ಶಿವಮೊಗ್ಗ: ಆರೋಪಿ ಕಾಲಿಗೆ ಪೊಲೀಸರ ಗುಂಡೇಟು

ಶಿವಮೊಗ್ಗ: ಇಂದು, ಶನಿವಾರ ಮುಂಜಾನೆ‌ ಹಲ್ಲೆ ಪ್ರಕರಣವೊಂದರ ಆರೋಪಿ ಕಾಲಿಗೆ ದೊಡ್ಡಪೇಟೆ ಪೊಲೀಸ್ ಠಾಣೆಯ ಸಬ್‌ ಇನ್‌ಸ್ಟೆಕ್ಟರ್‌ ಗುಂಡು ಹಾರಿಸಿದ್ದಾರೆ.
ಪುರಲೆ ಬಳಿಯಲ್ಲಿ ಈತ‌ನ ಬಂಧನಕ್ಕೆ ತೆರಳಿದ ವೇಳೆ ಆತ ಪೊಲೀಸರ ಮೇಲೆ ದಾಳಿ ನಡೆಸಿದಾಗ ಆತ್ಮರಕ್ಷಣೆಗಾಗಿ ಗುಂಡು ಹಾರಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಘಟನೆಯಲ್ಲಿ ಪೊಲೀಸ್ ಪೇದೆಯೂ ಸಹ ಗಾಯಗೊಂಡಿದ್ದಾರೆ. ಆರೋಪಿ ಅಸ್ಲಾಂ ಎಂಬಾತ ಹಾಗೂ ಪೊಲೀಸ್‌ ಪೇದೆಯನ್ನು ಶಿವಮೊಗ್ಗ ಜಿಲ್ಲಾಸ್ಪತ್ರೆ ಮೆಗ್ಗಾನ್‌ಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಕೆಲ ದಿನಗಳ ಹಿಂದೆ ಶಿವಮೊಗ್ಗ ನಗರದಲ್ಲಿ ಅಶೋಕ್ ಪ್ರಭು ಎಂಬ ವ್ಯಕ್ತಿ ಮೇಲೆ‌ ರಾಯಲ್ ಆರ್ಕಿಡ್ ಹೋಟೆಲ್ ಬಳಿ ನಾಲ್ಕೈದು ದುಷ್ಕರ್ಮಿಗಳು ದಾಳಿ ಮಾಡಿದ್ದರು. ಒಟ್ಟು ಮೂವರು ಅರೋಪಿಗಳಲ್ಲಿ ಓರ್ವನನ್ನು ಬಂಧಿಸಿ ನಿನ್ನೆ, ಶುಕ್ರವಾರ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಶಿವಮೊಗ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು ದೊಡ್ದಪೇಟೆ ಪೋಲೀಸರು ಹುಡುಕುತ್ತಿದ್ದರು. ಆತ ಶನಿವಾರ ಬೆಳಗ್ಗೆ ಡೆವಲಪರ್ಸ್ ಸೈಟ್‌ ಬಳಿ ಆತನನ್ನು ಸೆರೆಹಿಡಿಯಲು ಹೋದಾಗ ಆರೋಪಿ ಚಾಕುವಿನಿಂದ ದಾಳಿ ಮಾಡಿದ್ದು, ಆತ್ಮರಕ್ಷಣೆಗಾಗಿ ನಮ್ಮ ಸಿಬ್ಬಂದಿ ಕಾಲಿಗೆ ಫೈರ್ ಮಾಡಿದ್ದಾರೆ. ಆತ ಚಾಕುವಿನಿಂದ ದಾಳಿ ಮಾಡಿದ ವೇಳೆ ಪೊಲೀಸ್‌ ಸಿಬ್ಬಂದಿ ಗಾಯಗೊಂಡಿದ್ದಾರೆ. ಈತನ ವಯಸ್ಸಿನ ಬಗ್ಗೆ ಪಕ್ಕಾ ಮಾಹಿತಿ ಇಲ್ಲ, ವಿವರ ಪಡೆದುಕೊಳ್ಳಲಾಗುತ್ತಿದೆ.‌ ಗುಂಡೇಟು ತಿಂದ ಅಸ್ಲಂ ಮೇಲೆ ಒಂಭತ್ತು ಪ್ರಕರಣಗಳಿವೆ ಎಂದು ಎಸ್ಪಿ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಹುಕ್ಕಾ, ಹುಕ್ಕಾ ಬಾರ್‌ ನಿಷೇಧಿಸಿರುವ ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್‌

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement