ನವದೆಹಲಿ: ಅಯೋಧ್ಯಾ ಶ್ರೀರಾಮಮಂದಿರ ತೀರ್ಥಕ್ಷೇತ್ರ ಟ್ರಸ್ಟ್ನ ವಿಶ್ವಸ್ಥರೂ ಆಗಿರುವ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರು ಉತ್ತರ ಭಾರತ ಪ್ರವಾಸದಲ್ಲಿದ್ದು, ನವದೆಹಲಿಯಲ್ಲಿ ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಅವರನ್ನು ಬುಧವಾರ ಭೇಟಿಯಾಗಿದ್ದಾರೆ.
ಎಲ್.ಕೆ. ಅಡ್ವಾಣಿ ಅವರನ್ನು ಅವರ ಮನೆಯಲ್ಲಿ ಭೇಟಿಯಾದ ಪೇಜಾವರ ಸ್ವಾಮೀಜಿ, ಶ್ರೀಕೃಷ್ಣನ ಪ್ರಸಾದ, ಸ್ಮರಣಿಕೆ, ಫಲಮಂತ್ರಾಕ್ಷತೆ ನೀಡಿ ಸ್ವಾಮೀಜಿಯವರು ಆಶೀರ್ವದಿಸಿದರು. ಈ ವೇಳೆ ಆಡ್ವಾಣಿ ಅವರ ಪುತ್ರಿ ಪ್ರತಿಭಾ ಆಡ್ವಾಣಿ ಕೂಡ ಉಪಸ್ಥಿತರಿದ್ದರು. ಶ್ರೀರಾಮಮಂದಿರ ನಿರ್ಮಾಣದ ಪ್ರಗತಿ ಕುರಿತು ಮಾಹಿತಿ ಹಂಚಿಕೊಂಡರು.
ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ನೀಡಿದ್ದ ಮಾರ್ಗದರ್ಶನ, ಒಡನಾಟ, ಉಡುಪಿ ಜತೆಗಿನ ನಂಟನ್ನು ಅಡ್ವಾಣಿಯವರು ಈ ಸಂದರ್ಭದಲ್ಲಿ ಸ್ಮರಿಸಿಕೊಂಡರು. ಪೇಜಾವರ ಸ್ವಾಮೀಜಿ ಅವರೂ ಶ್ರೀರಾಮಜನ್ಮಭೂಮಿ ಹೋರಾಟದಲ್ಲಿ ಆಡ್ವಾಣಿಯವರ ಮಹತ್ವದ ಪಾತ್ರವನ್ನು ನೆನಪಿಸಿಕೊಂಡರು.
ಸೋಮವಾರ ಬಿಜೆಪಿ ಹಿರಿಯ ನಾಯಕ ಡಾ. ಮುರಳಿಮನೋಹರ್ ಜೋಶಿ ಅವರನ್ನೂ ಭೇಟಿಯಾಗಿ ಪೇಜಾವರ ಶ್ರೀಗಳು ಭೇಟಿಯಾಗಿ ಶ್ರೀರಾಮಮಂದಿರ ನಿರ್ಮಾಣ ಕುರಿತು ಚರ್ಚಿಸಿದರು.
ನಿಮ್ಮ ಕಾಮೆಂಟ್ ಬರೆಯಿರಿ