ಮುರುಘಾ ಮಠದಲ್ಲಿ ಫೋಟೋ ಕಳವು ಪ್ರಕರಣ: ಮಾಜಿ ಶಾಸಕ ಬಸವರಾಜನ್ ಪೊಲೀಸ್‌ ವಶಕ್ಕೆ

ಚಿತ್ರದುರ್ಗ: ಮುರುಘಾ ಮಠದಲ್ಲಿ ಫೋಟೋಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಠದ ಮಾಜಿ ಆಡಳಿತಾಧಿಕಾರಿ, ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದಸರಾ ಉತ್ಸವದ ಅಂಗವಾಗಿ ನಡೆದ ಪೀಠಾರೋಹಣದ ಹಿಂದಿನ ದಿನ ಅಕ್ಟೋಬರ್‌ 5ರ ಮಧ್ಯರಾತ್ರಿ ವೇಳೆ ರಾಜಾಂಗಣದಲ್ಲಿ ಗೋಡೆಗೆ ಹಾಕಿದ್ದ 47 ಫೋಟೋಗಳು ಕಳುವಾಗಿತ್ತು. ಧಾರ್ಮಿಕ ಮುಖಂಡರು, ರಾಷ್ಟ್ರಪತಿ, ಪ್ರಧಾನಿ, ಹಾಗೂ ಮುಖ್ಯಮಂತ್ರಿಗಳ ಜೊತೆಗಿನ ಮುರುಘಾಶ್ರೀಗಳಿದ್ದ ಫೋಟೋಗಳನ್ನು ಕಳುವು ಮಾಡಲಾಗಿತ್ತು.

ನಂತರ ತನಿಖೆ ಆರಂಭಿಸಿದ ಪೊಲೀಸರು ಹೊಸಹಳ್ಳಿ ಗ್ರಾಮ ಪಂಚಾಯತ ಸದಸ್ಯ ಮೋಹನ ಮೂರ್ತಿ ಅಲಿಯಾಸ್ ಸ್ವಾಮಿ, ಎಸ್‍ಜೆಎಮ್ ಪಾಲಿಟೆಕ್ನಿಕ್ ಕಾಲೇಜು ಉಪನ್ಯಾಸಕ ಶಿವಾನಂದ ಸ್ವಾಮಿಯನ್ನು ಫೋಟೋ ಕಳವು ಮಾಡಿದ ಆರೋಪದಡಿ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಬಸವರಾಜನ್ ಫೋಟೋವನ್ನು ಕಳವು ಮಾಡುವಂತೆ ಪ್ರಚೋದನೆ ನೀಡಿದ್ದರು ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಬಸವರಾಜನ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಮತ್ತೋರ್ವ ಆರೋಪಿ ಶ್ರೀನಿವಾಸ ಎಂಬವರನ್ನು ಕೂಡ ಪೊಲೀಸರ ವಶಕ್ಕೆ ಪಡೆದಿದ್ದಾರೆ, ಬಸವರಾಜನ್ ಪತ್ನಿ ಸೌಭಾಗ್ಯ ಅವರಿಗೆ ಪೊಲೀಸರ ಶೋಧ ಆರಂಭಿಸಿದ್ದಾರೆ.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement