ಜೆಎಸ್ಎಸ್  ಸಂಸ್ಥೆಯ ಶಾಲೆಯ ಮಕ್ಕಳು ರಾಷ್ಟ್ರಮಟ್ಟದ ಜಿಮ್ನಾಸ್ಟಿಕ್ ಸ್ಪರ್ಧೆಗೆ ಆಯ್ಕೆ

ಧಾರವಾಡ: ಜನತಾ ಶಿಕ್ಷಣ ಸಮಿತಿಯ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಹಾಗೂ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಜಿಮ್ನಾಸ್ಟಿಕ್ಸ್ ಸ್ಪರ್ಧೆಗಳಲ್ಲಿ ಭಾಗವಹಿಸಿ ವೈಯಕ್ತಿಕ ವೀರಾಗ್ರಣಿ ಮತ್ತು ಚಿನ್ನ ಮತ್ತು ಬೆಳ್ಳಿಯ ಪದಕ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಹಾಗೂ ಸಂಸ್ಥೆಗೆ ಹಾಗೂ ಶಾಲೆಗೆ ಅಪಾರ ಕೀರ್ತಿ ತಂದಿದ್ದಾರೆ.
ಎಲ್ಲ ವಿದ್ಯಾರ್ಥಿಗಳ ಸಾಧನೆಯನ್ನು ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿಗಳಾದ ಡಾ.ಅಜಿತಪ್ರಸಾದ್, ಐಟಿಐ ಕಾಲೇಜಿನ ಪ್ರಾಚಾರ್ಯರಾದ ಮಹಾವೀರ ಉಪಾಧ್ಯೆ, ಶಾಲೆಯ ಮುಖ್ಯಾಧ್ಯಾಪಕರಾದ ಉಷಾ ಸಂತೋಷ ಹಾಗೂ ಶ್ರೀಮತಿ ದಿವಟೆ, ಕ್ರೀಡಾ ನಿರ್ದೇಶಕರಾದ ಜೆ. ಆರ್. ಕುಂದಗೋಳ , ಶಾಲೆಯ ದೈಹಿಕ ಶಿಕ್ಷಕರಾದ ಜಿ. ಎಂ. ಕಲ್ಲೂರ ಶಿವಾನಂದ್ ಕುಂದಾಲ್ ಅಭಿನಂದಿಸಿದ್ದಾರೆ.

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement