ಬೆಂಗಳೂರು: ಜೆಡಿಎಸ್ನ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಅಕ್ಟೋಬರ್ 27ರಂದು ನಡೆಯಲಿದೆ. ಅಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಮರು ಆಯ್ಕೆಯಾಗುವುದನ್ನು ನಿರೀಕ್ಷಿಸಲಾಗಿದೆ.
ನಗರದ ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಸಂಜೆ 4:30ಕ್ಕೆ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಶಾಸಕರು, ಸಂಸದರು, ಕರ್ನಾಟಕ, ಕೇರಳ, ಬಿಹಾರ, ಅಂಧ್ರಪ್ರದೇಶ ಸೇರಿದಂತೆ 12 ರಾಜ್ಯಗಳ ರಾಜ್ಯಾಧ್ಯಕ್ಷರು, ರಾಷ್ಟ್ರೀಯ ಪರಿಷತ್ ಸದಸ್ಯರು, ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯರು, ವಿಶೇಷ ಆಹ್ವಾನಿತರು ಹಾಗೂ ಜಿಲ್ಲಾಧ್ಯಕ್ಷರನ್ನು ಆಹ್ವಾನಿಸಲಾಗಿದೆ.
ಈ ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ಜೊತೆಗೆ ಮುಂಬರುವ ವಿಧಾನಸಭೆ ಚುನಾವಣೆ ಸಿದ್ಧತೆ, ಪಕ್ಷ ಸಂಘಟನೆ, ಪ್ರಚಲಿತ ವಿದ್ಯಮಾನಗಳ ಬಗ್ಗೆ ಗಂಭೀರ ಚರ್ಚೆ ನಡೆಯಲಿದೆ. 28ರಂದು ಬೆಳಗ್ಗೆ 10:30ಕ್ಕೆ ರಾಷ್ಟ್ರೀಯ ಅಧಿವೇಶನ ನಡೆಯಲಿದ್ದು, ರಾಜ್ಯ ವಿಧಾನಸಭೆ ಸೇರಿದಂತೆ ಮುಂಬರುವ ಚುನಾವಣೆಗಳ ಸಿದ್ದತೆ, ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎನ್ನಲಾಗಿದೆ. ಅಲ್ಲದೆ, ನವೆಂಬರ್ 1ರಿಂದ ಆರಂಭವಾಗಲಿರುವ ಜೆಡಿಎಸ್ನ ಮಹತ್ವದ ಪಂಚರತ್ನ ರಥಯಾತ್ರೆ ರೂಪುರೇಷೆ ಬಗ್ಗೆಯೂ ಸಮಾಲೋಚನೆ ನಡೆಯಲಿದೆ.
ನಿಮ್ಮ ಕಾಮೆಂಟ್ ಬರೆಯಿರಿ