಬೆಳೆ ನಷ್ಟಗಳಿಂದ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬದವರೊಂದಿಗೆ ರಾಹುಲ್ ಗಾಂಧಿ ಅವರು ಸಂವಾದ ನಡೆಸಿ, ಅವರ ನೋವು ಆಲಿಸಿದ್ದಾರೆ ಎಂದು ಹೇಳಿದೆ.
ನಿಮ್ಮ ಕಾಮೆಂಟ್ ಬರೆಯಿರಿ