ಪ್ರಯಾಣಿಕರ ಗಮನಕ್ಕೆ…ದೀಪಾವಳಿ ಹಬ್ಬಕ್ಕೆ ಕೆಎಸ್ಆರ್‌ಟಿಸಿಯಿಂದ 1500 ಹೆಚ್ಚುವರಿ ಬಸ್ ಸಂಚಾರ

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಆರ್‌ಟಿಸಿಯಿಂದ 1500 ಹೆಚ್ಚುವರಿ ವಿಶೇಷ ಸಾರಿಗೆ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.
ಈ ಕುರಿತು ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅಕ್ಟೋಬರ್‌ 24ರಂದು ನರಕ ಚತುರ್ದಶಿ ಹಾಗೂ 26 ರಂದು ಬಲಿಪಾಡ್ಯಮಿ ಹಬ್ಬದ ಪ್ರಯುಕ್ತ ಕೆಎಸ್ಆರ್‌ಟಿಸಿಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್‌ 21ರಿಂದ 23 ರ ವರೆಗೆ ಬೆಂಗಳೂರಿನಿಂದ ಬೇರೆ ಸ್ಥಳಗಳಿಗೆ ತೆರಳಲು 1500 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ಹಾಗೂ ಬೇರೆಬೇರೆ ಸ್ಥಳಗಳಿಂದ ಬೆಂಗಳೂರಿಗೆ ತಲುಪಲು ಅಕ್ಟೋಬರ್‌ 26ರಿಂದ 30ರ ವರೆಗೆ ಮತ್ತೆ ವಿಶೇಷ ಕಾರ್ಯಾಚರಣೆ ನಡೆಸಲಿದೆ ಎಂದು ತಿಳಿಸಿದೆ.
ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಹೆಚ್ಚುವರಿ ಬಸ್‌ಗಳು ಹೊರಡಲಿವೆ..

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಹೋಗುವ ಬಸ್‌ಗಳು ಹೊರಡಲಿವೆ.
ತಮಿಳುನಾಡು ಮತ್ತು ಕೇರಳದ ಮಧುರೈ, ಕುಂಬಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು ಎಂದು ತಿಉಳಿಸಲಾಗಿದೆ.
ಬೆಂಗಳೂರು ನಗರದ ವಿಜಯನಗರ, ಜಯನಗರ 4ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್(ರಾಜಾಜಿನಗರ), ಮಲ್ಲೇಶ್ವರಂ 18ನೇ ಅಡ್ಡ ರಸ್ತೆ, ಬನಶಂಕರಿ, ಜೀವನ ಭೀಮಾನಗರ, ಐಟಿಐ ಗೇಟ್, ಗಂಗಾನಗರ, ಕೆಂಗೇರಿ ಉಪನಗರ ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ಶಿವಮೊಗ್ಗ, ದಾವಣಗೆರೆ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೇಸುಬ್ರಮಣ್ಯ, ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೆ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುತ್ತದೆ.

ಪ್ರಮುಖ ಸುದ್ದಿ :-   ನ್ಯಾಯಾಲಯದ ನಿರ್ದೇಶನ ಪಾಲಿಸಲು ನಿರ್ಲಕ್ಷ್ಯ: ರಾಜ್ಯ ಸರ್ಕಾರದ 41 ಇಲಾಖೆಗಳಿಗೆ ಹೈಕೋರ್ಟ್‌ ನೋಟಿಸ್‌

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯ ಕಲ್ಪಿಸಲಾಗಿದ್ದು, ಇ-ಟಿಕೇಟ್ ಬುಕಿಂಗ್‍ನ್ನು https://ksrtc.karnataka.gov.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೆಟ್‌ ಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‍ಅಪ್ ಪಾಯಿಂಟ್‍ನ ಹೆಸರನ್ನು ಗಮನಿಸಲು ಕೋರಲಾಗಿದೆ.ಸಾರ್ವಜನಿಕರ ರಾಜ್ಯ ಹಾಗೂ ಹೊರರಾಜ್ಯಗಳಲ್ಲಿ ಇರುವ 691 ಗಣಕೀಕೃತ ಬುಕ್ಕಿಂಗ್ ಕೌಂಟರ್‌ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದು ಎಂದು ತಿಳಿಸಲಾಗಿದೆ.
ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ಹಾಗೂ ಹೋಗುವ ಮತ್ತು ಹಿಂದಿರುಗುವ ಪ್ರಯಾಣದ ಟಿಕೆಟ್‍ನ್ನು ಒಟ್ಟಿಗೆ ಕಾಯ್ದಿರಿಸಿದರೆ ಬರುವ ಪ್ರಯಾಣ ದರದಲ್ಲಿ 10% ರಷ್ಟು ರಿಯಾಯಿತಿ ನೀಡಲಾಗುತ್ತದೆ.
ಹೆಚ್ಚುವರಿ ಸಾರಿಗೆಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳ ಮಾಹಿತಿಗೆ ಆನ್ಲೈನ್‌ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್‍ಸೈಟ್‍ನಲ್ಲಿ ನೋಡಬಹುದಾಗಿದೆ. ಹಾಗೂ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಟಿಕೆಟ್‌ಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗುತ್ತದೆ.

ಪ್ರಮುಖ ಸುದ್ದಿ :-   ೯೦ ವರ್ಷಗಳಿಂದ ಕನ್ನಡ ಪುಸ್ತಕಗಳನ್ನು ಪ್ರಕಟಿಸುತ್ತಿರುವ ಸಾಹಿತ್ಯ ಭಂಡಾರ ಪುಸ್ತಕ ಮಳಿಗೆಗೆ ಈಗ ನವೀಕರಣದ ಸಂಭ್ರಮ

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement