ತಮ್ಮನನ್ನು ರಕ್ಷಿಸಲು ಹೋದ ಮೂವರು ಸೋದರಿಯರು ಸೇರಿ ನಾಲ್ವರು ಕೆರೆ ಪಾಲು

ವಿಜಯನಗರ: ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಚನ್ನಹಳ್ಳಿ ತಾಂಡಾದ ಬಳಿಯಿರುವ ಕೆರೆಯೊಂದರಲ್ಲಿ ಮುಳುಗಿ ನಾಲ್ವರು ಮಕ್ಕಳು ಮೃತಪಟ್ಟ ಘಟನೆ ನಡೆದ ಬಗ್ಗೆ ವರದಿಯಾಗಿದೆ.
. ಹರಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮೃತ ಮಕ್ಕಳೆಲ್ಲ ಒಂದೇ ಕುಟುಂಬದವರಾಗಿದ್ದಾರೆ ಎಂದು ಹೇಳಲಾಗಿದೆ. ಮೃತ ಮಕ್ಕಳನ್ನು ಅಭಿ (13), ಅಶ್ವಿನಿ (14), ಕಾವೇರಿ (18) ಅಪೂರ್ವಾ (18) ಎಂದು ಗುರುತಿಸಲಾಗಿದೆ.
ಮೊದಲು ಅಭಿ ಎಂಬಾತ ನೀರಿನ ಬಳಿ ಆಟ ಆಡಲು ಹೋದಾಗ ಆಕಸ್ಮಾತ್ ಕೆರೆಯಲ್ಲಿ ಬಿದ್ದಿದ್ದಾನೆ. ಅದನ್ನು ನೋಡಿದ ಆತನ ಮೂವರೂ ಅಕ್ಕಂದಿರು ಕೆರೆಗೆ ಇಳಿದು ರಕ್ಷಿಸಲು ಮುಂದಾಗಿದ್ದಾರೆ. ಆದರೆ, ಆತನ ಜತೆಗೆ ಮೂವರು ಅಕ್ಕಂದಿರೂ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಈವರೆಗೆ ಇಬ್ಬರ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಇನ್ನಿಬ್ಬರಿಗಾಗಿ ಶೋಧ ಕಾರ್ಯಾಚರಣೆ ನಡೆದಿದೆ.

3 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement