ಕನ್ನಡ ಸಾಹಿತ್ಯ ಸಮ್ಮೇಳನ ಮತ್ತೆ ಮುಂದೂಡಿಕೆ: ಈಗ ಹಾವೇರಿಯಲ್ಲಿ ಜನವರಿ 6, 7, 8ಕ್ಕೆ ನಡೆಸಲು ನಿರ್ಧಾರ

ಬೆಂಗಳೂರು: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜನವರಿ 6, 7, 8ರಂದು ನಡೆಯಲಿದೆ.
ಮುಖ್ಯಮಂತ್ರಿ ಬೊಮ್ಮಾಯಿ ಜೊತೆ ಚರ್ಚೆ ನಡೆಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲಕುಮಾರ ಅವರು ಈಗ ದಿನಾಂಕ ಅಂತಿಮಗೊಳಿಸಿದ್ದಾರೆ. ಸಮ್ಮೇಳನಕ್ಕೆ 8 ರಿಂದ 10 ಲಕ್ಷ ಜನರು ಸೇರುವ ನಿರೀಕ್ಷೆ ಇದರುವುದರಿಂದ ಅಕ್ಟೋಬರ್‌ 20 ರಂದು ಈ ಕುರಿತು ಹಾವೇರಿಯಲ್ಲಿ ಪೂರ್ವಸಿದ್ಧತಾ ಸಭೆ ನಡೆಸಲು ನಿರ್ಧರಿಸಲಾಗಿದೆ.
ಸು ಈ ಹಿಂದೆ ನ. 11, 12, 13 ರಂದು ಸಮ್ಮೇಳನ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಸಮ್ಮೇಳನಕ್ಕೆ ಅಗತ್ಯ ಸಿದ್ಧತೆಯಾಗದ ಕಾರಣ ಮುಂದೂಡಲಾಗಿದೆ.
ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಜುಲೈನಲ್ಲಿ ನಡೆಸಿದ್ದ ಪೂರ್ವಭಾವಿ ಸಭೆಯಲ್ಲಿ ಸೆಪ್ಟೆಂಬರ್‌ 23, 24, 25ರಂದು ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿತ್ತು. ನಂತರ ನವೆಂಬರ್‌ 11, 12 ಮತ್ತು 13ರಂದು ಸಮ್ಮೇಳನ ನಡೆಸಲು ದಿನಾಂಕ ಮರು ನಿಗದಿಪಡಿಸಲಾಗಿತ್ತು. ಈಗ ಮತ್ತೆ ಮರುನಿಗದಿ ಪಡಿಸಿ ಜನವರಿ 6, 7, 8ರಂದು ನಡೆಸಲು ನಿರ್ಧರಿಸಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement