ಕಿತ್ತೂರು ಉತ್ಸವದಿಂದ ವಾಪಸಾಗುತ್ತಿದ್ದ ಪಾದಚಾರಿಗಳ ಮೇಲೆ ಹರಿದ ಕಾರು : ಇಬ್ಬರ ದುರ್ಮರಣ

ಕಿತ್ತೂರು : ಬೆಳಗಾವಿ ಜಿಲ್ಲೆಯ ಕಿತ್ತೂರು ಉತ್ಸವ ವೀಕ್ಷಿಸಿ ವಾಪಸ್ ಮನೆಗೆ ಬರುತ್ತಿದ್ದವರ ಮೇಲೆ ಮಂಗಳವಾರ ತಡರಾತ್ರಿ ಕಾರು ಹರಿದು ಇಬ್ಬರು ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಖಾನಾಪುರ ತಾಲ್ಲೂಕು ಕೊರವಿಕೊಪ್ಪ ಗ್ರಾಮದ ಬಾಳಪ್ಪ ತಳವಾರ (33)ಮತ್ತು ಕರೆಪ್ಪ ತಳವಾರ (36) ಮೃತಪಟ್ಟವರು. ಬೆಳಗಾವಿಯಿಂದ ಧಾರವಾಡದ ಕಡೆ ಹೋಗುತ್ತಿದ್ದ ಕಾರು ಇವರಿಬ್ಬರಿಗೆ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ. ಇವರು ಅಂಡರ್ ಪಾಸ್ ಮೂಲಕ ತೆರಳಬೇಕಿತ್ತು. ಆದರೆ ಅಲ್ಲಿ ಬೆಳಕು ಇಲ್ಲ ಎಂಬ ಕಾರಣಕ್ಕೆ ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದಾಗ ಈ ಪಾದಚಾರಿಗಳಿಗೆ ಕಾರು ಡಿಕ್ಕಿ ಹೊಡೆದಿದೆ. ಅವರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಿತ್ತೂರು ಹೊರವಲಯದಲ್ಲಿ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೇಲೆ ದುರಂತ ಸಂಭವಿಸಿದೆ.
ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣ : ಪ್ರಮುಖ ಆರೋಪಿ ಬಂಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement