ಸುಬ್ರಹ್ಮಣ್ಯ : ನದಿಯಲ್ಲಿ ಮುಳುಗಿ ಇಬ್ಬರು ಮೃತಪಟ್ಟ ಘಟನೆ ಸುಬ್ರಹ್ಮಣ್ಯದ ಯೇನೆಕಲ್ಲಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಮೃತರನ್ನು ಧರ್ಮಪಾಲ ಪರಮಲೆ (46) ಹಾಗೂ ಬೆಳ್ಯಪ್ಪ ಚಳ್ಳಂಗಾರು ಚೊಕ್ಕಾಡಿ (49) ಎಂದು ಗುರುತಿಸಲಾಗಿದೆ. ಸುಬ್ರಹ್ಮಣ್ಯ ಗ್ರಾಮ ಪಂಚಾಯತದ ಕಸ ವಿಲೇವಾರಿ ಘಟಕದಲ್ಲಿ ಧರ್ಮಪಾಲ ಅವರು ದಿನಗೂಲಿ ನೌಕರರಾಗಿ ಕೆಲಸ ಮಾಡುತ್ತಿದ್ದು ಎಂದು ಹೇಳಲಾಗಿದೆ. ಮಂಗಳವಾರ ರಾತ್ರಿ ಹೊಳೆಯಲ್ಲಿದ್ದ ಪಂಪ್ನ ಫುಟ್ವಾಲ್ ಹೊರ ತೆಗೆಯಲು ಇಬ್ಬರು ನೀರಿಗಿಳಿದಿದ್ದರು ಎನ್ನಲಾಗಿದೆ. ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ದ್ದು ನೀರಿನಲ್ಲಿ ಮುಳುಗಿರಬಹುದೆಂದು ಶಂಕಿಸಲಾಗಿದೆ. ಘಟನೆ ಸಂಬಂಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ತಿಳಿಸಲಾಗಿದೆ. ಮೃತದೇಹಗಳನ್ನು ನೀರಿನಿಂದ ಹೊರ ತೆಗೆಯಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ