ಶ್ರದ್ಧಾ ಭೀಕರ ಕೊಲೆ ಪ್ರಕರಣ : ಬಂಬಲ್ ಅಲ್ಲದೆ ಇತರ ಡೇಟಿಂಗ್ ಪ್ಲಾಟ್‌ಫಾರ್ಮ್‌ಗಳಲ್ಲೂ ಅಫ್ತಾಬ್ ಸಕ್ರಿಯ-ಮೂಲಗಳು

ನವದೆಹಲಿ: ತನ್ನ ಲೈವ್-ಇನ್ ಪಾಲುದಾರ ಅಫ್ತಾಬ್ ಅಮೀನ್ ಪೂನಾವಾಲಾ ಕೈಯಿಂದ ಹತ್ಯೆಯಾದ ಶ್ರದ್ಧಾ ವಾಕರ್ ಪ್ರಕರಣದ ಬೆಚ್ಚಿಬೀಳಿಸುವ ಸಂಗತಿಗಳು ಒಂದೊಂದಾಗಿ ಹೊರಬರುತ್ತಿದೆ. ಡೇಟಿಂಗ್ ಅಪ್ಲಿಕೇಶನ್ ಬಂಬಲ್ ಹೊರತುಪಡಿಸಿ, ಆರೋಪಿಯು ಇತರ ಡೇಟಿಂಗ್ ಪ್ಲಾಟ್‌ಫಾರ್ಮ್‌ಗಳಲ್ಲಿಯೂ ಸಕ್ರಿಯನಾಗಿದ್ದ ಎಂದು ಮೂಲಗಳು ಹೇಳುತ್ತವೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಇದಲ್ಲದೆ, ಅಪರಾಧದ ಸಮಯದಲ್ಲಿ ಅಫ್ತಾಬ್ ಒಂದಕ್ಕಿಂತ ಹೆಚ್ಚು ಮಹಿಳೆಯರೊಂದಿಗೆ … Continued

ಇನ್ನು ವಿಮಾನಗಳಲ್ಲಿ ಫೇಸ್ ಮಾಸ್ಕ್ ಕಡ್ಡಾಯವಲ್ಲ: ವಿಮಾನಯಾನ ಸಚಿವಾಲಯ

ನವದೆಹಲಿ: ವಿಮಾನ ಪ್ರಯಾಣದ ವೇಳೆ ಇನ್ನು ಫೇಸ್ ಮಾಸ್ಕ್ ಕಡ್ಡಾಯವಲ್ಲ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಬುಧವಾರ ಹೇಳಿದೆ. ಆದಾಗ್ಯೂ, ಕೊರೊನಾ ವೈರಸ್ ಬೆದರಿಕೆಯನ್ನು ಗಮನದಲ್ಲಿಟ್ಟುಕೊಂಡು ಪ್ರಯಾಣಿಕರು ಅವುಗಳನ್ನು ಬಳಸಬೇಕು ಎಂದು ಸಚಿವಾಲಯ ತಿಳಿಸಿದೆ. ವಿಮಾನ ಪ್ರಯಾಣದ ಸಮಯದಲ್ಲಿ ಮಾಸ್ಕ್ ಅಥವಾ ಫೇಸ್ ಕವರ್‌ಗಳನ್ನು ಕಡ್ಡಾಯವಾಗಿ ಬಳಸುವ ಅವಶ್ಯಕತೆಯ ಕುರಿತು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ … Continued

ಬಿಜೆಪಿ ಪರವಾಗಿ ಕೆಲಸ ಮಾಡಿದವರನ್ನಿಟ್ಟುಕೊಂಡು ಹೋದರೆ ಚುನಾವಣೆಯಲ್ಲಿ ಗೆಲುವು ಕಷ್ಟವಾಗಬಹುದು : ಸಿದ್ದರಾಮಯ್ಯಗೆ ಮುನಿಯಪ್ಪ ಎಚ್ಚರಿಕೆ

ಬೆಂಗಳೂರು: ಕಳೆದ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಕೆಲಸ ಮಾಡಿದವರ ಮುಂದಾಳತ್ವದಲ್ಲಿ ಚುನಾವಣೆ ನಡೆಸಿದರೆ ಗೆಲವು ಕಷ್ಟವಾಗಬಹುದು ಎಂದು ಕಾಂಗ್ರೆಸ್ ಹಿರಿಯ ನಾಯಕ ಕೆ.ಎಚ್. ಮುನಿಯಪ್ಪ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರ ಜಿಲ್ಲಾ ಕಾಂಗ್ರೆಸ್ಸಿನಲ್ಲಿರುವ ಸಮಸ್ಯೆಗಳನ್ನು ಸರಿಪಡಿಸಿಕೊಂಡು ಬಳಿಕ ಸ್ಪರ್ಧೆ ಮಾಡುವಂತೆ ಸಲಹೆ ನೀಡಿದ್ದಾರೆ. ಸಿದ್ಧರಾಮಯ್ಯ ಪ್ರಭಾವಿ … Continued

ಪಕ್ಷದ ವಿರುದ್ಧವೇ ವಾಗ್ದಾಳಿ ನಡೆಸಿದ ‘ಅಪಹರಣಕ್ಕೊಳಗಾದ’ ಗುಜರಾತ್ ಎಎಪಿ ಅಭ್ಯರ್ಥಿ: ಸ್ವಯಂಪ್ರೇರಿತವಾಗಿ ಚುನಾವಣೆಯಿಂದ ಹಿಂದೆ ಸರಿದಿದ್ದೇನೆ ಎಂದ ಜರಿವಾಲಾ

ಎಎಪಿ ತನ್ನ ಗುಜರಾತ್ ಚುನಾವಣಾ ಅಭ್ಯರ್ಥಿ ಕಾಂಚನ್ ಜರಿವಾಲಾ ಅವರನ್ನು ಬಿಜೆಪಿ ಅಪಹರಿಸಿದೆ ಎಂಬ ಹೇಳಿಕೆ ನೀಡಿದ ನಂತರ ಈ ಪ್ರಕರಣ ನಾಟಕೀಯ ತಿರುವು ಪಡೆದಿದ್ದು, ಅಪಹರಣಕ್ಕೊಳಗಾದ ನಾಯಕ ತನ್ನದೇ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಮತ್ತು ಎಎಪಿ ಕಾರ್ಯಕರ್ತರು ತನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಜರಿವಾಲಾ ಅವರು ಭಾರತೀಯ ಜನತಾ ಪಕ್ಷ (ಬಿಜೆಪಿ) … Continued

ಜಿ20 ಶೃಂಗಸಭೆ: ‘ಸೋರಿಕೆ’ಯಾದ ಮಾತುಕತೆ ಕುರಿತು ಕೆನಡಾದ ಟ್ರುಡೊ-ಚೀನಾದ ಜಿನ್‌ಪಿಂಗ್ ನಡುವೆ ಬಿಸಿ ಮಾತಿನ ವಿನಿಮಯ..!

ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಮತ್ತು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ನಡುವೆ ಬಿಸಿ ಮಾತಿನ ನಡೆದಿದ್ದು, ಇಬ್ಬರು ವಿಶ್ವ ನಾಯಕರ ನಡುವಿನ ಸಂಭಾಷಣೆಯ ವಿವರಗಳು ಸೋರಿಕೆಯಾದ ಬಗ್ಗೆ ಚೀನಾ ಅಧ್ಯಕ್ಷ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಾಲಿಯಲ್ಲಿ ನಡೆದ ಜಿ20 ಶೃಂಗಸಭೆಯ ಸಂದರ್ಭದಲ್ಲಿ ನಾಯಕರ ನಡುವೆ ಈ ಕಠಿಣ ಮಾತುಕತೆ ನಡೆದಿದೆ. ಕೆನಡಾದ ಪ್ರೆಸ್ ಸೆರೆಹಿಡಿದ ವೀಡಿಯೊದಲ್ಲಿ, … Continued

G20ಯಲ್ಲಿ ಪ್ರಧಾನಿ ಮೋದಿಗೆ ಸೆಲ್ಯೂಟ್‌ ಮಾಡಿದ ಅಮೆರಿಕ ಅಧ್ಯಕ್ಷ ಬೈಡನ್‌

ಜಿ 20 ಶೃಂಗಸಭೆಯ ಹಿನ್ನಲೆಯಲ್ಲಿ ಬಾಲಿಯ ಮ್ಯಾಂಗ್ರೋವ್ ಅರಣ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನಾಯಕರು ಭೇಟಿಯಾದಾಗ ಶುಭಾಶಯ ವಿನಿಮಯ ಮಾಡಿಕೊಳ್ಳುವ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಸೆಲ್ಯೂಟ್‌ ಮಾಡಿದ್ದಾರೆ. ಬೈಡನ್‌ ಸೆಲ್ಯೂಟ್‌ ಮಾಡುತ್ತಿರುವ ಚಿತ್ರದಲ್ಲಿ ಮೋದಿಯನ್ನೂ ಕಾಣಬಹುದು. G20 ಶೃಂಗಸಭೆಯ ಮೊದಲ ದಿನ ಹಸ್ತಲಾಘವ ವಿನಿಮಯ ಮಾಡುವಾಗ ಇಬ್ಬರೂ … Continued

ಶ್ರದ್ಧಾ ಕೊಲೆ ಪ್ರಕರಣ: ಅಫ್ತಾಬ್‌ನ ಸುಳ್ಳನ್ನು ಭೇದಿಸಿ ಐದಾರು ತಿಂಗಳ ಹಿಂದೆ ನಡೆದ ಭೀಕರ ಕೊಲೆ ಪ್ರಕರಣವನ್ನು ದೆಹಲಿ ಪೊಲೀಸರು ಪತ್ತೆಹಚ್ಚಿದ್ದು ಹೀಗೆ..

ನವದೆಹಲಿ: ಶ್ರದ್ಧಾ ವಾಕರ್ ಭೀಕರ ಹತ್ಯೆ ಪ್ರಕರಣದ ಆರೋಪಿ, ಬಂಧಿತ ಆಫ್ತಾಬ್ ಅಮೀನ್ ಪೂನಾವಾಲಾ ತನಿಖೆಯ ಆರಂಭದಲ್ಲಿ ದೆಹಲಿ ಮತ್ತು ಮುಂಬೈ ಪೊಲೀಸರನ್ನು ದಿಕ್ಕುತಪ್ಪಿಸಲು ಯತ್ನಿಸಿದ್ದ. ಅಫ್ತಾಬ್ ಭೌತಿಕ ಪುರಾವೆಗಳನ್ನು ನಾಶ ಮಾಡುವ ಮೂಲಕ ಶ್ರದ್ಧಾ ಹತ್ಯೆಯನ್ನು ಮರೆಮಾಚಲು ಪ್ರಯತ್ನಿಸಿದ್ದ, ಆದಾಗ್ಯೂ, ಪೊಲೀಸರು ಡಿಜಿಟಲ್ ಪುರಾವೆಗಳ ಮೂಲಕ ಭೀಕರ ಕೊಲೆ ಪ್ರಕರಣವನ್ನು ಭೇದಿಸಿದರು. ದೆಹಲಿ ಪೊಲೀಸರು … Continued

ಜೆಎಸ್ಎಸ್  ಸಂಸ್ಥೆಯ ಶಾಲೆಯ ಮಕ್ಕಳು ರಾಷ್ಟ್ರಮಟ್ಟದ ಜಿಮ್ನಾಸ್ಟಿಕ್ ಸ್ಪರ್ಧೆಗೆ ಆಯ್ಕೆ

ಧಾರವಾಡ: ಜನತಾ ಶಿಕ್ಷಣ ಸಮಿತಿಯ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಹಾಗೂ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಜಿಮ್ನಾಸ್ಟಿಕ್ಸ್ ಸ್ಪರ್ಧೆಗಳಲ್ಲಿ ಭಾಗವಹಿಸಿ ವೈಯಕ್ತಿಕ ವೀರಾಗ್ರಣಿ ಮತ್ತು ಚಿನ್ನ ಮತ್ತು ಬೆಳ್ಳಿಯ ಪದಕ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಹಾಗೂ ಸಂಸ್ಥೆಗೆ ಹಾಗೂ ಶಾಲೆಗೆ ಅಪಾರ ಕೀರ್ತಿ ತಂದಿದ್ದಾರೆ. ಎಲ್ಲ ವಿದ್ಯಾರ್ಥಿಗಳ ಸಾಧನೆಯನ್ನು … Continued

ರೈಲುಗಳಲ್ಲಿ ಇನ್ಮುಂದೆ ಸಿಗಲಿದೆ ಸ್ಥಳೀಯ ಆಹಾರ: ಪ್ರಾದೇಶಿಕ ಖಾದ್ಯಗಳಿಗೆ ಆದ್ಯತೆ ನೀಡಲು ಐಆರ್‌ಸಿಟಿಸಿಗೆ ಅಧಿಕಾರ

ಹುಬ್ಬಳ್ಳಿ: ರೈಲುಗಳಲ್ಲಿ ಏಕರೂಪದ ಆಹಾರ ಖಾದ್ಯಗಳ ಬದಲು ಭಾರತದ ಪ್ರಾದೇಶಕ ಖಾದ್ಯವೈವಿಧ್ಯಗಳಿಗೆ ಆದ್ಯತೆ ನೀಡಲು ರೈಲ್ವೆ ಸಚಿವಾಲಯವು ಐಆರ್‌ಸಿಟಿಸಿ (ಇಂಡಿಯನ್ ರೈಲ್ವೆ ಕೇಟರಿಂಗ್ ಅಂಡ್ ಟೂರಿಸಂ ಕಾರ್ಪೊರೇಷನ್)ಗೆ ಅಧಿಕಾರ ನೀಡಿ ಸುತ್ತೋಲೆ ಹೊರಡಿಸಿದೆ. ಈ ಮೂಲಕ ಸಿರಿಧಾನ್ಯ ಆಧಾರಿತ ಆಹಾರ, ಹಬ್ಬ-ಹರಿದಿನಗಳಂದು ಪ್ರಯಾಣಿಸುವ ರೈಲು ಯಾತ್ರಿಕರಿಗೆ ವಿವಿಧ ಬಗೆಯ ಪಾಕ ವೈವಿಧ್ಯ ಭಕ್ಷ್ಯಗಳನ್ನು ಸವಿಯಲು ಸಾಧ್ಯವಾಗಲಿದೆ. … Continued

ಆರು ತಿಂಗಳಲ್ಲಿ ಸ್ಟಾರ್ಟಪ್ ಪಾರ್ಕ್, ಆರು ಹೈಟೆಕ್ ನಗರಗಳಿಗೆ ಯೋಜನೆ: ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ಸ್ಟಾರ್ಟಪ್ ಪರಿಸರ ವ್ಯವಸ್ಥೆಗೆ ದೊಡ್ಡ ಉತ್ತೇಜನ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಮುಂದಿನ ಆರು ತಿಂಗಳಲ್ಲಿ ಸ್ಟಾರ್ಟ್‌ಅಪ್ ಪಾರ್ಕ್ ಸ್ಥಾಪಿಸುವ ಯೋಜನೆಯನ್ನು ಬುಧವಾರ ಪ್ರಕಟಿಸಿದ್ದಾರೆ. ಅತ್ಯಾಧುನಿಕ ಉದ್ಯಾನವನವು ಅಗ್ರಿ-ಟೆಕ್, ಕ್ಲೈಮೇಟ್ ಟೆಕ್ ಮತ್ತು ಡೀಪ್ ಟೆಕ್ ಸೇರಿದಂತೆ ಉದಯೋನ್ಮುಖ ತಂತ್ರಜ್ಞಾನದಲ್ಲಿ ವಿಶೇಷತೆಯನ್ನು ಹೊಂದಲಿದೆ, ಇದು … Continued