ರೇಣುಕಾಚಾರ್ಯ ಸಹೋದರನ ಮಗನ ನಿಗೂಢ ಸಾವಿನ ಸಮಗ್ರ ತನಿಖೆ: ಆರಗ ಜ್ಞಾನೇಂದ್ರ

ಬೆಂಗಳೂರು: ಶಾಸಕ ಎಂ. ಪಿ.ರೇಣುಕಾಚಾರ್ಯ ಅವರ ಸಹೋದರನ ಮಗನ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ಬಳಿಕ ಸಂಪೂರ್ಣ ಮಾಹಿತಿ ಸಿಗಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ವಿಧಾನಸೌಧದಲ್ಲಿ ಗುರುವಾರ ಮಾತನಾಡಿದ ಅವರು, ನಾಲೆಯಲ್ಲಿ ಕಾರಲ್ಲಿ ರೇಣುಕಾಚಾರ್ಯ ಅವರ ಅಣ್ಣನ ಮಗನ ಶವ ಸಿಕ್ಕಿದೆ. ಅಲ್ಲಿಂದ ವರದಿ ಬರಬೇಕಿದೆ. ಈ ಸಾವಿನ ಬಗ್ಗೆ ನಿಖೆಯಿಂದ ಮಾಹಿತಿ ಹೊರಗೆ ಬರಬೇಕಿದೆ. ಎಲ್ಲಾ ಪೊಲೀಸ್ ಸ್ಟೇಷನ್‌ ಗಳಿಗೆ ನಾನು ಅಲರ್ಟ್ ಮಾಡಿದ್ದೆ ಎಂದು ಅವರು ತಿಳಿಸಿದರು.

ಸಿಸಿ ಟಿವಿ ಫೂಟೇಜ್ ಕೂಡ ತೆಗೆಸಿ ಪರಿಶೀಲನೆ ಮಾಡಲಾಗುತ್ತಿದೆ. ಎಲ್ಲ ಆಯಾಮಗಳಲ್ಲಿ ತನಿಖೆ ನಡೆಯಲಿದೆ. ಆದರೆ ತನಿಖೆಯ ರಿಪೋರ್ಟ್‌ ಬರುವವರೆಗೆ ನಾನು ಏನೂ ಹೇಳಲು ಸಾಧ್ಯವಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೆ ಎರಡು ಮೂರು ಬಾರಿ ರೇಣುಕಾಚಾರ್ಯ ನನಗೆ ಫೋನ್ ಕರೆ ಮಾಡುತ್ತಿದ್ದರು ಹಾಗೂ ಆತಂಕ ವ್ಯಕ್ತಪಡಿಸುತ್ತಿದ್ದರು. ನಾನು ಕೂಡ ಅಧಿಕಾರಿಗಳಿಗೆ ಸೂಚನೆ ಕೊಡುತ್ತಿದ್ದೆ. ನಾಪತ್ತೆಯಾಗಿದ್ದ ಯುವಕನಿಗಾಗಿ ಎಲ್ಲರೂ ಕೂಡ ಹುಡುಕಾಟ ಮಾಡುತ್ತಿದ್ದರು. ಆದರೆ ಇವತ್ತು ಶವವಾಗಿ ಪತ್ತೆಯಾಗಿದ್ದಾರೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement