ಹುಬ್ಬಳ್ಳಿ: ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ಅವರು ಶುಕ್ರವಾರ (ಅಕ್ಟೋಬರ್ 7) ನಿಧನರಾಗಿದ್ದಾರೆ.
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಬ್ಬಾರ್ ಖಾನ್ ಹೊನ್ನಳ್ಳಿ ಅವರನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು, ಶುಕ್ರವಾರ ನಿಧನರಾದರು.
ಜಬ್ಬಾರ್ ಖಾನ್ ಹೊನ್ನಾಳಿ ಅವರು ಎಸ್.ಎಂ. ಕೃಷ್ಣ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಯುವಜನ ಮತ್ತು ಕ್ರೀಡಾ ಸಚಿವರಾಗಿದ್ದರು. ಪರಿಷತ್ ಸದಸ್ಯರಾಗಿ ವಿಧಾನಸಭೆ ಪ್ರವೇಶಿಸಿದ ಅವರು ನಂತರ 1999 ಹಾಗೂ 2007ರಲ್ಲಿ ಶಾಸಕರಾಗಿ ಆಯ್ಕೆಯಾದರು. 1996ರಿಂದ ಸುದೀರ್ಘ ಕಾಲದ ವರೆಗೆ ಹುಬ್ಬಳ್ಳಿಯ ಪ್ರತಿಷ್ಠಿತ ಅಂಜುಮನ್ ಸಂಸ್ಥೆಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಮೃತರ ಸಾವಿಗೆ ಅನೇಕ ರಾಜಕೀಯ ಮುಖಂಡರು ಕಂಬನಿ ಮಿಡಿದಿದ್ದಾರೆ
ನಿಮ್ಮ ಕಾಮೆಂಟ್ ಬರೆಯಿರಿ