ವಿದ್ವತ್‌ ಮೇಲೆ ಹಲ್ಲೆ ಪ್ರಕರಣ: ನಲಪಾಡ ವಿರುದ್ಧದ ವಿಚಾರಣೆ ಮುಂದುವರಿಕೆಗೆ ನ್ಯಾಯಾಲಯ ಸಮ್ಮತಿ

ಬೆಂಗಳೂರು: ಬೆಂಗಳೂರಿನ ಉದ್ಯಮಿಯೊಬ್ಬರ ಪುತ್ರ ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಶಾಸಕ ಎನ್ ಎ ಹ್ಯಾರಿಸ್ ಪುತ್ರ ಹಾಗೂ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್‌ ವಿರುದ್ಧದ ವಿಚಾರಣೆಗೆ ಕರ್ನಾಟಕ ಹೈಕೋರ್ಟ್‌ ನೀಡಿದ್ದ ತಡೆಯಾಜ್ಞೆ ವಿಸ್ತರಣೆಯಾಗಿಲ್ಲವಾದ್ದರಿಂದ ಬೆಂಗಳೂರಿನ ವಿಚಾರಣಾಧೀನ ನ್ಯಾಯಾಲಯವು ವಿಚಾರಣೆಗೆ ಸಮ್ಮತಿ ಸೂಚಿಸಿದೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ.
ವರದಿ ಪ್ರಕಾರ, ಹಿರಿಯ ವಕೀಲ ಶ್ಯಾಂಸುಂದರ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕರಾಗಿ ಮುಂದುವರಿಸಲು ಮತ್ತು ಪ್ರಕರಣದ ವಿಚಾರಣೆ ಮುಂದುವರಿಸುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು 66ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಧೀಶರಾದ ಎಸ್‌ ನಟರಾಜ್‌ ಅವರು ಮಾನ್ಯ ಮಾಡಿದ್ದಾರೆ.

ಹಿರಿಯ ವಕೀಲ ಎಂ ಶ್ಯಾಂಸುಂದರ ಪ್ರಾಸಿಕ್ಯೂಷನ್‌ ಪರವಾಗಿ ಈ ನ್ಯಾಯಾಲಯದಲ್ಲಿ ವಾದ ಮಂಡಿಸಲು ಅರ್ಹರು. ಆರು ತಿಂಗಳಿಂದ ಪ್ರಕರಣಕ್ಕೆ ನೀಡಲಾಗಿದ್ದ ತಡೆಯಾಜ್ಞೆ ಮುಂದುವರಿಸಿಲ್ಲವಾದ್ದರಿಂದ ವಿಚಾರಣೆಗೆ ಅನುಮತಿಸಲಾಗಿದೆ” ಎಂದು ಕೋರ್ಟ್‌ ಆದೇಶದಲ್ಲಿ ಹೇಳಿದೆ.
ಮೊಹಮ್ಮದ್ ನಲಪಾಡ್‌ ಮತ್ತು ಅವರ ಸಹಚರರು ಬೆಂಗಳೂರಿನ ಯುಬಿ ಸಿಟಿಯ ಫರ್ಜಿ ಕೆಫೆಯಲ್ಲಿ 2018ರ ಫೆಬ್ರವರಿ 17ರ ರಾತ್ರಿ ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿದ್ದಾರೆ. 2018ರ ಜೂನ್‌ 14ರಂದು ಹೈಕೋರ್ಟ್ ಜಾಮೀನು ನೀಡುವಾಗ ಆರೋಪಿ ಬೆಂಗಳೂರು ನಗರದ ನ್ಯಾಯಾಲಯದ ವ್ಯಾಪ್ತಿ ಬಿಟ್ಟು ಹೊರಗೆ ಹೋಗಬಾರದು ಎಂಬ ಷರತ್ತನ್ನು ವಿಧಿಸಿತ್ತು. ನಂತರ ಮೆಕ್ಕಾಗೆ ತೆರಳಲು ಜಾಮೀನು ಷರತ್ತು ಸಡಿಲಿಕೆ ಮಾಡಿತ್ತು. ಆನಂತರ ಪ್ರಕರಣದ ವಿಚಾರಣೆಗೆ ತಡೆ ನೀಡಿತ್ತು. ತಡೆಯಾಜ್ಞೆಯನ್ನು ಆರು ತಿಂಗಳಿಂದ ವಿಸ್ತರಣೆ ಮಾಡದಿರುವುದರಿಂದ ನಲಪಾಡ್‌ ವಿಚಾರಣೆ ಎದುರಿಸಬೇಕಿದೆ.

ಪ್ರಮುಖ ಸುದ್ದಿ :-   ಗದಗ: ನಗರಸಭೆ ಅಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement