ಕೆಜಿಎಫ್ ಬಾಬು ನಿವಾಸಕ್ಕೆ ಸಿ.ಎಂ. ಇಬ್ರಾಹಿಂ ಭೇಟಿ: ಜೆಡಿಎಸ್ ಸೇರ್ಪಡೆಯಾಗ್ತಾರೆಯೇ ಕೆಜಿಎಫ್ ಬಾಬು?

ಬೆಂಗಳೂರು: ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ಕೆಜಿಎಫ್ ಬಾಬು (KGF Babu) ನಿವಾಸಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಭೇಟಿ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಕೆಜಿಎಫ್ ಬಾಬುಗೆ ಜೆಡಿಎಸ್ ಸೇರ್ಪಡೆಗೊಳ್ಳುವಂತೆ ಸಿ.ಎಂ. ಇಬ್ರಾಹಿಂ ಆಹ್ವಾನ‌ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ತಾನೇ ಖುದ್ದು ಕಾರು ಕಳುಹಿಸಿ ತನ್ನದೇ ಕಾರಿನಲ್ಲಿ ಸಿ.ಎಂ. ಇಬ್ರಾಹಿಂರನ್ನು ಕೆಜಿಎಫ್ ಬಾಬು ಮನೆಗೆ ಕರೆಸಿಕೊಂಡಿದ್ದಾರೆ. ಬಾಬು ಆಹ್ವಾನದ ಹಿನ್ನೆಲೆಯಲ್ಲಿ ವಸಂತ ನಗರದ ಕೆಜಿಎಫ್ ಅವರ ನಿವಾಸಕ್ಕೆ ಇಬ್ರಾಹಿಂ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಆಗಿರುವ ಕೆ.ಜಿ.ಎಫ್ ಬಾಬು ಟಿಕೆಟ್ ಕೈತಪ್ಪುವ ಸಾಧ್ಯತೆ ಇರುವ ಹಿನೆಲೆಯಲ್ಲಿ ಅವರು ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗಿದೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಆರ್.ವಿ.ದೇವರಾಜು ಟಿಕೆಟ್ ಆಕಾಂಕ್ಷಿತರಾಗಿದ್ದಾರೆ. ಬಹುತೇಕ ಅವರಿಗೆ ಟಿಕೆಟ್ ನೀಡುವುದು ಖಚಿತ ಎನ್ನಲಾಗಿದೆ.
ಈ‌ ಬೆಳವಣಿಗೆಗಳ ನಡುವೆಯೇ ಕೆಜಿಎಫ್ ಬಾಬು ನಿವಾಸಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಭೇಟಿ ನೀರುವುದು ರಾಜಕೀಯವಾಗಿ ಚರ್ಚೆಗೆ ಗ್ರಾಸವಾಗಿದೆ. ಕನಿಷ್ಠ 60 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಪೈಪೋಟಿ ನೀಡಲು ಜೆಡಿಎಸ್ ರಣತಂತ್ರ ರೂಪಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಈ‌ ಭೇಟಿಗೆ ಮಹತ್ವ ಬಂದಿದೆ.

ಪ್ರಮುಖ ಸುದ್ದಿ :-   ರಾಜ್ಯದಲ್ಲಿ ತಾಪಮಾನ ಏರಿಕೆ : ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement