ಸಮಾಜವಾದಿ ಪಕ್ಷದ ಸಂಸ್ಥಾಪಕ, ಹಿರಿಯ ರಾಜಕಾರಣಿ ಮುಲಾಯಂ ಸಿಂಗ್ ಯಾದವ್ ನಿಧನ

ನವದೆಹಲಿ: ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ (82) ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಆರೋಗ್ಯ ಸ್ಥಿತಿ ಗಂಭೀರವಾದ ಅವರಿಗೆ ಗುರುಗ್ರಾಮದ ಮೇದಾಂತ ಆಸ್ಪತ್ರೆಯ ಐಸಿಯುನಲ್ಲಿ ಹಲವು ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು, ಆದರೆ ಚಿಕಿತ್ಸೆ ಫಲಿಸದೆ ಅವರು ಸೋಮವಾರ ಬೆಳಿಗ್ಗೆ ನಿಧನರಾದರು.
ಮುಲಾಯಂ ಸಿಂಗ್‌ ನಿಧನದ ಸುದ್ದಿಯನ್ನು ಅವರ ಪುತ್ರ ಹಾಗೂ ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದ್‌ ಟ್ವಿಟರ್‌ನಲ್ಲಿ ಖಚಿತಪಡಿಸಿದ್ದಾರೆ.

ಮುಲಾಯಂ ಸಿಂಗ್ ಯಾದವ್ ಅವರು ತಮ್ಮ ನಿಯಮಿತ ವೈದ್ಯಕೀಯ ತಪಾಸಣೆ ಮತ್ತು ಪರೀಕ್ಷೆಗಳಿಗಾಗಿ ಆಗಸ್ಟ್ 22 ರಿಂದ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ವಾರ ಇದ್ದಕ್ಕಿದ್ದಂತೆ ಅವರ ಆರೋಗ್ಯ ಹದಗೆಟ್ಟ ನಂತರ ಅವರನ್ನು ಮೇದಾಂತ ಆಸ್ಪತ್ರೆಯ ಐಸಿಯುಗೆ ಸ್ಥಳಾಂತರಿಸಲಾಯಿತು.
ಶುಕ್ರವಾರ ಮುಂಜಾನೆ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್‌ ಅವರನ್ನು ಭೇಟಿಯಾಗಿದ್ದರು.
ಮುಲಾಯಂ ಸಿಂಗ್ ಯಾದವ್ ಅವರು ನವೆಂಬರ್ 22, 1939 ರಂದು ಜನಿಸಿದರು, ಅವರು ಸಮಾಜವಾದಿ ಪಕ್ಷದ ಮುಖ್ಯಸ್ಥರು ಹಾಗೂ ಸಂಸ್ಥಾಪಕರಾಗಿದ್ದರು. ಅವರು ಉತ್ತರ ಪ್ರದೇಶದ ಅಜಂಗಢ ಕ್ಷೇತ್ರದ ಲೋಕಸಭಾ ಸದಸ್ಯರಾಗಿದ್ದರು. ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದ ಮುಲಾಯಂ ಸಿಂಗ್ ಯಾದವ್ ಅವರು 1970 ರ ದಶಕದ ನಂತರ ಉತ್ತರ ಪ್ರದೇಶದ ರಾಜಕೀಯದಲ್ಲಿ ಏರಿದರು. ಅವರು 10 ಬಾರಿ ಶಾಸಕರಾಗಿ, 7 ಬಾರಿ ಲೋಕಸಭೆ ಸಂಸದರಾಗಿ ಆಯ್ಕೆಯಾಗಿದ್ದಾರೆ.

ಪ್ರಮುಖ ಸುದ್ದಿ :-   ಪಾಕಿಸ್ತಾನದ 19 ವರ್ಷದ ಹುಡುಗಿಗೆ ಹೊಸ ಜೀವನ ನೀಡಿದ 'ಭಾರತದ ಹೃದಯ' ....!

ಸಮಾಜವಾದಿ ನಾಯಕರಾಗಿ ಹೊರಹೊಮ್ಮಿದ ಮುಲಾಯಂ ಅವರು ಶೀಘ್ರದಲ್ಲೇ ಹಿಂದುಳಿದ ವರ್ಗಗಳ ನಾಯಕರಾಗಿ ತಮ್ಮನ್ನು ತಾವು ಸ್ಥಾಪಿಸಿಕೊಂಡರು. ಹಾಗೂ ಕಾಂಗ್ರೆಸ್‌ನಿಂದ ಖಾಲಿಯಾದ ರಾಜಕೀಯ ಜಾಗಕ್ಕೆ ಲಗ್ಗೆ ಇಟ್ಟರು. ಅವರು 1989 ರಲ್ಲಿ ಉತ್ತರ ಪ್ರದೇಶದ 15 ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಅಂದಿನಿಂದ ಕಾಂಗ್ರೆಸ್ ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೆ ಮರಳಲು ವಿಫಲವಾಯಿತು.

ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯದಿಂದಾಗಿ ಪಕ್ಷದ ವೇದಿಕೆಯಲ್ಲಿ ಅವರನ್ನು ಪ್ರಚಾರದಿಂದ ಹೊರಗುಳಿಯುವಂತೆ ಮಾಡಿದರೂ ಅವರನ್ನು ರಾಜಕೀಯದಲ್ಲಿ ಪ್ರಮುಖ ವ್ಯಕ್ತಿ ಪರಿಗಣಿಸಲಾಗಿತ್ತು.
ಸಮಾಜವಾದಿ ಪಕ್ಷದ ಬೆಂಬಲಿಗರು ಮತ್ತು ನಾಯಕರಿಂದ “ನೇತಾಜಿ” ಎಂದು ಜನಪ್ರಿಯವಾಗಿ ಕರೆಯಲ್ಪಡುವ ಮುಲಾಯಂ ಸಿಂಗ್‌ ಯಾದವ್ ಅವರು ದೇಶದ ರಕ್ಷಣಾ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದಾರೆ.
ಮಾಜಿ ಕುಸ್ತಿಪಟು ಉತ್ತರ ಪ್ರದೇಶದ ರಾಜಕೀಯದಲ್ಲಿ 1980 ರ ದಶಕದ ಉತ್ತರಾರ್ಧದಲ್ಲಿ ಮತ್ತು 1990 ರ ದಶಕದ ಆರಂಭದಲ್ಲಿ ಭಾರತದಲ್ಲಿ ಸಾಮಾಜಿಕವಾಗಿ ಅಥವಾ ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳನ್ನು ಗುರುತಿಸಲು ಸ್ಥಾಪಿಸಲಾದ ಮಂಡಲ್ ಆಯೋಗದ ಮೇಲಿನ ಪ್ರತಿಭಟನೆಗಳು ಮತ್ತು ಆಂದೋಲನಗಳು ಉತ್ತುಂಗದಲ್ಲಿದ್ದಾಗ ೆಲ್ಲರ ಗಮನ ಸೆಳೆದರು ಹಾಗೂ ನಂತರದಲ್ಲಿ ರಾಜಕೀಯವಾಗಿ ಉತ್ತುಂಗಕ್ಕೇರಿದರು.

1996ರಲ್ಲಿ, ಅವರು ಯುನೈಟೆಡ್ ಫ್ರಂಟ್ ಸರ್ಕಾರದಲ್ಲಿ ರಕ್ಷಣಾ ಸಚಿವರಾದರು. ನಂತರ, 1999 ರಲ್ಲಿ, ಕೇಂದ್ರದಲ್ಲಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದ ಪತನದ ನಂತರ, ಯಾದವ್ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯನ್ನು ಬೆಂಬಲಿಸದಿರಲು ನಿರ್ಧರಿಸಿದರು.
2012ರಲ್ಲಿ, ಸಮಾಜವಾದಿ ಪಕ್ಷವು ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೆ ಮರಳಿದಾಗ, ಅನಾರೋಗ್ಯದಿಂದ ಬಳಲುತ್ತಿದ್ದ ಮುಲಾಯಂ ಸಿಂಗ್ ಯಾದವ್ ಅವರು ತಮ್ಮ ಮಗ ಅಖಿಲೇಶ್‌ಗೆ ಅಧಿಕಾರದ ಚುಕ್ಕಾಣಿ ನೀಡಿದರು. ಆದಾಗ್ಯೂ, ಕುಟುಂಬದೊಳಗಿನ ಬಿರುಕುಗಳು ಹೆಚ್ಚಾಗುತ್ತಿದ್ದಂತೆ, ಅವರು 2016 ರಲ್ಲಿ ಉತ್ತರ ಪ್ರದೇಶದ ನಿರ್ಣಾಯಕ 2017 ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಅಖಿಲೇಶ್ ಅವರನ್ನು ಪಕ್ಷದಿಂದ ಹೊರಹಾಕಿದಾಗ ಅವರು ಎಲ್ಲರಿಗೂ ಆಘಾತ ನೀಡಿದರು. ನಂತರ ತಂದೆ-ಮಗ ಹೊಂದಾಣಿಕೆ ಮಾಡಿಕೊಂಡರು.

ಪ್ರಮುಖ ಸುದ್ದಿ :-   ಪಾಟ್ನಾ ರೈಲ್ವೆ ನಿಲ್ದಾಣದ ಸಮೀಪದ ಹೊಟೇಲ್‌ ನಲ್ಲಿ ಬೆಂಕಿ ಅವಘಡ : 6 ಮಂದಿ ಸಾವು

3 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement