ನವದೆಹಲಿ: ಆಘಾತಕಾರಿ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಸಂಗಾತಿಯನ್ನು ಕೊಂದು, ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ 18 ದಿನಗಳಲ್ಲಿ ದೆಹಲಿಯಾದ್ಯಂತ ಬೇರೆ ಬೇರೆ ಕಡೆ ಎಸೆದಿದ್ದಾನೆ ಎಂದು ವರದಿಯಾಗಿದೆ. ರಾಜಧಾನಿ ನವದೆಹಲಿಯಲ್ಲಿ ಈ ಘಟನೆ ವರದಿಯಾಗಿದೆ.
ದೆಹಲಿ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ ನಂತರ ವಿಷಯ ಬೆಳಕಿಗೆ ಬಂದಿದೆ. ಆರೋಪಿಯನ್ನು ಮೃತಳ ಶ್ರದ್ಧಾ ಗೆಳೆಯ ಅಫ್ತಾಬ್ ಅಮೀನ್ ಪೂನಾವಾಲಾ ಎಂದು ಗುರುತಿಸಲಾಗಿದೆ.
ದೆಹಲಿ ಪೊಲೀಸರ ಪ್ರಕಾರ, ಅಫ್ತಾಬ್ ಅಮೀನ್ ಪೂನಾವಾಲಾ ಮತ್ತು ಶ್ರದ್ಧಾ ಪ್ರೀತಿಸುತ್ತಿದ್ದರು. ಅವರು ಲಿವ್-ಇನ್ ಸಂಬಂಧದಲ್ಲಿದ್ದರು. ಆದರೆ, ಮೇ 18 ರಂದು ಜಗಳವಾಡಿದ ಶ್ರದ್ಧಾಳನ್ನು ಅಫ್ತಾಬ್ ಕತ್ತು ಹಿಸುಕಿ ಕೊಂದಿದ್ದಾನೆ. ಬಳಿಕ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿದ್ದಾನೆ. ನಂತರ ದೇಹದ ಭಾಗಗಳನ್ನು ಇಡಲು ಫ್ರಿಡ್ಜ್ ಖರೀದಿಸಿದ್ದಾನೆ. ನಂತರ, ಮುಂದಿನ 18 ದಿನಗಳಲ್ಲಿ, ಆತ ಬೆಳಿಗ್ಗೆ 2 ಗಂಟೆಗೆ ದೆಹಲಿಯ ವಿವಿಧ ಸ್ಥಳಗಳಲ್ಲಿ ದೇಹದ ಭಾಗಗಳನ್ನು ಎಸೆದಿದ್ದಾನೆ.
ವರದಿಗಳನ್ನು ನಂಬುವುದಾದರೆ, 26 ವರ್ಷದ ಶ್ರದ್ಧಾ ಮುಂಬೈನ ಬಹುರಾಷ್ಟ್ರೀಯ ಕಂಪನಿಯ ಕಾಲ್ ಸೆಂಟರ್ನಲ್ಲಿ ಕೆಲಸ ಮಾಡುತ್ತಿದ್ದಾಗ ಪೂನಾವಾಲಾ ಅವರನ್ನು ಪರಿಚಯವಾಗಿದೆ. ಇಬ್ಬರೂ ಡೇಟಿಂಗ್ ಮಾಡಲು ಪ್ರಾರಂಭಿಸಿದರು ಮತ್ತು ಒಟ್ಟಿಗೆ ತೆರಳಿದರು. ಅವರ ಕುಟುಂಬವು ಅವರ ಸಂಬಂಧವನ್ನು ಒಪ್ಪದ ನಂತರ, ದಂಪತಿ ದೆಹಲಿಗೆ ಬಂದರು. ಅವರು ಮೆಹ್ರೌಲಿಯ ಫ್ಲಾಟ್ನಲ್ಲಿ ವಾಸಿಸುತ್ತಿದ್ದರು.
ಇದಾದ ಸ್ವಲ್ಪ ಸಮಯದ ನಂತರ, ಶ್ರದ್ಧಾ ತನ್ನ ಕುಟುಂಬದ ಫೋನ್ ಕರೆಗಳಿಗೆ ಪ್ರತಿಕ್ರಿಯಿಸುವುದನ್ನು ನಿಲ್ಲಿಸಿದ್ದಾಳೆ. ಇದರಿಂದ ನವೆಂಬರ್ 8 ರಂದು ಆಕೆಯ ತಂದೆ ವಿಕಾಸ್ ಮದನ್ ಮಗಳನ್ನು ಭೇಟಿ ಮಾಡಬೇಕು ಎಂದು ದೆಹಲಿಗೆ ಬಂದಿದ್ದರು. ಅವರು ಫ್ಲಾಟ್ ತಲುಪಿದಾಗ, ಅದು ಲಾಕ್ ಆಗಿತ್ತು. ಅವರು ಮೆಹ್ರೌಲಿ ಪೊಲೀಸರನ್ನು ಸಂಪರ್ಕಿಸಿದರು ಮತ್ತು ಅಪಹರಣದ ಆರೋಪದ ಮೇಲೆ ದೂರು ದಾಖಲಿಸಿದರು.
ಅವರ ದೂರಿನ ಆಧಾರದ ಮೇಲೆ ಪೊಲೀಸರು ಪೂನಾವಾಲಾನನ್ನು ಶನಿವಾರ ಬಂಧಿಸಿದ್ದಾರೆ. ಶ್ರದ್ಧಾ ತನ್ನನ್ನು ಮದುವೆಯಾಗು ಎಂದು ಹಠ ಮಾಡುತ್ತಿದ್ದುದ್ದರಿಂದ ಇಬ್ಬರ ಮಧ್ಯೆ ಆಗಾಗ್ಗೆ ಜಗಳವಾಗುತ್ತಿತ್ತು ಎಂದು ತನಿಖೆಯ ವೇಳೆ ಆತ ಬಹಿರಂಗಪಡಿಸಿದ್ದಾನೆ. ಅಲ್ಲದೆ ಶ್ರದ್ಧಾಳನ್ನು ಕೊಂದು ಶವವನ್ನು ತುಂಡು ತುಂಡು ಮಾಡಿ ದೆಹಲಿಯ ಬೇರೆ ಬೇರೆ ಕಡೆ ಹಾಕಿರುವುದರ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ.
ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ಶ್ರದ್ಧಾ ಶವಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ