ಬೆಳಗಾವಿಯಲ್ಲಿ ದುರಂತ: ದೀಪಾವಳಿಗೆ ಬಟ್ಟೆ ಖರೀದಿಸಿ ವಾಪಸ್ಸಾಗುತ್ತಿದ್ದಾಗ ಕುತ್ತಿಗೆಗೆ ಗಾಳಿಪಟದ ದಾರ ಬಿಗಿದು ಐದು ವರ್ಷದ ಮಗು ಸಾವು

ಬೆಳಗಾವಿ : ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ 5 ವರ್ಷದ ಮಗು ಮೃತಪಟ್ಟ ಘಟನೆ ಇಲ್ಲಿಯ ಗಾಂಧಿ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ. ಇಲ್ಲಿಯ ಹಳೆ ಗಾಂಧಿನಗರ ಬ್ರಿಡ್ಜ್ ಮೇಲೆ ಭಾನುವಾರ ಸಂಜೆ ಬೈಕ್‌ನಲ್ಲಿ ಹೋಗುತ್ತಿರುವಾಗ ಈ ಘಟನೆ ನಡೆದಿದ್ದು, ಮೃತಪಟ್ಟ ಮಗುವನ್ನು ವರ್ಧನ್ ಈರಣ್ಣ ಬ್ಯಾಳಿ ಎಂದು ಗುರುತಿಸಲಾಗಿದೆ.
ದೀಪಾವಳಿಗೆ ಬೆಳಗಾವಿಯ ಮಾರ್ಕೆಟ್‌ನಲ್ಲಿ ಬಟ್ಟೆ ಖರೀದಿಸಿ ನಂತರ ವಡಗಾವಿಯ ಮಾವನ ಮನೆಗೆ ಭೇಟಿ ನೀಡಿ ಬಳಿಕ ಹುಕ್ಕೇರಿ ತಾಲೂಕಿನ ಹತ್ತರಗಿಗೆ ತಂದೆಯೊಂದಿಗೆ ಬೈಕ್ ಮೇಲೆ ಹೊರಟಿದ್ದ. ಬೈಕ್‌ನ ಮುಂಭಾಗ ಕುಳಿತಿದ್ದ ಬಾಲಕನ ಕುತ್ತಿಗೆಗೆ ಕಣ್ಣಿಗೆ ಕಾಣಿಸದ ಗಾಳಿಪಟದ ದಾರ ಸುತ್ತಿಕೊಂಡಿದೆ. ಇದು ಮಗುವಿನ ಕುತ್ತಿಗೆಗೆ ಬಿಗಿಯಾದ ಕಾರಣ  ತೀವ್ರವಾಗಿ ಗಾಯಗೊಂಡ ಮಗು ಸ್ಥಳದಲ್ಲೇ ಮೃತಪಟ್ಟಿದೆ. ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement