ದೆಹಲಿ-ಹುಬ್ಬಳ್ಳಿ – ದೆಹಲಿ ಇಂಡಿಗೋ ವಿಮಾನಯಾನಕ್ಕೆ ಸಚಿವ ಜೋಶಿ ಚಾಲನೆ

ಹುಬ್ಬಳ್ಳಿ: ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ಜೊತೆ ವರ್ಚುವಲ್ ಸಭೆಯ ಮೂಲಕ ದೆಹಲಿ-ಹುಬ್ಬಳ್ಳಿ, ಹುಬ್ಬಳ್ಳಿ-ದೆಹಲಿ ನಡುವೆ ನೇರ ವಿಮಾನಯಾನಕ್ಕೆ ಇಂದು, ಸೋಮವಾರ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಈ ವಿಮಾನಯಾನ ಸೇವೆಯಿಂದ ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕ ಜನರ ಬಹುದಿನಗಳ ಕನಸು ಈಡೇರಿದಂತಾಗಿದೆ. ಹುಬ್ಬಳ್ಳಿಯಿಂದ ರಾಷ್ಟ್ರ ರಾಜಧಾನಿಗೆ ನೇರ ಸಂಪರ್ಕ ದೊರೆತಿರುವುದು ನಗರದ ಪ್ರಗತಿಯ ದೃಷ್ಟಿಯಿಂದ ಮಹತ್ವದ ಮೈಲಿಗಲ್ಲಾಗಿದೆ. ಕೇವಲ 2 ಗಂಟೆ 30 ನಿಮಿಷದಲ್ಲಿ ದೆಹಲಿ ತಲುಪಬಹುದಾಗಿದ್ದು, ಪ್ರತಿ ನಿತ್ಯ ಈ ಸೇವೆ ಲಭ್ಯವಿರುವುದರಿಂದ ಪ್ರಯಾಣಿಕರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಪ್ರಹ್ಲಾದ ಜೋಶಿ ಹೇಳಿದ್ದಾರೆ.

ನನ್ನ ಪ್ರಸ್ತಾವನೆಗೆ ಅನುಮೋದನೆ ನೀಡಿ ವಿಮಾನಯಾನ ಸೇವೆ ಪ್ರಾರಂಭಿಸುವ ನಿರ್ಧಾರ ಕೈಗೊಂಡ ಪ್ರಧಾನಿ ಮೋದಿ, ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ಇಂಡಿಗೋ ಸಂಸ್ಥೆಯ ಅಧಿಕಾರಿಗಳಿಗೆ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ. ಅಲ್ಲದೆ, ಈ ಭಾಗದ ಜನರಿಗೆ ಅನುಕೂಲವಾಗುವಂತೆ ಹುಬ್ಬಳ್ಳಿ-ಅಹಮದಾಬಾದ್ ಸಂಪರ್ಕವನ್ನು ಆದಷ್ಟು ಬೇಗ ಮಾಡುವಂತೆ ಜೋಶಿ ಇಂಡಿಗೋ ಅಧಿಕಾರಿಗಳಿಗೆ ಮನವಿ ಮಾಡಿದರು. ದೆಹಲಿ ಸಂಪರ್ಕ ಆರಂಭವಾಗಿರುವುದರಿಂದ ಇದೀಗ ಸ್ಥಗಿತಗೊಂಡಿರುವ ಹುಬ್ಬಳ್ಳಿಯ ಕಾರ್ಗೋ ಸೇವೆಯನ್ನು ಪುನರರಾಂಭಿಸುವಂತೆ ಸೂಚಿಸಿದರು.

ಪ್ರಮುಖ ಸುದ್ದಿ :-   ಬಿಜೆಪಿ ಅಭ್ಯರ್ಥಿಗಳ 7ನೇ ಪಟ್ಟಿ ಪ್ರಕಟ : ಚಿತ್ರದುರ್ಗದಲ್ಲಿ ಹಾಲಿ ಸಂಸದರಿಗೆ ಕೊಕ್, ಯಡಿಯೂರಪ್ಪ ಆಪ್ತನಿಗೆ ಟಿಕೆಟ್‌

ದೇಶದ ಬೇರೆ ಬೇರೆ ಸ್ಥಳಗಳಿಗೆ ಹುಬ್ಬಳ್ಳಿಯಿಂದ ಹೆಚ್ಚಿನ ವಿಮಾನಯಾನ ಸಂಪರ್ಕದಿಂದ ಈ ಭಾಗದ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚಿನ ಚಾಲನೆಯೂ ದೊರಕಲಿದೆ ಎಂದು ಸಚಿವರು ಹೇಳಿದರು.
ಈ ಸಮಯದಲ್ಲಿ ಇಂಡಿಗೋ ಸಂಸ್ಥೆಯ ಅಕ್ಷಯ ಪಾಟೀಲ ಅವರು ವಿಮಾನ ಹಾರಾಟಕ್ಕೆ ಮೊದಲು ಪ್ರಯಾಣಿಕರನ್ನುದ್ದೇಶಿಸಿ ಮಾತನಾಡಿ, 1700 ಕಿಮೀ ಅಂತರದ ಹುಬ್ಬಳ್ಳಿಯಿಂದ ದೆಹಲಿಗೆ ಸಂಚರಿಸಲು ಹುಬ್ಬಳ್ಳಿ ಜನಕ್ಕೆ ಈವರೆಗೆ ಎರಡೂವರೆ ದಿವಸ ಬೇಕಾಗಿತ್ತು. ಆದರೆ ಈಗ ಕೇವಲ ಎರಡೂವರೆ ಗಂಟೆಗಳಲ್ಲೆ ತಲುಪಬಹುದು ಎಂದರು.
ಇಂಡಿಗೋ ವಿಮಾನ ಪ್ರತಿದಿನ ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನ ಸಂಖ್ಯೆ 6ಇ 5625 ಬೆಳಿಗ್ಗೆ 10ಕ್ಕೆ ಹೊರಟು ಹುಬ್ಬಳ್ಳಿಯನ್ನು 12:45 ಕ್ಕೆ ತಲುಪಲಿದೆ. ಮರಳಿ ಮಧ್ಯಾಹ್ನ 1:15 ಕ್ಕೆ ಹುಬ್ಬಳ್ಳಿಯಿಂದ ಹೊರಟು 3:45ಕ್ಕೆ ದೆಹಲಿ ತಲುಪಲಿದೆ.

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement