ಕೋಲಾರದಲ್ಲಿ ಸ್ಪರ್ಧೆ; ಸುಳಿವು ನೀಡಿದರೆ ಸಿದ್ಧರಾಮಯ್ಯ..?

ಕೋಲಾರ: ನಾನು ಈಗ ನಾಮಪತ್ರ ಸಲ್ಲಿಸಲು ಬಂದಿಲ್ಲ. ಹಾಗೇನಾದರೂ ನಾಮಪತ್ರ ಸಲ್ಲಿಸಲು ಬಂದರೆ ಜೋರಾಗಿ ಚಪ್ಪಾಳೆ ಹೊಡೆಯಿರಿ. ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿ’ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ಧರಾಮಯ್ಯ ಹೇಳುವ ಮೂಲಕ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಬಗ್ಗೆ ಸುಳಿವು ನೀಡಿದರು.
ಇಲ್ಲಿ‌ನ ಮೆಥಾಡಲಿಜಿಸ್ಟ್ ಚರ್ಚಿನಲ್ಲಿ ಭಾನುವಾರ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಬಾದಾಮಿ, ವರುಣಾ ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡಬೇಂದು ನನ್ನ ಮೇಲೆ ಒತ್ತಡವಿದೆ. ಕೋಲಾರದಲ್ಲಿ ಸ್ಪರ್ಧಿಸುವಂತೆ ಎಲ್ಲರೂ ಒತ್ತಡ ಹೇರುತ್ತಿದ್ದಾರೆ, ಆದರೆ ನಾನಿನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಹೇಳಿದರು.
ನಮ್ಮದು ಬಹುತ್ವದ ದೇಶ ನಮ್ಮದು. ಜಾತ್ಯತೀತ, ಬಹುತ್ವದಲ್ಲಿ ನಂಬಿಕೆ ಇಟ್ಟಿರುವ ಪಕ್ಷ ಕಾಂಗ್ರೆಸ್. ಕ್ರೈಸ್ತ ಸಮುದಾಯದವರೂ ಗೌರವದಿಂದ ಬದುಕುವ ವಾತಾವರಣ ನಿರ್ಮಾಣವಾಗಬೇಕು. ಎಲ್ಲಾ ಧರ್ಮಗಳ ಸಂಪ್ರದಾಯ ಆಚರಣೆಗೆ ಸರ್ಕಾರ ಅವಕಾಶ ಮಾಡಿಕೊಡಬೇಕು ಎಂದು ಹೇಳಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement