ಶ್ರದ್ಧಾ ಕೊಲೆ ಪ್ರಕರಣ: ಮೆಹ್ರೌಲಿ ಅರಣ್ಯದಿಂದ 10 ಮೂಳೆಗಳನ್ನು ಪತ್ತೆ ಹಚ್ಚಿದ ಪೊಲೀಸರು

ನವದೆಹಲಿ: ದೆಹಲಿಯ ಚತ್ತರ್‌ಪುರ ಪ್ರದೇಶದಲ್ಲಿ ನಡೆದ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಮತ್ತೊಂದು ಮಹತ್ವದ ಬೆಳವಣಿಗೆಯಲ್ಲಿ ಪೊಲೀಸ್ ಅಧಿಕಾರಿಗಳು ಮೆಹ್ರೌಲಿ ಅರಣ್ಯ ಪ್ರದೇಶದಿಂದ 10 ಮೂಳೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಭಾಗಗಳನ್ನು ಮೃತ ಶ್ರದ್ಧಾಳ ತಂದೆ ವಿಕಾಸ್ ವಾಕರ್ ಅವರ ಡಿಎನ್‌ಎ ಜೊತೆ ಹೊಂದಾಣಿಕೆ ಮಾಡಿ ನೋಡಲಾಗುತ್ತದೆ.
ಮೂಲಗಳ ಪ್ರಕಾರ, ಪೊಲೀಸ್ ಅಧಿಕಾರಿಗಳು, ತನಿಖೆಯ ಸಮಯದಲ್ಲಿ, ಶ್ರದ್ಧಾ ಅವರ ದೇಹದ ಭಾಗದ್ದು ಎಂದು ಹೇಳಲಾದ ದೊಡ್ಡ ಮೂಳೆಯನ್ನು ವಶಪಡಿಸಿಕೊಂಡಿದ್ದಾರೆ. ಈಗ ಪತ್ತೆಯಾದ ದೇಹದ ಭಾಗಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ, ಪೊಲೀಸ್ ಅಧಿಕಾರಿಗಳು ಆರೋಪಿ ಅಫ್ತಾಬ್ ಪೂನಾವಾಲಾಗೆ ನಾರ್ಕೋ ಪರೀಕ್ಷೆಯನ್ನು ನಡೆಸುವ ಸಾಧ್ಯತೆಯಿದೆ, ಇದು ಹೆಚ್ಚಿನ ಸುಳಿವುಗಳನ್ನು ಕಂಡುಹಿಡಿಯಲು ಸಹಾಯ ಮಾಡುತ್ತದೆ.

ಆರೋಪಿಗಳ ವಿರುದ್ಧ ಹೆಚ್ಚಿನ ಸಾಕ್ಷ್ಯಾಧಾರಗಳನ್ನು ಪಡೆಯುವ ಪ್ರಯತ್ನದಲ್ಲಿ, ದೆಹಲಿ ಪೊಲೀಸ್ ಅಧಿಕಾರಿಗಳು ಬುಧವಾರ ಅಫ್ತಾಬ್ ಅಮೀನ್ ಪೂನವಾಲಾ ಅವರ ಲ್ಯಾಪ್‌ಟಾಪ್‌ನಿಂದ ಡೇಟಾವನ್ನು ಮರುಪಡೆಯಲಿದ್ದಾರೆ ಎಂದು ವರದಿಯಾಗಿದೆ. ದೆಹಲಿ ಪೊಲೀಸರು ಅಫ್ತಾಬ್ ಅವರ ಲ್ಯಾಪ್‌ಟಾಪ್ ಅನ್ನು ಮೆಹ್ರೌಲಿಯಲ್ಲಿರುವ ಅವರ ನಿವಾಸದಿಂದ ಜಪ್ತಿ ಮಾಡಿದ್ದಾರೆ. ಮೂಲಗಳ ಪ್ರಕಾರ, ಪೊಲೀಸ್ ಅಧಿಕಾರಿಗಳು ಆರೋಪಿಗಳನ್ನು ಇಬ್ಬರೂ ವಾಸಿಸುತ್ತಿದ್ದ ನಿವಾಸಕ್ಕೆ ಕರೆದೊಯ್ಯುವ ಸಾಧ್ಯತೆಯಿದೆ.
ಮಂಗಳವಾರ, ಜಂಟಿ ಪೊಲೀಸ್ ಆಯುಕ್ತರು ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮೇ 18 ರಂದು ಆಕೆಯ ಲಿವ್‌-ಇನ್ ಪಾಲುದಾರ 28 ವರ್ಷದ ಅಫ್ತಾಬ್ ಪೂನಾವಾಲಾರಿಂದ ಹತ್ಯೆಗೀಡಾದ ಶ್ರದ್ಧಾಳ ಕೊಲೆಯ ಬಗ್ಗೆ ಹೆಚ್ಚಿನ ತನಿಖೆ ನಡೆಸುವ ಬಗ್ಗೆ ಚರ್ಚಿಸಲು ಸಭೆ ನಡೆಸಿದರು.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ 2ನೇ ಹಂತದ ಮತದಾನ : ಶ್ರೀಮಂತ ಅಭ್ಯರ್ಥಿ ₹ 622 ಕೋಟಿ ಒಡೆಯ, ಅತ್ಯಂತ ಬಡ ಅಭ್ಯರ್ಥಿ ಬಳಿ ಇರುವುದು ಕೇವಲ...

ಪೊಲೀಸರು ಆರೋಪಿಯನ್ನು ಅವರ ನಿವಾಸಕ್ಕೆ ಕರೆದೊಯ್ದು ನಂತರ ಶ್ರದ್ಧಾ ಅವರ ದೇಹದ ಭಾಗಗಳನ್ನು ಎಸೆದ ಮೆಹ್ರೌಲಿ ಅರಣ್ಯ ಪ್ರದೇಶದಲ್ಲಿ ದೃಶ್ಯವನ್ನು ಮರುಸೃಷ್ಟಿಸುತ್ತಾರೆ. ನವೆಂಬರ್ 17, ಗುರುವಾರದಂದು ಅಫ್ತಾಬ್‌ನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ವರದಿಯಾಗಿದೆ.
ಇದಕ್ಕೂ ಮುನ್ನ ಪೊಲೀಸರು ಮೆಹ್ರೌಲಿ ಅರಣ್ಯದಿಂದ 10ಕ್ಕೂ ಹೆಚ್ಚು ಮಾದರಿಗಳನ್ನು ವಶಪಡಿಸಿಕೊಂಡಿದ್ದರು, ಅದು ಮಾನವನದ್ದಾಗಿರಬಹುದು. ಅಫ್ತಾಬ್ ಮೊದಲು ಶ್ರದ್ಧಾಳನ್ನು ಕತ್ತು ಹಿಸುಕಿ ನಂತರ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿದ್ದಾನೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ನಂತರ ಕೊಲೆಗಾರ ರೆಫ್ರಿಜರೇಟರ್ ಖರೀದಿಸಿ ಮುಂದಿನ 18 ದಿನಗಳವರೆಗೆ ಶ್ರದ್ಧಾ ಕತ್ತರಿಸಿದ ದೇಹದ ಭಾಗಗಳನ್ನು ಫ್ರಿಡ್ಜ್‌ನಲ್ಲಿ ಸಂಗ್ರಹಿಸಿ ಇಟ್ಟಿದ್ದ. ಬಳಿಕ ದೇಹದ ಭಾಗಗಳನ್ನು ದೆಹಲಿಯ ಮೆಹ್ರೌಲಿ ಅರಣ್ಯ ಪ್ರದೇಶಕ್ಕೆ ಎಸೆದಿದ್ದಾನೆ.
ಆಫ್ತಾಬ್ ಅಮೀನ್ ಪೂನಾವಾಲಾ ಮತ್ತು ಶ್ರದ್ಧಾ ವಾಕರ್ 2019 ರಲ್ಲಿ ಡೇಟಿಂಗ್ ಅಪ್ಲಿಕೇಶನ್‌ನಲ್ಲಿ ಭೇಟಿಯಾದರು.ಅಫ್ತಾಬ್ ಮತ್ತು ಶ್ರದ್ಧಾ ಮೇ 15 ರಂದು ಮೆಹ್ರಾಲಿಯಲ್ಲಿರುವ ಅಪಾರ್ಟ್‌ಮೆಂಟ್‌ಗೆ ತೆರಳಿದ್ದರು. ಮೇ 18 ರಂದು ಶ್ರದ್ಧಾಳನ್ನು ಅಫ್ತಾಬ್ ಕೊಲೆ ಮಾಡಿದ್ದಾನೆಮೇ 20 ರಂದು ಶ್ರದ್ಧಾ ಅವರ ಕತ್ತರಿಸಿದ ದೇಹದ ಭಾಗಗಳನ್ನು ಸಂಗ್ರಹಿಸಲು 300-ಲೀಟರ್ ರೆಫ್ರಿಜರೇಟರ್ ಅನ್ನು ಆಫ್ತಾಬ್ ಖರೀದಿಸಿದ. ಅಫ್ತಾಬ್ ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್‌ಗಳಲ್ಲಿ ಜುಲೈ 9 ರವರೆಗೆ ಶ್ರದ್ಧಾ ಹೆಸರಿನಲ್ಲಿ ಆಕ್ಟಿವ್‌ ಆಗಿದ್ದ. ನವೆಂಬರ್ 10 ರಂದು ಶ್ರದ್ಧಾ ತಂದೆ ಎಫ್‌ಐಆರ್ ದಾಖಲಿಸಿದ ನಂತರ ನವೆಂಬರ್ 14, ಸೋಮವಾರ ಅಫ್ತಾಬ್ ಅವರನ್ನು ಬಂಧಿಸಲಾಯಿತು.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ 2024 : 2ನೇ ಹಂತದ 88 ಕ್ಷೇತ್ರಗಳಲ್ಲಿ 63% ಮತದಾನ

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement