ನಾನು ಮೋದಿ ಭಕ್ತ’ ಎಂದು ಬಹಿರಂಗವಾಗಿ ಘೋಷಣೆ ಮಾಡಿದ ನಟ ಅನಂತ ನಾಗ್: ಯಾಕೆಂದರೆ…

ಬೆಂಗಳೂರು: ‘ಪ್ರಧಾನಿ ನರೇಂದ್ರ ಮೋದಿ (Narendra Modi) ಎಂಟೂವರೆ ವರ್ಷಗಳಲ್ಲಿ ಒಂದು ದಿನವೂ ರಜೆ ತಗೆದುಕೊಳ್ಳದೇ ಕೆಲಸ ಮಾಡಿದ್ದಾರೆ, ಮಾಡುತ್ತಿದ್ದಾರೆ. ಅವರ ಕೆಲಸಗಳಿಗೆ ನಾನು ಮನಸೋತಿದ್ದೇನೆ. ಹೀಗಾಗಿ ನಾನು ಮೋದಿ ಭಕ್ತ ಎಂದು ಹೇಳಿಕೊಳ್ಳಲು ನನಗೆ ಯಾವುದೇ ಸಂಕೋಚವಿಲ್ಲ’ ಎಂದು ನಟ ಅನಂತ್ ನಾಗ್ ಬಹಿರಂಗವಾಗಿ ಘೋಷಿಸಿದ್ದಾರೆ. ಕರ್ನಾಟಕ ಮಾಧ್ಯಮ ಅಕಾಡೆಮಿ ಬೆಂಗಳೂರು ಆಶ್ರಯದಲ್ಲಿ ‘ರಾಷ್ಟ್ರೀಯ … Continued

ಶ್ರದ್ಧಾ ಕೊಲೆ ಪ್ರಕರಣ: ಮೆಹ್ರೌಲಿ ಅರಣ್ಯದಿಂದ 10 ಮೂಳೆಗಳನ್ನು ಪತ್ತೆ ಹಚ್ಚಿದ ಪೊಲೀಸರು

ನವದೆಹಲಿ: ದೆಹಲಿಯ ಚತ್ತರ್‌ಪುರ ಪ್ರದೇಶದಲ್ಲಿ ನಡೆದ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಮತ್ತೊಂದು ಮಹತ್ವದ ಬೆಳವಣಿಗೆಯಲ್ಲಿ ಪೊಲೀಸ್ ಅಧಿಕಾರಿಗಳು ಮೆಹ್ರೌಲಿ ಅರಣ್ಯ ಪ್ರದೇಶದಿಂದ 10 ಮೂಳೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಭಾಗಗಳನ್ನು ಮೃತ ಶ್ರದ್ಧಾಳ ತಂದೆ ವಿಕಾಸ್ ವಾಕರ್ ಅವರ ಡಿಎನ್‌ಎ ಜೊತೆ ಹೊಂದಾಣಿಕೆ ಮಾಡಿ ನೋಡಲಾಗುತ್ತದೆ. ಮೂಲಗಳ ಪ್ರಕಾರ, ಪೊಲೀಸ್ ಅಧಿಕಾರಿಗಳು, ತನಿಖೆಯ … Continued

ಪರೇಶ ಮೇಸ್ತ ಸಾವು ಪ್ರಕರಣ: ಆಕ್ಷೇಪಣೆ ಸಲ್ಲಿಸುವುದಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ

ಹೊನ್ನಾವರ: ಪರೇಶ ಮೇಸ್ತ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (CBI) ಹೊನ್ನಾವರ ನ್ಯಾಯಾಲಯಕ್ಕೆ ಸಲ್ಲಿಸಿರುವ ʼಬಿʼ ರಿಪೋರ್ಟ್‌ಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿ ಪರೇಶ ಮೇಸ್ತಾ ತಂದೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಪರೇಶ್ ಮೇಸ್ತ ಸಾವಿನ ಪ್ರಕರಣದಲ್ಲಿ ಸಿಬಿಐ ತನಿಖಾ ತಂಡವು ಅಕ್ಟೋಬರ್ 6ರಂದು ಹೊನ್ನಾವರದ ನ್ಯಾಯಾಲಯಕ್ಕೆ ʼಬಿ‌ʼ ರಿಪೋರ್ಟ್ … Continued

ಸುಬ್ರಹ್ಮಣ್ಯ: ನದಿಯಲ್ಲಿ ಮುಳುಗಿ ಇಬ್ಬರು ಸಾವು

ಸುಬ್ರಹ್ಮಣ್ಯ : ನದಿಯಲ್ಲಿ ಮುಳುಗಿ ಇಬ್ಬರು ಮೃತಪಟ್ಟ ಘಟನೆ ಸುಬ್ರಹ್ಮಣ್ಯದ ಯೇನೆಕಲ್ಲಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮೃತರನ್ನು ಧರ್ಮಪಾಲ ಪರಮಲೆ (46) ಹಾಗೂ ಬೆಳ್ಯಪ್ಪ ಚಳ್ಳಂಗಾರು ಚೊಕ್ಕಾಡಿ (49) ಎಂದು ಗುರುತಿಸಲಾಗಿದೆ. ಸುಬ್ರಹ್ಮಣ್ಯ ಗ್ರಾಮ ಪಂಚಾಯತದ ಕಸ ವಿಲೇವಾರಿ ಘಟಕದಲ್ಲಿ ಧರ್ಮಪಾಲ ಅವರು ದಿನಗೂಲಿ ನೌಕರರಾಗಿ ಕೆಲಸ ಮಾಡುತ್ತಿದ್ದು ಎಂದು ಹೇಳಲಾಗಿದೆ. ಮಂಗಳವಾರ ರಾತ್ರಿ ಹೊಳೆಯಲ್ಲಿದ್ದ … Continued

ಕಾಂತಾರ ಸಿನೆಮಾದ ದೈವದ ವೇಷಧಾರಿಯಾಗಿ ಕಾರ್ಯಕ್ರಮಕ್ಕೆ ಬಂದ ತಹಶೀಲ್ದಾರ…! ಸೆಲ್ಫಿ ತೆಗೆದುಕೊಂಡ ಜಿಲ್ಲಾಧಿಕಾರಿ…!!

ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ’ ಸಿನೆಮಾ ಎಲ್ಲೆಡೆ ಮೋಡಿ ಮಾಡುತ್ತಿದೆ. ಮೊದಲು ಕನ್ನಡದಲ್ಲಿ ತೆರೆಕಂಡು ನಂತರ ತೆಲುಗು, ತಮಿಳು, ಹಿಂದಿ ಸೇರಿದಂತೆ ವಿವಿಧ ಭಾಷೆಗಳಿಗೆ ಡಬ್ ಆಗಿತ್ತು. ಬಹುಭಾಷಾ ಜನರು ಕೂಡ ಈ ಸಿನಿಮಾದಿಂದ ಪ್ರಭಾವಿತರಾಗುತ್ತಿದ್ದಾರೆ. ಆಂಧ್ರಪ್ರದೇಶದ ತಹಸೀಲ್ದಾರ್ ಒಬ್ಬರು ‘ಕಾಂತಾರ’ ಸಿನಿಮಾದ ರೀತಿಯ ಗೆಟಪ್ ಧರಿಸಿ ಕಾರ್ಯಕ್ರಮಕ್ಕೆ ಆಗಮಿಸಿದ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಾಗುತ್ತಿದ್ದಾರೆ..! ಗುಂಟೂರಿನ … Continued

ಪ್ರಿಯತಮೆ ಕೊಂದ ತಾಸುಗಳ ನಂತರ ಫೇಸ್‌ಬುಕ್ ಲೈವ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ಸಿಲ್‌ಗುರಿ: ದೆಹಲಿಯಲ್ಲಿ ವ್ಯಕ್ತಿಯೊಬ್ಬ ತನ್ನ ಪ್ರಿಯಕರಳನ್ನು ಕೊಂದು ದೇಹವನ್ನು 35 ತುಂಡುಗಳಾಗಿ ಕತ್ತರಿಸಿದ ಭೀಕರ ಹತ್ಯೆಯ ಸುದ್ದಿಯಿಂದ ದೇಶವು ಆಘಾತಕ್ಕೊಳಗಾದ ಒಂದು ದಿನದ ನಂತರ, ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಅಂತಹುದೇ ಘಟನೆ ವರದಿಯಾಗಿದೆ. ವ್ಯಕ್ತಿಯೊಬ್ಬ ತನ್ನ ಗೆಳತಿಯನ್ನು ಕೊಂದ ಗಂಟೆಗಳ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ. ಸೋಮವಾರ, ಸಿಲಿಗುರಿ ಪೊಲೀಸರು ಪ್ರಿಯಕರನಿಂದ ಹತ್ಯೆಗೀಡಾದ ರಿಯಾ … Continued

ಲೈಂಗಿಕ ಕಿರುಕುಳದಿಂದ ಪಾರಾಗಲು ವೇಗವಾಗಿ ಚಲಿಸುತ್ತಿದ್ದ ಆಟೋರಿಕ್ಷಾದಿಂದ ಜಿಗಿದ ಹುಡುಗಿ | ದೃಶ್ಯ ಸಿಸಿಟಿವಯಲ್ಲಿ ಸೆರೆ

ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಆಟೋ ಚಾಲಕ ತನಗೆ ಕಿರುಕುಳ ನೀಡಿದ್ದಾನೆಂದು ಆರೋಪಿಸಿ ಬಾಲಕಿಯೊಬ್ಬಳು ವೇಗವಾಗಿ ಹೋಗುತ್ತಿದ್ದ ಆಟೋರಿಕ್ಷಾದಿಂದ ಜಿಗಿದಿದ್ದಾಳೆ. ಮೂಲಗಳ ಪ್ರಕಾರ ಅಪ್ರಾಪ್ತ ಬಾಲಕಿಯು ಅಪರಾಧದಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಚಲಿಸುತ್ತಿದ್ದ ವಾಹನದಿಂದ ಕೆಳಗಿಳಿದಿದ್ದಾಳೆ. ಜನನಿಬಿಡ ಮುಖ್ಯ ರಸ್ತೆಯಲ್ಲಿ ಜಿಗಿದ ಬಾಲಕಿ ಗಾಯಗೊಂಡಿದ್ದಾಳೆ. ಆರೋಪಿ ಆಟೋ ಚಾಲಕನನ್ನು ಸೈಯದ್ ಅಕ್ಬರ್ ಹಮೀದ್ ಎಂದು ಗುರುತಿಸಲಾಗಿದ್ದು, ಆತನನ್ನು ಬಂಧಿಸಲಾಗಿದೆ. ಚಾಲಕನ … Continued

ಪ್ರಧಾನಿ ಮೋದಿ ಭೇಟಿಯ ನಂತರ ಭಾರತೀಯರಿಗೆ ಪ್ರತಿವರ್ಷ 3,000 ವೀಸಾ ನೀಡಲು ಒಪ್ಪಿದ ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌

ಲಂಡನ್‌: ಬ್ರಿಟನ್‌ ಪ್ರಧಾನಿ ರಿಷಿ ಸುನಕ್ ಅವರು ಪ್ರತಿ ವರ್ಷ ಭಾರತದಿಂದ ಯುವ ವೃತ್ತಿಪರರಿಗೆ ಬ್ರಿಟನ್‌ನಲ್ಲಿ ಕೆಲಸ ಮಾಡಲು 3,000 ವೀಸಾಗಳನ್ನು ನೀಡುವುದಕ್ಕೆ ಚಾಲನೆ ನೀಡಿದ್ದಾರೆ. ಇಂತಹ ಯೋಜನೆಯಿಂದ ಪ್ರಯೋಜನ ಪಡೆಯುವ ಮೊದಲ ರಾಷ್ಟ್ರ ಭಾರತ ಎಂದು ಬ್ರಿಟಿಷ್ ಸರ್ಕಾರ ಹೇಳಿದೆ, ಕಳೆದ ವರ್ಷ ಒಪ್ಪಿಕೊಂಡ ಯುಕೆ-ಇಂಡಿಯಾ ವಲಸೆ ಮತ್ತು ಮೊಬಿಲಿಟಿ ಪಾಲುದಾರಿಕೆಯ ಬಲವನ್ನು ಇದು … Continued

ಭಾರತದಲ್ಲಿ ವಾಸಿಸುವ ಪ್ರತಿಯೊಬ್ಬರೂ ‘ಹಿಂದೂಗಳು’, ಎಲ್ಲ ಭಾರತೀಯರ ಡಿಎನ್‌ಎ ಒಂದೇ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ನವದೆಹಲಿ: ದೇಶದಲ್ಲಿ ವಾಸಿಸುವ ಪ್ರತಿಯೊಬ್ಬ ವ್ಯಕ್ತಿಯೂ ‘ಹಿಂದೂ’, ಎಲ್ಲಾ ಭಾರತೀಯರ ಡಿಎನ್‌ಎ ಒಂದೇ ಆಗಿದೆ ಮತ್ತು ಅವರ ಆಚರಣೆಗಳನ್ನು ಯಾರೂ ಮಾರ್ಪಡಿಸುವ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ ಭಾಗವತ್ ಮಂಗಳವಾರ ಹೇಳಿದ್ದಾರೆ. 1925 ರಿಂದ (ಆರ್‌ಎಸ್‌ಎಸ್ ಸ್ಥಾಪನೆಯಾದಾಗ) ನಾವು ಭಾರತದಲ್ಲಿ ವಾಸಿಸುವ ಪ್ರತಿಯೊಬ್ಬರೂ ಹಿಂದೂಗಳು ಎಂದು ಹೇಳುತ್ತಿದ್ದೇವೆ. ಭಾರತವನ್ನು ತಮ್ಮ … Continued

ಶ್ರದ್ಧಾ ಭೀಕರ ಕೊಲೆ ಪ್ರಕರಣ : ಲೈವ್-ಇನ್ ಪಾರ್ಟ್ನರ್‌ ಯುವತಿ ಕೊಂದ ವ್ಯಕ್ತಿ ಸಾಮಾಜಿಕ ಮಾಧ್ಯಮದಲ್ಲಿ ತನ್ನನ್ನು ಹೇಗೆ ಚಿತ್ರಿಸಿಕೊಂಡಿದ್ದನೆಂದರೆ…

ನವದೆಹಲಿ: ದೆಹಲಿಯಲ್ಲಿ 26 ವರ್ಷದ ಯುವತಿಯೊಬ್ಬಳನ್ನು ಆಕೆಯ 28 ವರ್ಷದ ಲಿವ್-ಇನ್ ಸಂಬಂಧದ ಪಾಲುದಾರ ಭೀಕರವಾಗಿ ಹತ್ಯೆ ಮಾಡಿದ ಘಟನೆ ದೇಶಾದ್ಯಂತ ಆಘಾತ ತರಂಗಗಳನ್ನು ಕಳುಹಿಸಿದೆ. ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾ ಎಂಬಾತ ತನ್ನ ಗೆಳತಿಯನ್ನು ಕತ್ತು ಹಿಸುಕಿ ಕೊಂದು, ಆಕೆಯ ದೇಹವನ್ನು ೩೫ ತುಂಡುಗಳಾಗಿ ಕತ್ತರಿಸಿ, ಮೆಹ್ರೌಲಿ ಅರಣ್ಯದಲ್ಲಿ ಚೆಲ್ಲಾಪಿಲ್ಲಿ ಮಾಡಿ ಬಿಸಾಕಿದ್ದ. ಭೀಕರ … Continued