ರಾಜ್ಯಾದ್ಯಂತ‘ವಾಹನ ಚಾಲನೆʼ ವೇಳೆ ಸೀಟ್ ಬೆಲ್ಟ್’ ಧರಿಸುವುದು ಕಡ್ಡಾಯ: ತಪ್ಪಿದರೆ ದಂಡ ದುಪ್ಪಟ್ಟು

ಬೆಂಗಳೂರು: ರಾಜ್ಯದಲ್ಲಿ ವಾಹನ ಚಾಲನೆ ವೇಳೆಯಲ್ಲಿ ಸೀಟ್ ಬೆಲ್ಟ್ ಧರಿಸುವುದನ್ನು ಕಡ್ಡಾಯಗೊಳಿಸಿ   ಆದೇಶ ಹೊರಡಿಸಲಾಗಿದೆ. ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಸೂಚನೆ ಪ್ರಕಾರ ರಾಜ್ಯ ಪೊಲೀಸರು ಈ ಹೊಸ ಆದೇಶ ಹೊರಡಿಸಲಾಗಿದೆ.
ಈ ಕುರಿತು ಇಂದು, ಬುಧವಾರ ಆದೇಶ ಹೊರಡಿಸಿರುವ ಅವರು, ಇಂದಿನಿಂದಲೇ ಜಾರಿಗೆ ಬರುವಂತೆ ರಾಜ್ಯದಲ್ಲಿ ವಾಹನ ಚಾಲಾಯಿಸುವಾಗ ಸೀಟ್ ಬೆಲ್ಟ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ವಾಹನ ಚಲಾಯಿಸುವಾಗ ಸೀಟ್ ಬೆಲ್ಟ್ ಧರಿಸದೇ ಇದ್ದರೆ 1 ಸಾವಿರ ರೂ.ಗಳ ದಂಡ ವಿಧಿಸಲಾಗುತ್ತದೆ ಎಂದು ಹೇಳಿದ್ದಾರೆ. ಈ ಹಿಂದೆ ಇದು 500 ರೂ. ಇದ್ದು, ಈಗ ಪರಿಷ್ಕೃತ ಆದೇಶದಲ್ಲಿ ದುಪ್ಪಟ್ಟುಗೊಳಿಸಲಾಗಿದೆ. ಪ್ರಯಾಣಿಕರ ಸಂಖ್ಯೆ 8 ಮೀರದಂತೆ ಇರುವ ವಾಹನಗಳಲ್ಲಿ , ಪ್ರಯಾಣಿಸುವವರು ಕಡ್ಡಾಯವಾಗಿ ಸೀಟ್ ಬೆಲ್ಟ್ ಹಾಕಿಕೊಳ್ಳಬೇಕು.  ಕಾರು, ಖಾಸಗಿ ಬಾಡಿಗೆ ವಾಹನಗಳಲ್ಲಿ ಪ್ರಯಾಣ ಮಾಡುವ ಪ್ರಯಾಣಿಕರು ಕೂಡ ಸೀಟ್ ಬೆಲ್ಟ್ ಕಡ್ಡಾಯವಾಗಿ ಹಾಕಿಕೊಳ್ಳಬೇಕು. ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹೊಸ ನಿಯಮ ಜಾರಿಗೆ ತಂದಿದೆ.2019ರ ಮೋಟಾರು ವಾಹನ ಕಾಯ್ದೆ ಪ್ರಕಾರ ಸೆಕ್ಷನ್‌ 194ರಡಿಯಲ್ಲಿ ಸೀಟ್‌ಬೆಲ್ಟ್‌ ಧರಿಸದೇ ವಾಹನ ಚಲಾಯಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ಸೀಟ್‌ಬೆಲ್ಟ್‌ ಸೌಲಭ್ಯ ಇಲ್ಲದ ವಾಹನಗಳಿಗೆ ಸೀಟ್‌ಬೆಲ್ಟ್‌ ಅಳವಡಿಸಿಕೊಳ್ಳಲು ನ.1 ರವರೆಗೆ ಕಾಲಾವಕಾಶ ನೀಡಲಾಗಿದೆ.

ಪ್ರಮುಖ ಸುದ್ದಿ :-   ರಾಜ್ಯದಲ್ಲಿ ತಾಪಮಾನ ಏರಿಕೆ : ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

ಸೀಟ್ ಬೆಲ್ಟ್‌ ಧರಿಸದೇ ವಾಹನ ಚಲಾಯಿಸುವವರ ವಿರುದ್ಧ ಒಂದು ಸಾವಿರ ರೂ. ದಂಡ ವಿಧಿಸಲು ರಾಜ್ಯದ ಎಲ್ಲ ಕಮೀಷನರೇಟ್ ಮತ್ತು ಎಸ್​ಪಿಗಳಿಗೆ ಆದೇಶಿಸಲಾಗಿದೆ.

ವಾಹನ ಚಲಾಯಿಸುವಾಗ ಸೀಟ್ ಬೆಲ್ಟ್ ಧರಿಸದಿದ್ದರೆ ಅಪಘಾತವಾದಂತ ಸಂದರ್ಭದಲ್ಲಿ ಏರ್‌ಬ್ಯಾಗ್ ಓಪನ್ ಆಗುವುದಿಲ್ಲ. ಹೀಗೆ ಏರ್ ಬ್ಯಾಗ್ ಓಪನ್ ಆಗದೇ ಇದ್ದಾಗ ಅಪಘಾತದ ವೇಳೆಯಲ್ಲಿ ಸಾವು ನೋವು ಸಂಭವಿಸಿವೆ. ಟಾಟಾ ಗ್ರೂಪ್ ಮಾಜಿ ಚೇರ್ಮನ್​ ಸೈರಸ್ ಮಿಸ್ತ್ರಿ ಇತ್ತೀಚೆಗೆ ಕಾರು ಅಪಘಾತದಲ್ಲಿ ಮೃತಪಟ್ಟ ನಂತರ ಟ್​​ಬೆಲ್ಟ್ ವಿಚಾರ ಮುನ್ನೆಲೆಗೆ ಬಂದು ಸಾಕಷ್ಟು ಚರ್ಚೆ ಕಾರಣವಾಗಿತ್ತು. ಯಾಕೆಂದರೆ ಅವರು ಸೀಟ್‌ ಬೆಲ್ಟ್‌ ಧರಿಸದ ಕಾರಣ ಏರ್‌ ಬ್ಯಾಗ್‌ ತೆರೆಯದೆ ಮೃತಪಟ್ಟಿದ್ದರು. ಈ ಹಿನ್ನಲೆಯಲ್ಲಿಯೇ ಕೇಂದ್ರ ಸರ್ಕಾರ ಸೀಟ್ ಬೆಲ್ಟ್ ಧರಿಸುವುದನ್ನು ಕಡ್ಡಾಯಗೊಳಿಸುವ ಕರಡನ್ನು ಪ್ರಕಟಿಸಿತ್ತು.

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement