ಧಾರವಾಡ: ನಾಳೆ ಜೆಎಸ್‌ಎಸ್‌ನ ನೂತನ ಐಟಿಐ ಕಾಲೇಜ್‌ ಉದ್ಘಾಟನೆ

ಧಾರವಾಡ: ಧಾರವಾಡದ ಸವದತ್ತಿ ರಸ್ತೆಯಲ್ಲಿರುವ ಮೃತ್ಯುಂಜಯನಗರದಲ್ಲಿ ಜನತಾ ಶಿಕ್ಷಣ ಸಮಿತಿ ಅಡಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಐಟಿಐ ಕಾಲೇಜಿನ ಉದ್ಘಾಟನೆ ಹಾಗೂ ನಾಮಕರಣ ಸಮಾರಂಭ ಅಕ್ಟೋಬರ್‌ 19ರಂದು ಬೆಳಿಗ್ಗೆ 10 ಗಂಟೆಗೆ ನೂತನ ಐಟಿಐ ಆವರಣದಲ್ಲಿ ಆಯೋಜಿಸಲಾಗಿದೆ.
ಧಾರವಾಡದ ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳು ಸಮಾರಂಭದ ಸಾನಿಧ್ಯ ವಹಿಸಲಿದ್ದಾರೆ. ರಾಜ್ಯಸಭಾ ಸದಸ್ಯ ಹಾಗೂ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಉದ್ಘಾಟನೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮಹಾಪೌರ ಈರೇಶ ಅಂಚಟಗೇರಿ, ಧಾರವಾಡ ಗ್ರಾಮೀಣ ಶಾಸಕ ಅಮೃತ ದೇಸಾಯಿ, ಕನಕೂರಿನ ಗ್ರಾಪಂ ಅಧ್ಯಕ್ಷ ರೇಣುಕಾ ಅರೇನ್ನವರ, ಉದ್ಯೋಗ ಮತ್ತು ತರಬೇತಿ ಇಲಾಖೆ ಬೆಳಗಾವಿ ವಿಭಾಗ ಹುಬ್ಬಳ್ಳಿ ಪಿ. ರಮೇಶ್ಯ ಆಗಮಿಸಲಿದ್ದಾರೆ. ಜೆ.ಎಸ್.ಎಸ್ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದ ಹಾಗೂ ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿರಲಿದ್ದಾರೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement