ದೆಹಲಿಯಲ್ಲಿ ಮಾಜಿ ಉಪಪ್ರಧಾನಿ ಅಡ್ವಾಣಿ ಭೇಟಿ ಮಾಡಿದ ಪೇಜಾವರ ಶ್ರೀಗಳು

ನವದೆಹಲಿ: ಅಯೋಧ್ಯಾ ಶ್ರೀರಾಮಮಂದಿರ ತೀರ್ಥಕ್ಷೇತ್ರ ಟ್ರಸ್ಟ್​​ನ ವಿಶ್ವಸ್ಥರೂ ಆಗಿರುವ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರು ಉತ್ತರ ಭಾರತ ಪ್ರವಾಸದಲ್ಲಿದ್ದು, ನವದೆಹಲಿಯಲ್ಲಿ ಮಾಜಿ ಉಪ ಪ್ರಧಾನಿ ಎಲ್​.ಕೆ.ಅಡ್ವಾಣಿ ಅವರನ್ನು ಬುಧವಾರ ಭೇಟಿಯಾಗಿದ್ದಾರೆ.
ಎಲ್​.ಕೆ. ಅಡ್ವಾಣಿ ಅವರನ್ನು ಅವರ ಮನೆಯಲ್ಲಿ ಭೇಟಿಯಾದ ಪೇಜಾವರ ಸ್ವಾಮೀಜಿ, ಶ್ರೀಕೃಷ್ಣನ ಪ್ರಸಾದ, ಸ್ಮರಣಿಕೆ, ಫಲಮಂತ್ರಾಕ್ಷತೆ ನೀಡಿ ಸ್ವಾಮೀಜಿಯವರು ಆಶೀರ್ವದಿಸಿದರು. ಈ ವೇಳೆ ಆಡ್ವಾಣಿ ಅವರ ಪುತ್ರಿ ಪ್ರತಿಭಾ ಆಡ್ವಾಣಿ ಕೂಡ ಉಪಸ್ಥಿತರಿದ್ದರು. ಶ್ರೀರಾಮಮಂದಿರ ನಿರ್ಮಾಣದ ಪ್ರಗತಿ ಕುರಿತು ಮಾಹಿತಿ ಹಂಚಿಕೊಂಡರು.

ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ನೀಡಿದ್ದ ಮಾರ್ಗದರ್ಶನ, ಒಡನಾಟ, ಉಡುಪಿ ಜತೆಗಿನ ನಂಟನ್ನು ಅಡ್ವಾಣಿಯವರು ಈ ಸಂದರ್ಭದಲ್ಲಿ ಸ್ಮರಿಸಿಕೊಂಡರು. ಪೇಜಾವರ ಸ್ವಾಮೀಜಿ ಅವರೂ ಶ್ರೀರಾಮಜನ್ಮಭೂಮಿ ಹೋರಾಟದಲ್ಲಿ ಆಡ್ವಾಣಿಯವರ ಮಹತ್ವದ ಪಾತ್ರವನ್ನು ನೆನಪಿಸಿಕೊಂಡರು.
ಸೋಮವಾರ ಬಿಜೆಪಿ ಹಿರಿಯ ನಾಯಕ ಡಾ. ಮುರಳಿಮನೋಹರ್ ಜೋಶಿ ಅವರನ್ನೂ ಭೇಟಿಯಾಗಿ ಪೇಜಾವರ ಶ್ರೀಗಳು ಭೇಟಿಯಾಗಿ ಶ್ರೀರಾಮಮಂದಿರ ನಿರ್ಮಾಣ ಕುರಿತು ಚರ್ಚಿಸಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement