ನವದೆಹಲಿ: ರಾಜಕೀಯ ಪಕ್ಷಗಳಿಗೆ ಅನಾಮಧೇಯವಾಗಿ ನಿಧಿ ಒದಗಿಸುವುದಕ್ಕೆ ಸಮ್ಮತಿಸುವ ಚುನಾವಣಾ ಬಾಂಡ್ ಯೋಜನೆ ಪ್ರಶ್ನಿಸಿದ್ದ ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡುವುದಾಗಿ ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.
ಚುನಾವಣಾ ಬಾಂಡ್ ಯೋಜನೆಗೆ ಸಂಬಂಧಿಸಿದ ಇತ್ತೀಚಿನ ಅಧಿಸೂಚನೆ ಪ್ರಶ್ನಿಸಿ ಹಿರಿಯ ನ್ಯಾಯವಾದಿ ಅನೂಪ್ ಚೌಧರಿ ಹೊಸ ಮನವಿ ಸಲ್ಲಿಸಿದ ನಂತರ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ. ವೈ. ಚಂದ್ರಚೂಡ ಅವರು ಮನವಿಯನ್ನು ವಿಚಾರಣೆಗೆ ಪಟ್ಟಿ ಮಾಡುವುದಾಗಿ ಹೇಳಿದ್ದಾರೆ.
ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಶಾಸಕಾಂಗ ಸಭೆಗಳಿಗೆ ಸಾರ್ವತ್ರಿಕ ಚುನಾವಣೆ ನಡೆಯುವ ವರ್ಷದಲ್ಲಿ ಚುನಾವಣಾ ಬಾಂಡ್ಗಳ ಮಾರಾಟಕ್ಕೆ 15 ದಿನಗಳ ಹೆಚ್ಚುವರಿ ಅವಧಿ ಒದಗಿಸುವುದಕ್ಕಾಗಿ ಹೊಸ ಅಧಿಸೂಚನೆಯು ಯೋಜನೆಗೆ ತಿದ್ದುಪಡಿ ತಂದಿದೆ.
ಚುನಾವಣಾ ಬಾಂಡ್ನ ಈ ಹೊಸ ಅಧಿಸೂಚನೆ ಪ್ರಕಾರ “ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಶಾಸಕಾಂಗ ಸಭೆಗಳಿಗೆ ಸಾರ್ವತ್ರಿಕ ಚುನಾವಣೆಯ ವರ್ಷದಲ್ಲಿ” ಚುನಾವಣಾ ಬಾಂಡ್ಗಳ ಮಾರಾಟಕ್ಕೆ “15 ದಿನಗಳ ಹೆಚ್ಚುವರಿ ಅವಧಿಯನ್ನು” ಒದಗಿಸಲು ಯೋಜನೆಯನ್ನು ತಿದ್ದುಪಡಿ ಮಾಡಿದೆ. “ಅವರು ಯೋಜನೆಯ ವಿರುದ್ಧ ಅಧಿಸೂಚನೆಯನ್ನು ಹೊರಡಿಸುತ್ತಿದ್ದಾರೆ. ಈ ಅಧಿಸೂಚನೆಯು ಸಂಪೂರ್ಣವಾಗಿ ಕಾನೂನುಬಾಹಿರವಾಗಿದೆ” ಎಂದು ಹಿರಿಯ ವಕೀಲ ಅನೂಪ್ ಚೌಧರಿ ಹೇಳಿದರು. ಈ ಮನವಿಗೆ ಪ್ರತಿಕ್ರಿಯೆ ನೀಡಿದ ಸುಪ್ರೀಂಕೋರ್ಟ್ ಸಿಜೆಐ ಚಂದ್ರಚೂಡ ಅವರು, ನಾವು ಅದನ್ನು ವಿಚಾರಣೆಗೆ ಪಟ್ಟಿ ಮಾಡುತ್ತೇವೆ ಎಂದು ಹೇಳಿದ್ದಾರೆ.
ಚುನಾವಣಾ ಬಾಂಡ್ ಎಂಬುದು ಪ್ರಾಮಿಸರಿ ನೋಟಿನ ರೂಪದಲ್ಲಿದ್ದು, ಅದನ್ನು ಭಾರತೀಯತೆಯನ್ನು ಹೊಂದಿರುವ ಯಾವುದೇ ವ್ಯಕ್ತಿ, ಕಂಪೆನಿ, ಸಂಸ್ಥೆ ಅಥವಾ ಸಂಘಟನೆಯ ಖರೀದಿಸಬಹುದಾಗಿದೆ. . ಚುನಾವಣಾ ಬಾಂಡ್ ವಿವಿಧ ಮೌಲ್ಯಗಳಲ್ಲಿ ಲಭ್ಯವಿದ್ದು, ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡುವ ನಿರ್ದಿಷ್ಟ ಉದ್ದೇಶಕ್ಕಾಗಿ ಅವುಗಳನ್ನು ನೀಡಲಾಗುತ್ತದೆ.
ಹಲವು ಡಿನಾಮಿನೇಷನ್ಗಳಲ್ಲಿ ಬರುವ ಬಾಂಡ್ಗಳನ್ನು ನಿರ್ದಿಷ್ಟವಾಗಿ ದೇಶದಲ್ಲಿ ಅದರ ಅಸ್ತಿತ್ವದಲ್ಲಿರುವ ಯೋಜನೆಯಲ್ಲಿ ರಾಜಕೀಯ ಪಕ್ಷಗಳಿಗೆ ನಿಧಿಯ ಕೊಡುಗೆಯ ಉದ್ದೇಶಕ್ಕಾಗಿ ನೀಡಲಾಗುತ್ತದೆ. ಎಲೆಕ್ಟೋರಲ್ ಬಾಂಡ್ಗಳನ್ನು ಹಣಕಾಸು ಕಾಯಿದೆ 2017 ರ ಮೂಲಕ ಪರಿಚಯಿಸಲಾಯಿತು, ಇದು ಅಂತಹ ಬಾಂಡ್ಗಳನ್ನು ಪರಿಚಯಿಸಲು ಆರ್ಬಿಐ (RBI) ಕಾಯ್ದೆ, ಆದಾಯ ತೆರಿಗೆ ಕಾಯ್ದೆ ಮತ್ತು ಜನರ ಪ್ರಾತಿನಿಧ್ಯ ಕಾಯ್ದೆ ಸೇರಿ ಇತರ ಮೂರು ಕಾನೂನುಗಳನ್ನು ತಿದ್ದುಪಡಿ ಮಾಡಿದೆ.
ನಿಮ್ಮ ಕಾಮೆಂಟ್ ಬರೆಯಿರಿ