ಯತ್ನಾಳರನ್ನು ಭೇಟಿ ಮಾಡಿದ ಕರ್ನಾಟಕ ಉಸ್ತುವಾರಿ ಅರುಣ್‌ ಸಿಂಗ್‌ ; ಗೌಪ್ಯ ಮಾತುಕತೆ

ವಿಜಯಪುರ: ಕರ್ನಾಟಕದ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್ ಹಾಗೂ ವಿಜಯಪುರ ನಗರ ಶಾಸಕ‌ ಬಸನಗೌಡ ಪಾಟೀಲ್‌ ಯತ್ನಾಳ್‌ ಮಂಗಳವಾರ ರಾತ್ರಿ ಗೌಪ್ಯವಾಗಿ ಮಾತುಕತೆ ನಡೆಸಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ವಿಜಯಪುರ ಪ್ರವಾಸದಲ್ಲಿರುವ ಅರುಣ್‌ ಸಿಂಗ್ ಯತ್ನಾಳ್‌ ಅವರನ್ನು ಭೇಟಿ ಮಾಡಿ ಸುಮಾರು 20-25 ನಿಮಿಷಗಳ ಕಾಲ ಗೌಪ್ಯವಾಗಿ ಮಾತುಕತೆ ನಡೆಸಿದ್ದಾರೆ.
ವಿಜಯಪುರ ನಗರದ ಹೊರ ಭಾಗದಲ್ಲಿರುವ ಯತ್ನಾಳ ಮಾಲೀಕತ್ವದ ಹೈಪರ್ ಮಾರ್ಟ್ ನಲ್ಲಿ ಈ ಸಭೆ ನಡೆದಿದೆ. ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಬಿಜೆಪಿ ಸಂಕಲ್ಪ ಯಾತ್ರೆಯ ಪ್ರಯುಕ್ತ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಅರುಣ್‌ ಸಿಂಗ್ ಹಾಗೂ ಬಿಜೆಪಿಯ ಜಿಲ್ಲೆಯ ಬಹುತೇಕ ಎಲ್ಲ ಮುಖಂಡರು ಭಾಗವಹಿಸಿದ್ದರು. ಆದರೆ, ಬಸನಗೌಡ ಪಾಟೀಲ್‌ ಯತ್ನಾಳ್‌ ಮಾತ್ರ ಭಾಗವಹಿಸಿರಲಿಲ್ಲ.

ತಮ್ಮ ತವರು ಜಿಲ್ಲೆ ವಿಜಯಪುರಕ್ಕೆ ಬಂದರೂ ಯತ್ನಾಳ್‌ ಅರುಣ್‌ ಸಿಂಗ್ ಅವರನ್ನು ಭೇಟಿ ಮಾಡದೆ ಅಂತರ ಕಾಯ್ದುಕೊಂಡಿದ್ದರು. ಇದರಿಂದ ತಪ್ಪು ಸಂದೇಶ ರವಾನೆಯಾಗಬಹುದು ಎಂಬ ಬಗ್ಗೆ ಜಾಗೃತರಾದ ಅರುಣ ಸಿಂಗ್ ವಿಜಯಪುರಕ್ಕೆ ಆಗಮಿಸಿ ಯತ್ನಾಳ್‌ ಅವರನ್ನು ಭೇಟಿ ಮಾಡಿದ್ದಾರೆ.
ಯತ್ನಾಳ್‌ ಅವರನ್ನು ಪ್ರತ್ಯೇಕವಾಗಿ ಕರೆದ ಅರುಣ್‌ ಸಿಂಗ್ ಸುಮಾರು 20 ನಿಮಿಷಗಳ ಕಾಲ ಗೌಪ್ಯವಾಗಿ ಮಾತುಕತೆ ನಡೆಸಿದ್ದಾರೆ. ಆದರೆ, ಇತ್ತೀಚೆಗೆ ಯತ್ನಾಳ್‌ ಕುರಿತು ಅರುಣ್‌ ಸಿಂಗ್ ಯತ್ನಾಳ್‌ ಅವರು ಪಕ್ಷದ ನೀತಿ ನಿರೂಪಣೆ ಸಮಿತಿಯ ಸದಸ್ಯರಲ್ಲ. ಅವರೊಬ್ಬ ಶಾಸಕ ಮಾತ್ರ. ಅವರ ಮಾತಿಗೆ ಮಹತ್ವ ನೀಡಬೇಕಿಲ್ಲ ಎಂದು ಹೇಳಿದ್ದರು.

ಪ್ರಮುಖ ಸುದ್ದಿ :-   ತಮ್ಮ ವಿರುದ್ಧ ಮಾನಹಾನಿಕರ ಸುದ್ದಿ- ದೃಶ್ಯ ಪ್ರಕಟಿಸದಂತೆ ತಡೆಯಾಜ್ಞೆ ತಂದ ಈಶ್ವರಪ್ಪ ಪುತ್ರ ಕಾಂತೇಶ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement