ಮುಂಬೈ: ಗಾಜಿನ ಬಾಟಲಿಯಲ್ಲಿ ಪಟಾಕಿ ಸಿಡಿಸುವುದು ಬೇಡ ಎಂದು ಆಕ್ಷೇಪಿಸಿದ ವ್ಯಕ್ತಿಯೊಬ್ಬನನ್ನು ಬಾಲಕ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಮುಂಬೈನಲ್ಲಿ ವರದಿಯಾಗಿದೆ.
ಆರೋಪಿಗಳಲ್ಲಿ 14 ಮತ್ತು 15 ವರ್ಷದ ಇಬ್ಬರನ್ನು ಬಂಧಿಸಲಾಗಿದ್ದು, 12 ವರ್ಷದ ಮೂರನೇ ಆರೋಪಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟವರನ್ನು 21 ವರ್ಷದ ಸುನಿಲ್ ನಾಯ್ಡು ಎಂದು ಗುರುತಿಸಲಾಗಿದೆ.
ಪೊಲೀಸರ ಪ್ರಕಾರ, ಶಿವಾಜಿ ನಗರದ ಪಾರೇಖ್ ಕಾಂಪೌಂಡ್ ಬಳಿಯ ತೆರೆದ ಮೈದಾನದಲ್ಲಿ 12 ವರ್ಷದ ಬಾಲಕ ಗಾಜಿನ ಬಾಟಲಿಯಲ್ಲಿ ಪಟಾಕಿ ಸಿಡಿಸುತ್ತಿದ್ದಾಗ, ನಾಯ್ಡು ಸ್ಥಳಕ್ಕೆ ಆಗಮಿಸಿ ಅದನ್ನು ವಿರೋಧಿಸಿದರು. ಇಬ್ಬರ ನಡುವೆ ವಾಗ್ವಾದ ನಡೆಯಿತು.
ತಕ್ಷಣವೇ ಆರೋಪಿಯ 15 ವರ್ಷದ ಸಹೋದರ ಮತ್ತು 14 ವರ್ಷದ ಸ್ನೇಹಿತ ಆರೋಪಿಯೊಂದಿಗೆ ಸೇರಿಕೊಂಡರು ಮತ್ತು ಮೂವರೂ ನಾಯ್ಡು ಅವರನ್ನು ಥಳಿಸಲು ಪ್ರಾರಂಭಿಸಿದರು.
ಜಗಳದ ಸಂದರ್ಭದಲ್ಲಿ, 15 ವರ್ಷದ ಬಾಲಕ ಸುನಿಲ್ ನಾಯ್ಡು ಅವರಿಗೆ ಚಾಕುವಿನಿಂದ ಇರಿದಿದ್ದರಿಂದ ಅವರು ತೀವ್ರವಾಗಿ ಗಾಯಗೊಂಡನು. ಕೂಡಲೇ ಅವರನ್ನು ರಾಜವಾಡಿ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಮೃತಪಟ್ಟಿರುವುದಾಗಿ ಘೋಷಿಸಲಾಗಿದೆ.
ದೇಶದಾದ್ಯಂತ ಅನೇಕ ನಗರಗಳಲ್ಲಿ ಪಟಾಕಿಗಳ ಮೇಲೆ ನಿಷೇಧವಿದ್ದರೂ, ದೀಪಾವಳಿಯ ಸಮಯದಲ್ಲಿ ಇವುಗಳನ್ನು ಮಾರಾಟ ಮಾಡಲಾಗುತ್ತದೆ ಮತ್ತು ಬಳಸಲಾಗುತ್ತದೆ. ಪಟಾಕಿಗಳಿಂದ ದೊಡ್ಡ ಶಬ್ದವು ಗಾಳಿ ಮತ್ತು ಶಬ್ದ ಮಾಲಿನ್ಯದ ಮಟ್ಟವನ್ನು ಹೆಚ್ಚಿಸುವುದರ ಹೊರತಾಗಿ ಶ್ರವಣೇಂದ್ರಿಯ ಮತ್ತು ವಿವಿಧ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ತಜ್ಞರು ಆಗಾಗ್ಗೆ ಎಚ್ಚರಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ