ಖಾನಾಪುರ :ವಿದ್ಯುತ್ ತಂತಿ ಸ್ಪರ್ಶಗೊಂಡು ಬಾಲಕ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಾಮಸಿಕೊಪ್ಪ ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಮೃತ ಬಾಲಕನನ್ನು ಬಸಪ್ಪ ಕೋಲ್ಕಾರ (7) ಎಂದು ಗುರುತಿಸಲಾಗಿದೆ.
ಹೆಸ್ಕಾಂ ಅಧಿಕಾರಿಗಳು ವಿದ್ಯುತ್ ಕಂಬ ನೆಡುವ ಬದಲು ಮರದ ಕಂಬ ನೆಟ್ಟು ವಿದ್ಯುತ್ ತಂತಿ ಎಳೆದಿದ್ದರು. ವಿದ್ಯುತ್ ತಂತಿ ಜೋತು ಬಿದ್ದಿದ್ದು ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿ ಬಸಪ್ಪ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ. ಖಾನಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ