7ನೇ ವೇತನ ಆಯೋಗ ರಚನೆಗೆ ಸಿಎಂ ಸಮ್ಮತಿ: ಎರಡ್ಮೂರು ದಿನದಲ್ಲಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ 7ನೇ ವೇತನ ಆಯೋಗ ರಚನೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮತಿಸಿದ್ದು, ಎರಡು ದಿನಗಳಲ್ಲಿ ಆದೇಶ ಹೊರಬೀಳಲಿದೆ.
ಈ ಕುರಿತಂತೆ ಮಾಹಿತಿ ನೀಡಿರುವಂತ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿಎಸ್ ಷಡಾಕ್ಷರಿ ಅವರು, ನೌಕರರ ವೇತನ ಪರಿಷ್ಕರಣೆಗಾಗಿ ಸದ್ಯದಲ್ಲೇ ವೇತನ ಆಯೋಗ ರಚಿಸುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರಸಕ್ತ ವರ್ಷದ ಅಕ್ಟೋಬರ್ ಅಂತ್ಯದ ಒಳಗೆ ವೇತನ ಆಯೋಗ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ ಈ ಹಿಂದೆ ಭರವಸೆ ನೀಡಿದ್ದರು. ಭಾನುವಾರ ಭೇಟಿ ಮಾಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರ ನಿಯೋಗ ಜೊತೆ ಬೊಮ್ಮಾಯಿ ಅವರು ಮಾತುಕತೆ ನಡೆಸಿದರು.

ಎರಡು ದಿನಗಳಲ್ಲಿ ವೇತನ ಆಯೋಗ ರಚಿಸಲಾಗುವುದು. ಶೀಘ್ರವಾಗಿ ಮಧ್ಯಂತರ ವರದಿ ನೀಡಲು ಸೂಚಿಸಲಾಗುವುದು. 2023ರ ಮಾರ್ಚ್‌ ಒಳಗೆ ಆಯೋಗದ ಶಿಫಾರಸುಗಳನ್ನು ಜಾರಿ ಮಾಡಲಾಗುವುದು ಎಂದು ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಭರವಸೆ ನೀಡಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚಿಸಲಾಗಿದೆ. ಅವರು ಸಂಘದ ಮನವಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಹೀಗಾಗಿ ಅವರಿಗೆ ನವೆಂಬರ್‌ 10ರಂದು ಅವರ ನಿವಾಸದಲ್ಲಿ ಸಂಘದಿಂದ ಅಂಭಿನಂದಿಸಲಾಗುತ್ತದೆ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement