ಪ್ರಮೋದ ಮುತಾಲಿಕಗೆ ಜೀವ ಬೆದರಿಕೆ ಕರೆ; ದೂರು ದಾಖಲು

ಬೆಳಗಾವಿ: ಶ್ರೀರಾಮಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್ ಅವರಿಗೆ ಜೀವ ಬೆದರಿಕೆ ಕರೆಗಳು (Threatening Call) ಬರುತ್ತಿರುವ ಕುರಿತು ಪ್ರಮೋದ ಮುತಾಲಿಕ್ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿರುವ ಪ್ರಮೋದ ಮುತಾಲಿಕ್‌, ನನಗೆ ಬೇರೆ ಬೇರೆ ನಂಬರ್‌ಗಳಿಂದ ಕರೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಲಾಗುತ್ತಿದೆ. ಕೊಚ್ಚಿ ಕೊಚ್ಚಿ ತುಂಡು ಮಾಡಿ ನಾಯಿಗೆ ಬಿಸಾಕುತ್ತೇನೆ ಎಂದು ಹೀನಾಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಲಾಗುತ್ತಿದೆ ಎಂದು ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವುದಾಗಿ ತಿಳಿಸಿದ್ದಾರೆ.
4-5 ಕಾಲ್‌ಗಳ ಮೂಲಕ ಬೆದರಿಕೆ ಕರೆಗಳು ಬಂದಿವೆ. ಉರ್ದು ಮಿಶ್ರಿತ ಮಂಗಳೂರು ಕನ್ನಡ ಭಾಷೆಯಲ್ಲಿ ಅತ್ಯಂತ ಕೆಟ್ಟದಾಗಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಎಲ್ಲಾ ನಂಬರ್‌ಗಳನ್ನು ಹುಕ್ಕೇರಿ ಪೊಲೀಸ್ ಠಾಣೆಗೆ ನೀಡಿ ದೂರು ದಾಖಲಿಸಿದ್ದು, ಸೂಕ್ತ ತನಿಖೆ ನಡೆಸಿ, ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದೇನೆ ಎಂದು ಹೇಳಿದ್ದಾರೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement